ಮೇಕ್‌ಶಿಫ್ಟ್ ಆಸ್ಪತ್ರೆ ದೊಡ್ಡಬಳ್ಳಾಪುರ ತಾಲ್ಲೂಕಿನ ಜನತೆಗೆ ವರದಾನ: ಕಂದಾಯ ಸಚಿವ ಆರ್.ಅಶೋಕ್

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ 100 ಆಕ್ಸಿಜನೇಟೆಡ್ ಹಾಸಿಗೆಗಳ ಮೇಕ್‌ಶಿಫ್ಟ್ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು, ಕೋವಿಡ್ ಮೂರನೇ ಅಲೆ ತಡೆಯಲು ಅನುಕೂಲಕರವಾಗಲಿದೆ ಹಾಗೂ ಈ ಭಾಗದ ಜನರಿಗೆ ಆಸ್ಪತ್ರೆಯು ವರದಾನವಾಗಲಿದೆ ಎಂದು ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ್ ತಿಳಿಸಿದರು.

ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ 100 ಆಕ್ಸಿಜನೇಟೆಡ್ ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆಯ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಲೆನೆವೊ, ಗೋಲ್ಡ್‌ಮ್ಯಾನ್ ಸ್ಯಾಚಸ್ ಕಂಪನಿಗಳು ಸಿ.ಎಸ್.ಆರ್. ನಿಧಿಯಡಿ ಒದಗಿಸಿರುವ ಅನುದಾನದಲ್ಲಿ ಮಾಡ್ಯುಲಸ್ ಸಂಸ್ಥೆಯವರು ಸಿದ್ಧಪಡಿಸಿರುವ ವಿನ್ಯಾಸದಂತೆ ಅಂದಾಜು ರೂ. 4 ಕೋಟಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದರು. ಮೇಕ್‌ಶಿಫ್ಟ್ ಆಸ್ಪತ್ರೆಯಲ್ಲಿ, 70 ಆಕ್ಸಿಜನ್ ಬೆಡ್‌ಗಳು, 20 ಐ.ಸಿ.ಯು.(ತೀವ್ರ ನಿಗಾ ಘಟಕ) ಬೆಡ್‌ಗಳು, 10 ವೆಂಟಿಲೇಟರ್ ಬೆಡ್‌ಗಳು ಹಾಗೂ 2 ಕೆ.ಎಲ್. ಆಕ್ಸಿಜನ್ ಜನರೇಟರ್ ವ್ಯವಸ್ಥೆ ಹೊಂದಿರಲಿದ್ದು, ಈ ಆಸ್ಪತ್ರೆಯ ಲೇಔಟ್ ನಿರ್ಮಾಣ ಕಾಮಗಾರಿಯನ್ನು ಇಂಡೋ ಎಂಐಎಂ ಪ್ರೈವೇಟ್ ಲಿಮಿಟೆಡ್, ದೊಡ್ಡಬಳ್ಳಾಪುರ ಇವರು ನಿರ್ವಹಿಸಲಿದ್ದಾರೆ ಎಂದು ಹೇಳಿದರಲ್ಲದೆ, ಈ ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿ, ಭಾರತ ಸರ್ಕಾರ, ಅಮೇರಿಕನ್ ಇಂಡಿಯಾ ಫೌಂಡೇಶನ್ ಮತ್ತು ಯು.ಎನ್.ಡಿ.ಪಿ(UNDP) ಸಂಸ್ಥೆಗೆ ವಹಿಸಲಾಗಿದೆ ಎಂದು ತಿಳಿಸಿದರು. 

ಜಿಲ್ಲೆಯಲ್ಲಿ “ವೈದ್ಯರ ನಡೆ, ಹಳ್ಳಿ ಕಡೆ” ಎಂಬ ವಿನೂತನ ಕಾರ್ಯಕ್ರಮದಡಿಯಲ್ಲಿ ಪ್ರತಿ ತಾಲ್ಲೂಕಿಗೂ 15 ಮೊಬೈಲ್ ಕ್ಲಿನಿಕ್‌ಗಳ ಮೂಲಕ ಒಂದು ವಾರದಲ್ಲಿ ಹಳ್ಳಿಯೊಂದಕ್ಕೆ ಎರಡು ಬಾರಿ ಭೇಟಿ ನೀಡಿ, ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಇದುವರಿಗೆ ಒಟ್ಟು 90,218 ಜನರ ಆರೋಗ್ಯ ತಪಾಸಣೆ ಮಾಡಲಾಗಿದೆ. 16,045 ಜನರಿಗೆ RAT ಮತ್ತು ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ನಡೆಸಲಾಗಿದ್ದು, 1908 ಮಂದಿಗೆ ಕೊರೋನಾ ಸೋಂಕು ದೃಡಪಟ್ಟಿದ್ದು, ಇದರಿಂದ ಸೋಂಕು ಹೆಚ್ಚಾಗಿ ಪಸರಿಸದಂತೆ ತಡೆಯುವ ಕೆಲಸ ಮಾಡಲಾಗುತ್ತಿದೆ ಎಂದ ಅವರು ಜಿಲ್ಲಾಧಿಕಾರಿ ಹಾಗೂ ವೈದ್ಯರ ತಂಡಗಳಿಗೆ ಅಭಿನಂದನೆ ತಿಳಿಸಿದರು. 

ತಜ್ಞರ ವರದಿ ಆಧರಿಸಿ ಲಾಕ್‌ಡೌನ್ ವಿಸ್ತರಣೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರಲ್ಲದೆ, ಲಾಕ್‌ಡೌನ್ ಮಾಡಿದ್ದರ ಫಲವಾಗಿ ಕೋವಿಡ್ ಸೋಂಕು ಪಸರಿಕೆ ಪ್ರಮಾಣ ಕಡಿಮೆಯಾಗಿದೆ ಎಂದರು.

ಮುಂದಿನ ದಿನಗಳಲ್ಲಿಯೂ ಕೋವಿಡ್ ಸೋಂಕು ಇನ್ನಷ್ಟೂ ಕಡಿಮೆಯಾದರೆ ಹಂತ ಹಂತವಾಗಿ ಕೆಲವೊಂದು ವಲಯಗಳಲ್ಲಿ ಲಾಕ್‌ಡೌನ್ ಸಡಿಲಗೊಳಿಸಬಹುದಾಗಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು. 

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಮೇಕ್‌ಶಿಫ್ಟ್ ಆಸ್ಪತ್ರೆಯನ್ನು ನಿರ್ಮಿಸುತ್ತಿರುವುದರಿಂದ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಬಹಳ ಅನುಕೂಲವಾಗಲಿದ್ದು, ತಾಲ್ಲೂಕು ಆಸ್ಪತ್ರೆಯಲ್ಲಿಯೇ ಸಿಟಿ ಸ್ಕ್ಯಾನಿಂಗ್ ಯಂತ್ರ ಅಳವಡಿಸಲು ವಿಧಾನಸಭಾ ಸದಸ್ಯರ ಅನುದಾನದಿಂದ 75 ಲಕ್ಷ ರೂಪಾಯಿಯನ್ನು ಜಿಲ್ಲಾಡಳಿತಕ್ಕೆ ನೀಡಲಾಗುವುದು, ಇದರಿಂದ ಬಡವರಿಗೆ ಅನುಕೂಲವಾಗಲಿದೆ ಎಂದರು. 

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯ ರವಿ, ರಮೇಶ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಉಪ ವಿಭಾಗಾಧಿಕಾರಿ ಅರುಳ್‌‌‌ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಡಿವೈಎಸ್ಪಿ ಟಿ.ರಂಗಪ್ಪ, ತಹಶೀಲ್ದಾರ್ ಟಿ.ಎಸ್. ಶಿವರಾಜ್, ತಾಲ್ಲೂಕು ಅರೊಗ್ಯಾಧಿಕಾರಿ ಡಾ.ಪರಮೇಶ್ವರ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಟಫೆ ಕಂಪನಿ ವತಿಯಿಂದ ಜಿಲ್ಲಾಡಳಿತಕ್ಕೆ ಹತ್ತು ಆಕ್ಸಿಜನ್ ಕಾನ್ಸನ್‌ಟ್ರೇಟರ್‌ಗಳನ್ನು ಹಸ್ತಾಂತರಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬಿಹಾರ ಚುನಾವಣೆ ಫಲಿತಾಂಶ: NDAಗೆ ಭರ್ಜರಿ ಮುನ್ನಡೆ

ಬಿಹಾರ ಚುನಾವಣೆ ಫಲಿತಾಂಶ: NDAಗೆ ಭರ್ಜರಿ ಮುನ್ನಡೆ

ತೀವ್ರ ಜಿದ್ದಾಜಿದ್ದಿಯಿಂದ ನಡೆದ ಬಿಹಾರ ವಿಧಾನಸಭಾ ಚುನಾವಣೆ (Bihar election,) ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಎನ್‌ಡಿಎಗೆ ಭರ್ಜರಿ ಮುನ್ಸೂಚನೆ ದೊರೆತಿದೆ.

[ccc_my_favorite_select_button post_id="116159"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!