ಮೇಕ್‌ಶಿಫ್ಟ್ ಆಸ್ಪತ್ರೆ ದೊಡ್ಡಬಳ್ಳಾಪುರ ತಾಲ್ಲೂಕಿನ ಜನತೆಗೆ ವರದಾನ: ಕಂದಾಯ ಸಚಿವ ಆರ್.ಅಶೋಕ್

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ 100 ಆಕ್ಸಿಜನೇಟೆಡ್ ಹಾಸಿಗೆಗಳ ಮೇಕ್‌ಶಿಫ್ಟ್ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು, ಕೋವಿಡ್ ಮೂರನೇ ಅಲೆ ತಡೆಯಲು ಅನುಕೂಲಕರವಾಗಲಿದೆ ಹಾಗೂ ಈ ಭಾಗದ ಜನರಿಗೆ ಆಸ್ಪತ್ರೆಯು ವರದಾನವಾಗಲಿದೆ ಎಂದು ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ್ ತಿಳಿಸಿದರು.

ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ 100 ಆಕ್ಸಿಜನೇಟೆಡ್ ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆಯ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಲೆನೆವೊ, ಗೋಲ್ಡ್‌ಮ್ಯಾನ್ ಸ್ಯಾಚಸ್ ಕಂಪನಿಗಳು ಸಿ.ಎಸ್.ಆರ್. ನಿಧಿಯಡಿ ಒದಗಿಸಿರುವ ಅನುದಾನದಲ್ಲಿ ಮಾಡ್ಯುಲಸ್ ಸಂಸ್ಥೆಯವರು ಸಿದ್ಧಪಡಿಸಿರುವ ವಿನ್ಯಾಸದಂತೆ ಅಂದಾಜು ರೂ. 4 ಕೋಟಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದರು. ಮೇಕ್‌ಶಿಫ್ಟ್ ಆಸ್ಪತ್ರೆಯಲ್ಲಿ, 70 ಆಕ್ಸಿಜನ್ ಬೆಡ್‌ಗಳು, 20 ಐ.ಸಿ.ಯು.(ತೀವ್ರ ನಿಗಾ ಘಟಕ) ಬೆಡ್‌ಗಳು, 10 ವೆಂಟಿಲೇಟರ್ ಬೆಡ್‌ಗಳು ಹಾಗೂ 2 ಕೆ.ಎಲ್. ಆಕ್ಸಿಜನ್ ಜನರೇಟರ್ ವ್ಯವಸ್ಥೆ ಹೊಂದಿರಲಿದ್ದು, ಈ ಆಸ್ಪತ್ರೆಯ ಲೇಔಟ್ ನಿರ್ಮಾಣ ಕಾಮಗಾರಿಯನ್ನು ಇಂಡೋ ಎಂಐಎಂ ಪ್ರೈವೇಟ್ ಲಿಮಿಟೆಡ್, ದೊಡ್ಡಬಳ್ಳಾಪುರ ಇವರು ನಿರ್ವಹಿಸಲಿದ್ದಾರೆ ಎಂದು ಹೇಳಿದರಲ್ಲದೆ, ಈ ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿ, ಭಾರತ ಸರ್ಕಾರ, ಅಮೇರಿಕನ್ ಇಂಡಿಯಾ ಫೌಂಡೇಶನ್ ಮತ್ತು ಯು.ಎನ್.ಡಿ.ಪಿ(UNDP) ಸಂಸ್ಥೆಗೆ ವಹಿಸಲಾಗಿದೆ ಎಂದು ತಿಳಿಸಿದರು. 

ಜಿಲ್ಲೆಯಲ್ಲಿ “ವೈದ್ಯರ ನಡೆ, ಹಳ್ಳಿ ಕಡೆ” ಎಂಬ ವಿನೂತನ ಕಾರ್ಯಕ್ರಮದಡಿಯಲ್ಲಿ ಪ್ರತಿ ತಾಲ್ಲೂಕಿಗೂ 15 ಮೊಬೈಲ್ ಕ್ಲಿನಿಕ್‌ಗಳ ಮೂಲಕ ಒಂದು ವಾರದಲ್ಲಿ ಹಳ್ಳಿಯೊಂದಕ್ಕೆ ಎರಡು ಬಾರಿ ಭೇಟಿ ನೀಡಿ, ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಇದುವರಿಗೆ ಒಟ್ಟು 90,218 ಜನರ ಆರೋಗ್ಯ ತಪಾಸಣೆ ಮಾಡಲಾಗಿದೆ. 16,045 ಜನರಿಗೆ RAT ಮತ್ತು ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ನಡೆಸಲಾಗಿದ್ದು, 1908 ಮಂದಿಗೆ ಕೊರೋನಾ ಸೋಂಕು ದೃಡಪಟ್ಟಿದ್ದು, ಇದರಿಂದ ಸೋಂಕು ಹೆಚ್ಚಾಗಿ ಪಸರಿಸದಂತೆ ತಡೆಯುವ ಕೆಲಸ ಮಾಡಲಾಗುತ್ತಿದೆ ಎಂದ ಅವರು ಜಿಲ್ಲಾಧಿಕಾರಿ ಹಾಗೂ ವೈದ್ಯರ ತಂಡಗಳಿಗೆ ಅಭಿನಂದನೆ ತಿಳಿಸಿದರು. 

ತಜ್ಞರ ವರದಿ ಆಧರಿಸಿ ಲಾಕ್‌ಡೌನ್ ವಿಸ್ತರಣೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರಲ್ಲದೆ, ಲಾಕ್‌ಡೌನ್ ಮಾಡಿದ್ದರ ಫಲವಾಗಿ ಕೋವಿಡ್ ಸೋಂಕು ಪಸರಿಕೆ ಪ್ರಮಾಣ ಕಡಿಮೆಯಾಗಿದೆ ಎಂದರು.

ಮುಂದಿನ ದಿನಗಳಲ್ಲಿಯೂ ಕೋವಿಡ್ ಸೋಂಕು ಇನ್ನಷ್ಟೂ ಕಡಿಮೆಯಾದರೆ ಹಂತ ಹಂತವಾಗಿ ಕೆಲವೊಂದು ವಲಯಗಳಲ್ಲಿ ಲಾಕ್‌ಡೌನ್ ಸಡಿಲಗೊಳಿಸಬಹುದಾಗಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು. 

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಮೇಕ್‌ಶಿಫ್ಟ್ ಆಸ್ಪತ್ರೆಯನ್ನು ನಿರ್ಮಿಸುತ್ತಿರುವುದರಿಂದ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಬಹಳ ಅನುಕೂಲವಾಗಲಿದ್ದು, ತಾಲ್ಲೂಕು ಆಸ್ಪತ್ರೆಯಲ್ಲಿಯೇ ಸಿಟಿ ಸ್ಕ್ಯಾನಿಂಗ್ ಯಂತ್ರ ಅಳವಡಿಸಲು ವಿಧಾನಸಭಾ ಸದಸ್ಯರ ಅನುದಾನದಿಂದ 75 ಲಕ್ಷ ರೂಪಾಯಿಯನ್ನು ಜಿಲ್ಲಾಡಳಿತಕ್ಕೆ ನೀಡಲಾಗುವುದು, ಇದರಿಂದ ಬಡವರಿಗೆ ಅನುಕೂಲವಾಗಲಿದೆ ಎಂದರು. 

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯ ರವಿ, ರಮೇಶ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಉಪ ವಿಭಾಗಾಧಿಕಾರಿ ಅರುಳ್‌‌‌ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಡಿವೈಎಸ್ಪಿ ಟಿ.ರಂಗಪ್ಪ, ತಹಶೀಲ್ದಾರ್ ಟಿ.ಎಸ್. ಶಿವರಾಜ್, ತಾಲ್ಲೂಕು ಅರೊಗ್ಯಾಧಿಕಾರಿ ಡಾ.ಪರಮೇಶ್ವರ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಟಫೆ ಕಂಪನಿ ವತಿಯಿಂದ ಜಿಲ್ಲಾಡಳಿತಕ್ಕೆ ಹತ್ತು ಆಕ್ಸಿಜನ್ ಕಾನ್ಸನ್‌ಟ್ರೇಟರ್‌ಗಳನ್ನು ಹಸ್ತಾಂತರಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ನಾಳೆ ಮತ್ತೆ ದೊಡ್ಡಬಳ್ಳಾಪುರದಲ್ಲಿ ನೇಕಾರರ ಭವನ ಶಂಕುಸ್ಥಾಪನೆ..!

ನಾಳೆ ಮತ್ತೆ ದೊಡ್ಡಬಳ್ಳಾಪುರದಲ್ಲಿ ನೇಕಾರರ ಭವನ ಶಂಕುಸ್ಥಾಪನೆ..!

ನಿನ್ನೆಯಷ್ಟೇ ನೇಕಾರರ (Weavers) ಭವನ ಶಂಕುಸ್ಥಾಪನೆ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೈಡ್ರಾಮವನ್ನೆ ಸೃಷ್ಟಿಸಿ ತಣ್ಣಗಾಗಿದೆ.

[ccc_my_favorite_select_button post_id="118262"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!