ಬೆಲೆ ಏರಿಕೆ ಖಂಡಿಸಿ ದೊಡ್ಡಬಳ್ಳಾಪುರ ತಾಲೂಕಿನ ವಿವಿಧೆಡೆ ಕಾಂಗ್ರೆಸ್ ನಿಂದ ಪ್ರತಿಭಟನೆ / ಜಟಕಾ ಗಾಡಿ ಓಡಿಸಿ ಆಕ್ರೋಶ ವ್ಯಕ್ತಪಡಿಸಿದ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ

ದೊಡ್ಡಬಳ್ಳಾಪುರ: ತೈಲ ದರವನ್ನು ನಿರಂತರವಾಗಿ ಏರಿಸುವ ಮೂಲಕ ಕರೊನಾದಿಂದ ಸಂಕಷ್ಟದಲ್ಲಿರುವ ಜನರ ಮೇಲೆ ಗದಾ ಪ್ರಹಾರವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ತಾಲೂಕಿನ ವಿವಿಧ ಪೆಟ್ರೋಲ್ ಬಂಕ್ ಗಳ ಮಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತಾಲೂಕಿನ ಪಿಂಡಕೂರ್ ತಿಮ್ಮನಹಳ್ಳಿ ಪೆಟ್ರೋಲ್ ಬಂಕ್ ಬಳಿ ಜಟಕಾ ಗಾಡಿ ಓಡಿಸುವ ಮೂಲಕ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಹಾಗೂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯಿಂದ ಸಾರ್ವಜನಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಕ್ರಿಕೆಟ್ ರನ್ ಗಳಂತೆ ಪೆಟ್ರೋಲ್ ಮತ್ತು ಡಿಸೇಲ್ 100 ನಾಟ್ ಔಟ್ ಎಂಬಂತೆ ಒಂದೇ ಸಮ ಏರಿಕೆಮಾಡಿ, ಜನಸಾಮಾನ್ಯರಿಗೆ ಜೀವನದ ಮೇಲೆ ಬರೆ ಎಳೆಯುತ್ತಿದೆ.

ಚುನಾವಣೆ ಸಂದರ್ಭದಲ್ಲಿ ದೇಶದಲ್ಲಿ ಅಚ್ಚೆದಿನ್ ಬರುತ್ತೆ ಎಂದ ಮೋದಿ ದೇಶದ ಆರ್ಥಿಕ ಸ್ಥಿತಿಯನ್ನು ಪ್ರಪಾತಕ್ಕೆ ಇಳಿಸಿಬಿಟ್ಟಿದ್ದಾರೆ. ಸ್ವಾತಂತ್ರ್ಯ ನಂತರ ದೇಶವನ್ನಾಳಿದ ಸರ್ಕಾರಗಳು ಸಮದೇಶವನ್ನು ಅಭಿವೃದ್ಧಿಪಥದತ್ತ ಕೊಂಡೋಯ್ದರೆ ಮೋದಿ ಸರ್ಕಾರಕ್ಕೆ ಪಾತಾಳಕ್ಕೆ ಇಳಿಸಿದೆ. 

ಪೆಟ್ರೋಲ್, ಡಿಸೇಲ್, ಅಡಿಗೆ ಎಣ್ಣೆ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ದ ಜನತೆ ಹೆಚ್ಚುತ್ತುಕೊಂಡು ಬಿಜೆಪಿ ಸರ್ಕಾರವನ್ನು ಕೆಳಗಿಳಿಸುವತ್ತ ಚಿಂತನೆ ನಡೆಸಬೇಕಿದೆ ಎಂದರು.

ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಮಾತನಾಡಿ, ಇದು ಜನಸಾಮಾನ್ಯರು, ಬಡವರ ಪರ ಇರುವ ಸರ್ಕಾರ ಅಲ್ಲ, ಬಡವರ ರಕ್ತ ಹೀರುವ ಸರ್ಕಾರ, ಜನ ಕೊರೋನಾ ಸಂಕಷ್ಟದಿಂದ, ಸಾವು-ನೋವಿನಿಂದ, ಆರ್ಥಿಕ ಸಮಸ್ಯೆಗಳಿಂದ ಸಾಯುತ್ತಿದ್ದಾರೆ, ಅಂತಹ ಸಂದರ್ಭದಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಪೆಟ್ರೋಲ್ ದರ ಈ ರೀತಿ ದಿನದಿಂದ ದಿನಕ್ಕೆ ಹೆಚ್ಚಿಸಿದರೆ ಬಡವರು ಬದುಕುವುದು ಹೇಗೆ ಎಂದು ಪ್ರಶ್ನಿಸಿದರು.

ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಜನಸಾಮಾನ್ಯರ ಮೇಲೆ ಕಾಳಜಿಯಿದ್ದರೆ ಇಂಧನ ಮೇಲೆ ಸುಂಕ ದರವನ್ನು ಕಡಿಮೆ ಮಾಡಲಿ, ರಾಜ್ಯ ಸರ್ಕಾರಗಳು ಕೂಡ ಮಾಡಲಿ, ಇಲ್ಲದಿದ್ದರೆ ಜನತೆಗೆ ಬದುಕುವುದು ಬಹಳ ಕಷ್ಟವಾಗುತ್ತದೆ, ಪೆಟ್ರೋಲ್,ಡೀಸೆಲ್ ಬೆಲೆ ಹೆಚ್ಚಳವಾದ ಕೂಡಲೇ ಸಾಗಣೆ-ಸಾಗಾಟ ದರ ಹೆಚ್ಚಳವಾಗಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಕೂಡ ಹೆಚ್ಚಳವಾಗುತ್ತದೆ, ದೇಶ ಹಾಳು ಮಾಡಬೇಡಿ ಎಂದು ಪ್ರಧಾನಿ ಮೋದಿಯವರನ್ನು ನೇರವಾಗಿ ಉದ್ದೇಶಿಸಿ ಹೇಳಿದರು.

ತಾಲೂಕಿನ ಹೊಸಹುಡ್ಯ, ಬಾಶೆಟ್ಟಿಹಳ್ಳಿ, ಪಿಂಡಕೂರ್ ತಿಮ್ಮನಹಳ್ಳಿ, ಹಸನ್ ಘಟ್ಟ ಕ್ರಾಸ್, ಪಾಲನಜೋಗಹಳ್ಳಿ, ಡಿ.ಕ್ರಾಸ್, ಸೌಂದರ್ಯ ಮಹಲ್, ಸಿಡಿ ಅಗ್ರಹಾರ, ಜಾಲಪ್ಪ ಬಳಿಯ ಪೆಟ್ರೋಲ್ ಬಂಕ್ ಬಳಿ  ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಪೆಟ್ರೋಲ್‌ 100 ನಾಟ್‌ ಔಟ್‌’ ಎಂಬ ಬರಹವುಳ್ಳ ಫಲಕಗಳನ್ನು ಹಿಡಿದಿದ್ದ ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರು, ಕೆಲ ಕಾಲ ಪ್ರತಿಭಟನಾ ಪ್ರದರ್ಶನ ನಡೆಸಿದರು. ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂಬ ಘೋಷಣೆಗಳನ್ನು ಕೂಗಿದರು.

ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನೀವು ಮತ್ತು ಸಿದ್ದರಾಮಯ್ಯ ಅವರು ದುಬಾರಿ ವಾಚ್ ಧರಿಸಿದ್ದರ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕೇಳಿದಾಗ, “ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ

[ccc_my_favorite_select_button post_id="116998"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!