ಅವಹೇಳನಾಕಾರಿ ಹೇಳಿಕೆ: ನಟ ಚೇತನ್ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಕದಂಬ ಬ್ರಿಗೇಡ್ ನಿಂದ ಪೊಲೀಸರಿಗೆ ದೂರು

ದೊಡ್ಡಬಳ್ಳಾಪುರ: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ, ನಟ ಚೇತನ್ ವಿರುದ್ಧ ಕದಂಬ ಬ್ರಿಗೇಡ್ ನಿಂದ ನಗರದ ಡಿವೈಎಸ್ಪಿ ಕಚೇರಿಗೆ ದೂರು ನೀಡಲಾಗಿದೆ.

ಇತ್ತೀಚೆಗೆ ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯದ ವಿರುದ್ಧ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಕದಂಬ ಬ್ರಿಗೇಡ್ ವತಿಯಿಂದ ದೂರು ದಾಖಲಿಸಲಾಗಿದೆ. ಇದರ ಜೊತೆಗೆ ಚೇತನ್ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರು ಮತ್ತು ಬ್ರಾಹ್ಮಣತ್ವದ ವಿರುದ್ಧ ಅಸಂಬದ್ಧ ಹ್ಯಾಷ್‌ಟ್ಯಾಗ್ ಗಳ ಮೂಲಕ ಅಭಿಯಾನ ನಡೆಸಿದ ರಾಷ್ಟ್ರೀಯ ಮುಸ್ಲಿಂ ಮೋರ್ಚಾ ಸಂಘಟನೆಯ ವಿರುದ್ಧವೂ ಸಹ ದೂರು ದಾಖಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕದಂಬ ಬ್ರಿಗೇಡ್ ನ ಸಂಸ್ಥಾಪಕ ಜಿ.ಎನ್.ಪ್ರದೀಪ್, ಭಾರತದಲ್ಲಿ ದಶಕಗಳಿಂದಲೂ ಆಂತರಿಕ ಶತೃಗಳು ದಿನೇ ದಿನೇ ದೇಶದ ಕೋಮು ಸೌಹಾರ್ದತೆ ಕೆಡಿಸುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅದರ ಮುಂದುವರಿದ ಭಾಗವಾಗಿ ನಟ ಚೇತನ್ ಹಾಗೂ ರಾಷ್ಟ್ರೀಯ ಮುಸ್ಲಿಂ ಮೋರ್ಚಾ ಹೆಸರಿನ ಸಂಘಟನೆಯು ಬ್ರಾಹ್ಮಣ್ಯದ ವಿರುದ್ಧ ಅಸಂಬದ್ಧ ಹೇಳಿಕೆ ನೀಡುವ, ಸಾಮಾಜಿಕ ಜಾಲತಾಣಗಳಲ್ಲಿ ದುರುದ್ದೇಶಪೂರಿತವಾಗಿ ಸುಳ್ಳು ವಿಷಯಗಳನ್ನು ಪಸರಿಸುವ ಮೂಲಕ ಶಾಂತಿಯಿಂದಿರುವ ಸಮಾಜದಲ್ಲಿ ಕೋಮುಭಾವನೆ ಕೆಡಿಸುವ ಪ್ರಯತ್ನ ಮಾಡಿರುವುದಲ್ಲದೆ, ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾರೆ. ಆದ್ದರಿಂದ ಇಂತಹ ಸಂಕುಚಿತ ಮನೋಭಾವದ ಕನಿಷ್ಠರಿಗೆ ಕಾನೂನು ರೀತ್ಯಾ ಬುದ್ಧಿ ಕಲಿಸುವ ಉದ್ದೇಶದಿಂದ ಸಂಘದ ಕಾನೂನು ಸಲಹೆಗಾರಾದ ಟಿ.ಕೆ.ಹನುಮಂತರಾಜು ಬಳಿ ಚರ್ಚಿಸಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ದಲಿತ ಸಂಘದ ರಾಜ್ಯ ಉಪಾಧ್ಯಕ್ಷ ಟಿ.ಶ್ರೀನಿವಾಸ್, ದೇಶದಲ್ಲಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಹಾಗೂ ದಲಿತರ ಹೆಸರನ್ನು ದುರ್ಬಳಕೆ ಮಾಡಿಕೊಂಡು ದೇಶದ ಸಾರ್ವಭೌತ್ವಕ್ಕೆ ಧಕ್ಕೆ ತರುವ ಪ್ರಯತ್ನ ಕೆಲವರಿಂದ ನಡೆಯುತ್ತಿದೆ. ನಿಜವಾದ ದಲಿತರು ಯಾವತ್ತೂ ದೇಶದ ಸಾಂಸ್ಕೃತಿಕ ಹಿನ್ನೆಲೆಯನ್ನಾಗಲೀ, ಯಾವ ಧರ್ಮವನ್ನೇ ಆಗಲೀ ದೂಷಿಸಲಿಲ್ಲ. ಆದರೆ ಕೆಲವು ಕಿಡಿಗೇಡಿ ಮನಸ್ಥಿತಿಯವರು ದೇಶದ ಐಕ್ಯತೆಗೆ ಧಕ್ಕೆ ತರಲು ಮಹಾಪುರುಷರ ಮತ್ತು ಸಮುದಾಯದ ಹೆಸರನ್ನು ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ಸಂಗತಿ. ಇಂತಹ ಮನಸ್ಥಿತಿಯ ವ್ಯಕ್ತಿಗಳ ಹಾಗೂ ಸಂಘಟನೆಗಳ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರುವುದು ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವುದು ಪ್ರಧಾನಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ

[ccc_my_favorite_select_button post_id="120266"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!