ಮೇ ತಿಂಗಳಲ್ಲಿ ಹಿಂದೆಂದೂ ಇಲ್ಲದಷ್ಟು ಪ್ರಮಾಣದಲ್ಲಿ 114.8 ಮೆಟ್ರಿಕ್ ಟನ್ ಸರಕು ಸಾಗಣೆ ಮಾಡಿದ ರೈಲ್ವೆ

ಬೆಂಗಳೂರು: ಸರಕು ಸಾಗಣೆ ಅಂಕಿ ಅಂಶಗಳಲ್ಲಿ ಭಾರತೀಯ ರೈಲ್ವೆ ವೇಗ ಕಾಯ್ದುಕೊಂಡಿದ್ದು, 2021ರ ಮೇ ನಲ್ಲಿ ಕೋವಿಡ್ ಸವಾಲುಗಳ ಹೊರತಾಗಿಯೂ ಗಳಿಕೆ ಮತ್ತು ಲೋಡಿಂಗ್ ನಲ್ಲಿ ಉತ್ತಮ ಸಾಧನೆ ಮಾಡಿದೆ.

ಅಭಿಯಾನದ ಮಾದರಿಯಲ್ಲಿ ರೈಲ್ವೆ ಕಾರ್ಯನಿರ್ವಹಿಸುತ್ತಿದ್ದು, ಮೇ ತಿಂಗಳಲ್ಲಿ ಭಾರತೀಯ ರೈಲ್ವೆ ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಲೋಡಿಂಗ್ ಮಾಡಿದೆ.

2021 ರ ಮೇ ನಲ್ಲಿ 114.8 ಮೆಟ್ರಿಕ್ ಟನ್ ಸರಕು ಸಾಗಣೆ ಮಾಡಿದ್ದು, ಕಳೆದ 2019 ರ ಇದೇ ಮೇ ಗೆ ಹೋಲಿಸಿದರೆ ಶೇ 9.7 ರಷ್ಟು [104.6 ಮೆಟ್ಟಿಕ್ ಟನ್] ಪ್ರಗತಿ ಸಾಧಿಸಿದೆ. 

2021 ರ ಮೇ ನಲ್ಲಿ ಪ್ರಮುಖ ವಸ್ತುಗಳನ್ನು ಸಾಗಣೆ ಮಾಡಿದ್ದು, ಅದರಲ್ಲಿ 54.52 ದಶಲಕ್ಷ ಟನ್ ಕಲ್ಲಿದ್ದಲು, 15.12 ದಶಲಕ್ಷ ಟನ್ ಕಬ್ಬಿಣದ ಅದಿರು, 5.61 ದಶಲಕ್ಷ ಟನ್ ಆಹಾರ ಧಾನ್ಯಗಳು, 3.68 ದಶಲಕ್ಷ ಟನ್ ರಸಗೊಬ್ಬರ, 3.18 ದಶಲಕ್ಷ ಟನ್ ಖನಿಜ ತೈಲ, 5.36 ದಶಲಕ್ಷ ಟನ್ ಸೀಮೆಂಟ್ [ಕ್ಲಿಂಕೆರ್ ಹೊರತುಪಡಿಸಿ] ಮತ್ತು 4.2 ದಶಲಕ್ಷ ಟನ್ ಕ್ಲಿಂಕೆರ್ ಸಾಗಾಟ ಮಾಡಿದೆ.

2021  ರ ಮೇನಲ್ಲಿ ಭಾರತೀಯ ರೈಲ್ವೆ 11604.94 ಕೋಟಿ ರೂಪಾಯಿ ಆದಾಯವನ್ನು ಸರಕು ಸಾಗಣೆಯಿಂದ ಗಳಿಸಿದೆ.

2021ರ ಮೇ ನಲ್ಲಿ ವ್ಯಾಗನ್ ಟರ್ನ್ ನಲ್ಲಿ ಶೇ 26 ರಷ್ಟು ಸುಧಾರಣೆ ಕಂಡಿದ್ದು, 2018 ರ ಮೇ ನಲ್ಲಿ ವ್ಯಾಗನ್ ಟರ್ನ್ ಗೆ 6.46 ದಿನಗಳನ್ನು ತೆಗೆದುಕೊಳ್ಳಲಾಗಿತ್ತು. ಈ ಪ್ರಮಾಣ ಇದೀಗ 4.81 ದಿನಗಳಿಗೆ ತಗ್ಗಿದೆ.

ರೈಲ್ವೆ ಸರಕು ಸಾಗಣೆಯನ್ನು ಅತ್ಯಾಕರ್ಷಕಗೊಳಿಸಲು ಭಾರತೀಯ ರೈಲ್ವೆ ಹಲವಾರು ವಿನಾಯಿತಿ ಮತ್ತು ರಿಯಾಯಿತಿಗಳನ್ನು ನೀಡುತ್ತಿದೆ. ಹಾಲಿ ಇರುವ ರೈಲ್ವೆ ಸಂಪರ್ಕಜಾಲದಲ್ಲಿ ಸರಕು ಸಾಗಣೆ ರೈಲುಗಳ ವೇಗವನ್ನು ಸಹ ಹೆಚ್ಚಿಸಲಾಗಿದೆ. ರೈಲುಗಳ ವೇಗದಲ್ಲಿ ಆಗಿರುವ ಸುಧಾರಣೆಯಿಂದ ಎಲ್ಲಾ ಪಾಲುದಾರರಿಗೆ ವೆಚ್ಚ ಕಡಿತವಾಗಲಿದೆ. ಕಳೆದ 18 ತಿಂಗಳ ಅವಧಿಯಲ್ಲಿ ಸರಕು ಸಾಗಿಸುವ ರೈಲುಗಳ ವೇಗ ದ್ವಿಗುಣಗೊಂಡಿದೆ.

ಕೆಲವು ವಲಯಗಳಲ್ಲಿ [ನಾಲ್ಕು ವಲಯಗಳು] ಸರಕು ಸಾಗಣೆ ರೈಲುಗಳ ವೇಗ 50 ಕಿಲೋಮೀಟರ್ ಗಿಂತ ಹೆಚ್ಚಾಗಿದೆ. ಭೌಗೋಳಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೆಲವು ವಲಯಗಳಲ್ಲಿ ಸರಕು ಸಾಗಣೆ ರೈಲುಗಳು ಉತ್ತಮ ವೇಗ ಕಾಯ್ದುಕೊಂಡಿವೆ. 2021 ರ ಮೇ ನಲ್ಲಿ ಸರಾಸರಿ ವೇಗ 45.6 ಕಿಲೋಮೀಟರ್ ಇದೆ.ಇದಕ್ಕೂ ಹಿಂದಿನ ವರ್ಷ 36.19 ಕಿಲೋಮೀಟರ್ ನಷ್ಟಿದ್ದು,ಶೇ 26 ರಷ್ಟು ಪ್ರಗತಿ ಸಾಧಿಸಿದೆ.

ಕೋವಿಡ್ – 19 ಪರಿಸ್ಥಿತಿಯನ್ನು ಭಾರತೀಯ ರೈಲ್ವೆ ಒಂದು ಅವಕಾಶವನ್ನಾಗಿ ಮಾಡಿಕೊಂಡಿದ್ದು,ಎಲ್ಲಾ ಹಂತದಲ್ಲೂ ದಕ್ಷತೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಆದ್ಯತೆ ನೀಡಿದೆ.(ಸಂಗ್ರಹ ಚಿತ್ರಗಳನ್ನು ಬಳಸಲಾಗಿದೆ.)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ  ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಪಾಲನಜೋಗಿಹಳ್ಳಿಯಲ್ಲಿ ನಡೆದಿದೆ

[ccc_my_favorite_select_button post_id="113869"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!