ಮಂಡ್ಯ: ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಅಸ್ಥಿಗಳನ್ನು ಸಂಬಂಧಿಗಳು ತೆಗೆದುಕೊಂಡು ಹೋಗದೆ ಚಿತಾಗಾರದಲ್ಲಿ ಹಾಗೇ ಉಳಿದ್ದ ಹಿನ್ನೆಲೆ, ಇಂದು ಕಂದಾಯ ಸಚಿವ ಆರ್.ಅಶೋಕ್ ಐನೂರಕ್ಕು ಹೆಚ್ಚು ಅಸ್ಥಿಗಳನ್ನು ಕಾವೇರಿ ನದಿಯಲ್ಲಿ ವಿಸರ್ಜಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಕೋವಿಡ್ ನೋವು, ಸಂಕಷ್ಟದ ಜೊತೆಗೆ ಮಾನವೀಯತೆಯ ಪಾಠವನ್ನು ಕಲಿಸಿದೆ. ಹಲವು ಕುಟುಂಬಗಳು ತಮ್ಮವರನ್ನ ಕಳೆದುಕೊಂಡು ಆಘಾತದಲ್ಲಿವೆ. ಆದರೆ ಅವರ್ಯಾರು ಅನಾಥರಲ್ಲ. ಕುಟುಂಬಸ್ಥರು ತೆಗೆದುಕೊಂಡು ಹೋಗದ ಕಾರಣ ಸರ್ಕಾರವೇ ಆ ಸ್ಥಾನದಲ್ಲಿ ನಿಂತು ಆ ಅಸ್ಥಿಗಳಿಗೆ ಗೌರವಪೂರ್ವಕ ಹಾಗೂ ವಿಧಿವತ್ತಾದ ಮುಕ್ತಿ ನೀಡಬೇಕಿದೆ. ಹೀಗಾಗಿ ಇಂದು ಅಂತಹ ಐದು ನೂರಕ್ಕೂ ಅಧಿಕ ಜನರ ಅಸ್ಥಿಯನ್ನ ಕಾವೇರಿ ನದಿಯಲ್ಲಿ ಸಾಂಪ್ರದಾಯಿಕ ವಿಧಿ ವಿಧಾನಗಳ ಮೂಲಕ ವಿಸರ್ಜನೆ ಮಾಡಲಾಯಿತು. ಕಂದಾಯ ಸಚಿವನಾಗಿ ನನ್ನ ಕರ್ತವ್ಯವನ್ನ ನಿಭಾಯಿಸಿದ್ದೇನೆ ಎಂದಿದ್ದಾರೆ.
ಈ ವೇಳೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….