ಮೇ ತಿಂಗಳಲ್ಲಿ ಹಿಂದೆಂದೂ ಇಲ್ಲದಷ್ಟು ಪ್ರಮಾಣದಲ್ಲಿ 114.8 ಮೆಟ್ರಿಕ್ ಟನ್ ಸರಕು ಸಾಗಣೆ ಮಾಡಿದ ರೈಲ್ವೆ

ಬೆಂಗಳೂರು: ಸರಕು ಸಾಗಣೆ ಅಂಕಿ ಅಂಶಗಳಲ್ಲಿ ಭಾರತೀಯ ರೈಲ್ವೆ ವೇಗ ಕಾಯ್ದುಕೊಂಡಿದ್ದು, 2021ರ ಮೇ ನಲ್ಲಿ ಕೋವಿಡ್ ಸವಾಲುಗಳ ಹೊರತಾಗಿಯೂ ಗಳಿಕೆ ಮತ್ತು ಲೋಡಿಂಗ್ ನಲ್ಲಿ ಉತ್ತಮ ಸಾಧನೆ ಮಾಡಿದೆ.

ಅಭಿಯಾನದ ಮಾದರಿಯಲ್ಲಿ ರೈಲ್ವೆ ಕಾರ್ಯನಿರ್ವಹಿಸುತ್ತಿದ್ದು, ಮೇ ತಿಂಗಳಲ್ಲಿ ಭಾರತೀಯ ರೈಲ್ವೆ ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಲೋಡಿಂಗ್ ಮಾಡಿದೆ.

2021 ರ ಮೇ ನಲ್ಲಿ 114.8 ಮೆಟ್ರಿಕ್ ಟನ್ ಸರಕು ಸಾಗಣೆ ಮಾಡಿದ್ದು, ಕಳೆದ 2019 ರ ಇದೇ ಮೇ ಗೆ ಹೋಲಿಸಿದರೆ ಶೇ 9.7 ರಷ್ಟು [104.6 ಮೆಟ್ಟಿಕ್ ಟನ್] ಪ್ರಗತಿ ಸಾಧಿಸಿದೆ. 

2021 ರ ಮೇ ನಲ್ಲಿ ಪ್ರಮುಖ ವಸ್ತುಗಳನ್ನು ಸಾಗಣೆ ಮಾಡಿದ್ದು, ಅದರಲ್ಲಿ 54.52 ದಶಲಕ್ಷ ಟನ್ ಕಲ್ಲಿದ್ದಲು, 15.12 ದಶಲಕ್ಷ ಟನ್ ಕಬ್ಬಿಣದ ಅದಿರು, 5.61 ದಶಲಕ್ಷ ಟನ್ ಆಹಾರ ಧಾನ್ಯಗಳು, 3.68 ದಶಲಕ್ಷ ಟನ್ ರಸಗೊಬ್ಬರ, 3.18 ದಶಲಕ್ಷ ಟನ್ ಖನಿಜ ತೈಲ, 5.36 ದಶಲಕ್ಷ ಟನ್ ಸೀಮೆಂಟ್ [ಕ್ಲಿಂಕೆರ್ ಹೊರತುಪಡಿಸಿ] ಮತ್ತು 4.2 ದಶಲಕ್ಷ ಟನ್ ಕ್ಲಿಂಕೆರ್ ಸಾಗಾಟ ಮಾಡಿದೆ.

2021  ರ ಮೇನಲ್ಲಿ ಭಾರತೀಯ ರೈಲ್ವೆ 11604.94 ಕೋಟಿ ರೂಪಾಯಿ ಆದಾಯವನ್ನು ಸರಕು ಸಾಗಣೆಯಿಂದ ಗಳಿಸಿದೆ.

2021ರ ಮೇ ನಲ್ಲಿ ವ್ಯಾಗನ್ ಟರ್ನ್ ನಲ್ಲಿ ಶೇ 26 ರಷ್ಟು ಸುಧಾರಣೆ ಕಂಡಿದ್ದು, 2018 ರ ಮೇ ನಲ್ಲಿ ವ್ಯಾಗನ್ ಟರ್ನ್ ಗೆ 6.46 ದಿನಗಳನ್ನು ತೆಗೆದುಕೊಳ್ಳಲಾಗಿತ್ತು. ಈ ಪ್ರಮಾಣ ಇದೀಗ 4.81 ದಿನಗಳಿಗೆ ತಗ್ಗಿದೆ.

ರೈಲ್ವೆ ಸರಕು ಸಾಗಣೆಯನ್ನು ಅತ್ಯಾಕರ್ಷಕಗೊಳಿಸಲು ಭಾರತೀಯ ರೈಲ್ವೆ ಹಲವಾರು ವಿನಾಯಿತಿ ಮತ್ತು ರಿಯಾಯಿತಿಗಳನ್ನು ನೀಡುತ್ತಿದೆ. ಹಾಲಿ ಇರುವ ರೈಲ್ವೆ ಸಂಪರ್ಕಜಾಲದಲ್ಲಿ ಸರಕು ಸಾಗಣೆ ರೈಲುಗಳ ವೇಗವನ್ನು ಸಹ ಹೆಚ್ಚಿಸಲಾಗಿದೆ. ರೈಲುಗಳ ವೇಗದಲ್ಲಿ ಆಗಿರುವ ಸುಧಾರಣೆಯಿಂದ ಎಲ್ಲಾ ಪಾಲುದಾರರಿಗೆ ವೆಚ್ಚ ಕಡಿತವಾಗಲಿದೆ. ಕಳೆದ 18 ತಿಂಗಳ ಅವಧಿಯಲ್ಲಿ ಸರಕು ಸಾಗಿಸುವ ರೈಲುಗಳ ವೇಗ ದ್ವಿಗುಣಗೊಂಡಿದೆ.

ಕೆಲವು ವಲಯಗಳಲ್ಲಿ [ನಾಲ್ಕು ವಲಯಗಳು] ಸರಕು ಸಾಗಣೆ ರೈಲುಗಳ ವೇಗ 50 ಕಿಲೋಮೀಟರ್ ಗಿಂತ ಹೆಚ್ಚಾಗಿದೆ. ಭೌಗೋಳಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೆಲವು ವಲಯಗಳಲ್ಲಿ ಸರಕು ಸಾಗಣೆ ರೈಲುಗಳು ಉತ್ತಮ ವೇಗ ಕಾಯ್ದುಕೊಂಡಿವೆ. 2021 ರ ಮೇ ನಲ್ಲಿ ಸರಾಸರಿ ವೇಗ 45.6 ಕಿಲೋಮೀಟರ್ ಇದೆ.ಇದಕ್ಕೂ ಹಿಂದಿನ ವರ್ಷ 36.19 ಕಿಲೋಮೀಟರ್ ನಷ್ಟಿದ್ದು,ಶೇ 26 ರಷ್ಟು ಪ್ರಗತಿ ಸಾಧಿಸಿದೆ.

ಕೋವಿಡ್ – 19 ಪರಿಸ್ಥಿತಿಯನ್ನು ಭಾರತೀಯ ರೈಲ್ವೆ ಒಂದು ಅವಕಾಶವನ್ನಾಗಿ ಮಾಡಿಕೊಂಡಿದ್ದು,ಎಲ್ಲಾ ಹಂತದಲ್ಲೂ ದಕ್ಷತೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಆದ್ಯತೆ ನೀಡಿದೆ.(ಸಂಗ್ರಹ ಚಿತ್ರಗಳನ್ನು ಬಳಸಲಾಗಿದೆ.)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ  ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೆರವೇರಿಸಿದರು.

[ccc_my_favorite_select_button post_id="120981"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]