ಮೇ ತಿಂಗಳಲ್ಲಿ ಹಿಂದೆಂದೂ ಇಲ್ಲದಷ್ಟು ಪ್ರಮಾಣದಲ್ಲಿ 114.8 ಮೆಟ್ರಿಕ್ ಟನ್ ಸರಕು ಸಾಗಣೆ ಮಾಡಿದ ರೈಲ್ವೆ

ಬೆಂಗಳೂರು: ಸರಕು ಸಾಗಣೆ ಅಂಕಿ ಅಂಶಗಳಲ್ಲಿ ಭಾರತೀಯ ರೈಲ್ವೆ ವೇಗ ಕಾಯ್ದುಕೊಂಡಿದ್ದು, 2021ರ ಮೇ ನಲ್ಲಿ ಕೋವಿಡ್ ಸವಾಲುಗಳ ಹೊರತಾಗಿಯೂ ಗಳಿಕೆ ಮತ್ತು ಲೋಡಿಂಗ್ ನಲ್ಲಿ ಉತ್ತಮ ಸಾಧನೆ ಮಾಡಿದೆ.

ಅಭಿಯಾನದ ಮಾದರಿಯಲ್ಲಿ ರೈಲ್ವೆ ಕಾರ್ಯನಿರ್ವಹಿಸುತ್ತಿದ್ದು, ಮೇ ತಿಂಗಳಲ್ಲಿ ಭಾರತೀಯ ರೈಲ್ವೆ ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಲೋಡಿಂಗ್ ಮಾಡಿದೆ.

2021 ರ ಮೇ ನಲ್ಲಿ 114.8 ಮೆಟ್ರಿಕ್ ಟನ್ ಸರಕು ಸಾಗಣೆ ಮಾಡಿದ್ದು, ಕಳೆದ 2019 ರ ಇದೇ ಮೇ ಗೆ ಹೋಲಿಸಿದರೆ ಶೇ 9.7 ರಷ್ಟು [104.6 ಮೆಟ್ಟಿಕ್ ಟನ್] ಪ್ರಗತಿ ಸಾಧಿಸಿದೆ. 

2021 ರ ಮೇ ನಲ್ಲಿ ಪ್ರಮುಖ ವಸ್ತುಗಳನ್ನು ಸಾಗಣೆ ಮಾಡಿದ್ದು, ಅದರಲ್ಲಿ 54.52 ದಶಲಕ್ಷ ಟನ್ ಕಲ್ಲಿದ್ದಲು, 15.12 ದಶಲಕ್ಷ ಟನ್ ಕಬ್ಬಿಣದ ಅದಿರು, 5.61 ದಶಲಕ್ಷ ಟನ್ ಆಹಾರ ಧಾನ್ಯಗಳು, 3.68 ದಶಲಕ್ಷ ಟನ್ ರಸಗೊಬ್ಬರ, 3.18 ದಶಲಕ್ಷ ಟನ್ ಖನಿಜ ತೈಲ, 5.36 ದಶಲಕ್ಷ ಟನ್ ಸೀಮೆಂಟ್ [ಕ್ಲಿಂಕೆರ್ ಹೊರತುಪಡಿಸಿ] ಮತ್ತು 4.2 ದಶಲಕ್ಷ ಟನ್ ಕ್ಲಿಂಕೆರ್ ಸಾಗಾಟ ಮಾಡಿದೆ.

2021  ರ ಮೇನಲ್ಲಿ ಭಾರತೀಯ ರೈಲ್ವೆ 11604.94 ಕೋಟಿ ರೂಪಾಯಿ ಆದಾಯವನ್ನು ಸರಕು ಸಾಗಣೆಯಿಂದ ಗಳಿಸಿದೆ.

2021ರ ಮೇ ನಲ್ಲಿ ವ್ಯಾಗನ್ ಟರ್ನ್ ನಲ್ಲಿ ಶೇ 26 ರಷ್ಟು ಸುಧಾರಣೆ ಕಂಡಿದ್ದು, 2018 ರ ಮೇ ನಲ್ಲಿ ವ್ಯಾಗನ್ ಟರ್ನ್ ಗೆ 6.46 ದಿನಗಳನ್ನು ತೆಗೆದುಕೊಳ್ಳಲಾಗಿತ್ತು. ಈ ಪ್ರಮಾಣ ಇದೀಗ 4.81 ದಿನಗಳಿಗೆ ತಗ್ಗಿದೆ.

ರೈಲ್ವೆ ಸರಕು ಸಾಗಣೆಯನ್ನು ಅತ್ಯಾಕರ್ಷಕಗೊಳಿಸಲು ಭಾರತೀಯ ರೈಲ್ವೆ ಹಲವಾರು ವಿನಾಯಿತಿ ಮತ್ತು ರಿಯಾಯಿತಿಗಳನ್ನು ನೀಡುತ್ತಿದೆ. ಹಾಲಿ ಇರುವ ರೈಲ್ವೆ ಸಂಪರ್ಕಜಾಲದಲ್ಲಿ ಸರಕು ಸಾಗಣೆ ರೈಲುಗಳ ವೇಗವನ್ನು ಸಹ ಹೆಚ್ಚಿಸಲಾಗಿದೆ. ರೈಲುಗಳ ವೇಗದಲ್ಲಿ ಆಗಿರುವ ಸುಧಾರಣೆಯಿಂದ ಎಲ್ಲಾ ಪಾಲುದಾರರಿಗೆ ವೆಚ್ಚ ಕಡಿತವಾಗಲಿದೆ. ಕಳೆದ 18 ತಿಂಗಳ ಅವಧಿಯಲ್ಲಿ ಸರಕು ಸಾಗಿಸುವ ರೈಲುಗಳ ವೇಗ ದ್ವಿಗುಣಗೊಂಡಿದೆ.

ಕೆಲವು ವಲಯಗಳಲ್ಲಿ [ನಾಲ್ಕು ವಲಯಗಳು] ಸರಕು ಸಾಗಣೆ ರೈಲುಗಳ ವೇಗ 50 ಕಿಲೋಮೀಟರ್ ಗಿಂತ ಹೆಚ್ಚಾಗಿದೆ. ಭೌಗೋಳಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೆಲವು ವಲಯಗಳಲ್ಲಿ ಸರಕು ಸಾಗಣೆ ರೈಲುಗಳು ಉತ್ತಮ ವೇಗ ಕಾಯ್ದುಕೊಂಡಿವೆ. 2021 ರ ಮೇ ನಲ್ಲಿ ಸರಾಸರಿ ವೇಗ 45.6 ಕಿಲೋಮೀಟರ್ ಇದೆ.ಇದಕ್ಕೂ ಹಿಂದಿನ ವರ್ಷ 36.19 ಕಿಲೋಮೀಟರ್ ನಷ್ಟಿದ್ದು,ಶೇ 26 ರಷ್ಟು ಪ್ರಗತಿ ಸಾಧಿಸಿದೆ.

ಕೋವಿಡ್ – 19 ಪರಿಸ್ಥಿತಿಯನ್ನು ಭಾರತೀಯ ರೈಲ್ವೆ ಒಂದು ಅವಕಾಶವನ್ನಾಗಿ ಮಾಡಿಕೊಂಡಿದ್ದು,ಎಲ್ಲಾ ಹಂತದಲ್ಲೂ ದಕ್ಷತೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಆದ್ಯತೆ ನೀಡಿದೆ.(ಸಂಗ್ರಹ ಚಿತ್ರಗಳನ್ನು ಬಳಸಲಾಗಿದೆ.)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ  ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ಶಂಕುಸ್ಥಾಪನೆ ಕಂಡು 2 ವರ್ಷ 10 ತಿಂಗಳು ಕಳೆದರು ಪೂರ್ಣಗೊಳ್ಳದ ರಸ್ತೆ ಕಾಮಗಾರಿಯಿಂದಾಗಿ ವಾಹನ ಸವಾರರು ಪದೇ ಪದೇ ಅಪಘಾತಕ್ಕೆ (Accident) ಒಳಗಾಗುತ್ತಿರುವ ಘಟನೆ ರಾಜಘಟ್ಟ ಕೆರೆ ಏರಿ ಮೇಲೆ ನಡೆಯುತ್ತಿದೆ.

[ccc_my_favorite_select_button post_id="120455"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!