ಮೇ ತಿಂಗಳಲ್ಲಿ ಹಿಂದೆಂದೂ ಇಲ್ಲದಷ್ಟು ಪ್ರಮಾಣದಲ್ಲಿ 114.8 ಮೆಟ್ರಿಕ್ ಟನ್ ಸರಕು ಸಾಗಣೆ ಮಾಡಿದ ರೈಲ್ವೆ

ಬೆಂಗಳೂರು: ಸರಕು ಸಾಗಣೆ ಅಂಕಿ ಅಂಶಗಳಲ್ಲಿ ಭಾರತೀಯ ರೈಲ್ವೆ ವೇಗ ಕಾಯ್ದುಕೊಂಡಿದ್ದು, 2021ರ ಮೇ ನಲ್ಲಿ ಕೋವಿಡ್ ಸವಾಲುಗಳ ಹೊರತಾಗಿಯೂ ಗಳಿಕೆ ಮತ್ತು ಲೋಡಿಂಗ್ ನಲ್ಲಿ ಉತ್ತಮ ಸಾಧನೆ ಮಾಡಿದೆ.

ಅಭಿಯಾನದ ಮಾದರಿಯಲ್ಲಿ ರೈಲ್ವೆ ಕಾರ್ಯನಿರ್ವಹಿಸುತ್ತಿದ್ದು, ಮೇ ತಿಂಗಳಲ್ಲಿ ಭಾರತೀಯ ರೈಲ್ವೆ ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಲೋಡಿಂಗ್ ಮಾಡಿದೆ.

2021 ರ ಮೇ ನಲ್ಲಿ 114.8 ಮೆಟ್ರಿಕ್ ಟನ್ ಸರಕು ಸಾಗಣೆ ಮಾಡಿದ್ದು, ಕಳೆದ 2019 ರ ಇದೇ ಮೇ ಗೆ ಹೋಲಿಸಿದರೆ ಶೇ 9.7 ರಷ್ಟು [104.6 ಮೆಟ್ಟಿಕ್ ಟನ್] ಪ್ರಗತಿ ಸಾಧಿಸಿದೆ. 

2021 ರ ಮೇ ನಲ್ಲಿ ಪ್ರಮುಖ ವಸ್ತುಗಳನ್ನು ಸಾಗಣೆ ಮಾಡಿದ್ದು, ಅದರಲ್ಲಿ 54.52 ದಶಲಕ್ಷ ಟನ್ ಕಲ್ಲಿದ್ದಲು, 15.12 ದಶಲಕ್ಷ ಟನ್ ಕಬ್ಬಿಣದ ಅದಿರು, 5.61 ದಶಲಕ್ಷ ಟನ್ ಆಹಾರ ಧಾನ್ಯಗಳು, 3.68 ದಶಲಕ್ಷ ಟನ್ ರಸಗೊಬ್ಬರ, 3.18 ದಶಲಕ್ಷ ಟನ್ ಖನಿಜ ತೈಲ, 5.36 ದಶಲಕ್ಷ ಟನ್ ಸೀಮೆಂಟ್ [ಕ್ಲಿಂಕೆರ್ ಹೊರತುಪಡಿಸಿ] ಮತ್ತು 4.2 ದಶಲಕ್ಷ ಟನ್ ಕ್ಲಿಂಕೆರ್ ಸಾಗಾಟ ಮಾಡಿದೆ.

2021  ರ ಮೇನಲ್ಲಿ ಭಾರತೀಯ ರೈಲ್ವೆ 11604.94 ಕೋಟಿ ರೂಪಾಯಿ ಆದಾಯವನ್ನು ಸರಕು ಸಾಗಣೆಯಿಂದ ಗಳಿಸಿದೆ.

2021ರ ಮೇ ನಲ್ಲಿ ವ್ಯಾಗನ್ ಟರ್ನ್ ನಲ್ಲಿ ಶೇ 26 ರಷ್ಟು ಸುಧಾರಣೆ ಕಂಡಿದ್ದು, 2018 ರ ಮೇ ನಲ್ಲಿ ವ್ಯಾಗನ್ ಟರ್ನ್ ಗೆ 6.46 ದಿನಗಳನ್ನು ತೆಗೆದುಕೊಳ್ಳಲಾಗಿತ್ತು. ಈ ಪ್ರಮಾಣ ಇದೀಗ 4.81 ದಿನಗಳಿಗೆ ತಗ್ಗಿದೆ.

ರೈಲ್ವೆ ಸರಕು ಸಾಗಣೆಯನ್ನು ಅತ್ಯಾಕರ್ಷಕಗೊಳಿಸಲು ಭಾರತೀಯ ರೈಲ್ವೆ ಹಲವಾರು ವಿನಾಯಿತಿ ಮತ್ತು ರಿಯಾಯಿತಿಗಳನ್ನು ನೀಡುತ್ತಿದೆ. ಹಾಲಿ ಇರುವ ರೈಲ್ವೆ ಸಂಪರ್ಕಜಾಲದಲ್ಲಿ ಸರಕು ಸಾಗಣೆ ರೈಲುಗಳ ವೇಗವನ್ನು ಸಹ ಹೆಚ್ಚಿಸಲಾಗಿದೆ. ರೈಲುಗಳ ವೇಗದಲ್ಲಿ ಆಗಿರುವ ಸುಧಾರಣೆಯಿಂದ ಎಲ್ಲಾ ಪಾಲುದಾರರಿಗೆ ವೆಚ್ಚ ಕಡಿತವಾಗಲಿದೆ. ಕಳೆದ 18 ತಿಂಗಳ ಅವಧಿಯಲ್ಲಿ ಸರಕು ಸಾಗಿಸುವ ರೈಲುಗಳ ವೇಗ ದ್ವಿಗುಣಗೊಂಡಿದೆ.

ಕೆಲವು ವಲಯಗಳಲ್ಲಿ [ನಾಲ್ಕು ವಲಯಗಳು] ಸರಕು ಸಾಗಣೆ ರೈಲುಗಳ ವೇಗ 50 ಕಿಲೋಮೀಟರ್ ಗಿಂತ ಹೆಚ್ಚಾಗಿದೆ. ಭೌಗೋಳಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೆಲವು ವಲಯಗಳಲ್ಲಿ ಸರಕು ಸಾಗಣೆ ರೈಲುಗಳು ಉತ್ತಮ ವೇಗ ಕಾಯ್ದುಕೊಂಡಿವೆ. 2021 ರ ಮೇ ನಲ್ಲಿ ಸರಾಸರಿ ವೇಗ 45.6 ಕಿಲೋಮೀಟರ್ ಇದೆ.ಇದಕ್ಕೂ ಹಿಂದಿನ ವರ್ಷ 36.19 ಕಿಲೋಮೀಟರ್ ನಷ್ಟಿದ್ದು,ಶೇ 26 ರಷ್ಟು ಪ್ರಗತಿ ಸಾಧಿಸಿದೆ.

ಕೋವಿಡ್ – 19 ಪರಿಸ್ಥಿತಿಯನ್ನು ಭಾರತೀಯ ರೈಲ್ವೆ ಒಂದು ಅವಕಾಶವನ್ನಾಗಿ ಮಾಡಿಕೊಂಡಿದ್ದು,ಎಲ್ಲಾ ಹಂತದಲ್ಲೂ ದಕ್ಷತೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಆದ್ಯತೆ ನೀಡಿದೆ.(ಸಂಗ್ರಹ ಚಿತ್ರಗಳನ್ನು ಬಳಸಲಾಗಿದೆ.)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ  ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

[ccc_my_favorite_select_button post_id="121409"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]