ಅವಹೇಳನಾಕಾರಿ ಹೇಳಿಕೆ: ನಟ ಚೇತನ್ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಕದಂಬ ಬ್ರಿಗೇಡ್ ನಿಂದ ಪೊಲೀಸರಿಗೆ ದೂರು

ದೊಡ್ಡಬಳ್ಳಾಪುರ: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ, ನಟ ಚೇತನ್ ವಿರುದ್ಧ ಕದಂಬ ಬ್ರಿಗೇಡ್ ನಿಂದ ನಗರದ ಡಿವೈಎಸ್ಪಿ ಕಚೇರಿಗೆ ದೂರು ನೀಡಲಾಗಿದೆ.

ಇತ್ತೀಚೆಗೆ ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯದ ವಿರುದ್ಧ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಕದಂಬ ಬ್ರಿಗೇಡ್ ವತಿಯಿಂದ ದೂರು ದಾಖಲಿಸಲಾಗಿದೆ. ಇದರ ಜೊತೆಗೆ ಚೇತನ್ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರು ಮತ್ತು ಬ್ರಾಹ್ಮಣತ್ವದ ವಿರುದ್ಧ ಅಸಂಬದ್ಧ ಹ್ಯಾಷ್‌ಟ್ಯಾಗ್ ಗಳ ಮೂಲಕ ಅಭಿಯಾನ ನಡೆಸಿದ ರಾಷ್ಟ್ರೀಯ ಮುಸ್ಲಿಂ ಮೋರ್ಚಾ ಸಂಘಟನೆಯ ವಿರುದ್ಧವೂ ಸಹ ದೂರು ದಾಖಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕದಂಬ ಬ್ರಿಗೇಡ್ ನ ಸಂಸ್ಥಾಪಕ ಜಿ.ಎನ್.ಪ್ರದೀಪ್, ಭಾರತದಲ್ಲಿ ದಶಕಗಳಿಂದಲೂ ಆಂತರಿಕ ಶತೃಗಳು ದಿನೇ ದಿನೇ ದೇಶದ ಕೋಮು ಸೌಹಾರ್ದತೆ ಕೆಡಿಸುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅದರ ಮುಂದುವರಿದ ಭಾಗವಾಗಿ ನಟ ಚೇತನ್ ಹಾಗೂ ರಾಷ್ಟ್ರೀಯ ಮುಸ್ಲಿಂ ಮೋರ್ಚಾ ಹೆಸರಿನ ಸಂಘಟನೆಯು ಬ್ರಾಹ್ಮಣ್ಯದ ವಿರುದ್ಧ ಅಸಂಬದ್ಧ ಹೇಳಿಕೆ ನೀಡುವ, ಸಾಮಾಜಿಕ ಜಾಲತಾಣಗಳಲ್ಲಿ ದುರುದ್ದೇಶಪೂರಿತವಾಗಿ ಸುಳ್ಳು ವಿಷಯಗಳನ್ನು ಪಸರಿಸುವ ಮೂಲಕ ಶಾಂತಿಯಿಂದಿರುವ ಸಮಾಜದಲ್ಲಿ ಕೋಮುಭಾವನೆ ಕೆಡಿಸುವ ಪ್ರಯತ್ನ ಮಾಡಿರುವುದಲ್ಲದೆ, ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾರೆ. ಆದ್ದರಿಂದ ಇಂತಹ ಸಂಕುಚಿತ ಮನೋಭಾವದ ಕನಿಷ್ಠರಿಗೆ ಕಾನೂನು ರೀತ್ಯಾ ಬುದ್ಧಿ ಕಲಿಸುವ ಉದ್ದೇಶದಿಂದ ಸಂಘದ ಕಾನೂನು ಸಲಹೆಗಾರಾದ ಟಿ.ಕೆ.ಹನುಮಂತರಾಜು ಬಳಿ ಚರ್ಚಿಸಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ದಲಿತ ಸಂಘದ ರಾಜ್ಯ ಉಪಾಧ್ಯಕ್ಷ ಟಿ.ಶ್ರೀನಿವಾಸ್, ದೇಶದಲ್ಲಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಹಾಗೂ ದಲಿತರ ಹೆಸರನ್ನು ದುರ್ಬಳಕೆ ಮಾಡಿಕೊಂಡು ದೇಶದ ಸಾರ್ವಭೌತ್ವಕ್ಕೆ ಧಕ್ಕೆ ತರುವ ಪ್ರಯತ್ನ ಕೆಲವರಿಂದ ನಡೆಯುತ್ತಿದೆ. ನಿಜವಾದ ದಲಿತರು ಯಾವತ್ತೂ ದೇಶದ ಸಾಂಸ್ಕೃತಿಕ ಹಿನ್ನೆಲೆಯನ್ನಾಗಲೀ, ಯಾವ ಧರ್ಮವನ್ನೇ ಆಗಲೀ ದೂಷಿಸಲಿಲ್ಲ. ಆದರೆ ಕೆಲವು ಕಿಡಿಗೇಡಿ ಮನಸ್ಥಿತಿಯವರು ದೇಶದ ಐಕ್ಯತೆಗೆ ಧಕ್ಕೆ ತರಲು ಮಹಾಪುರುಷರ ಮತ್ತು ಸಮುದಾಯದ ಹೆಸರನ್ನು ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ಸಂಗತಿ. ಇಂತಹ ಮನಸ್ಥಿತಿಯ ವ್ಯಕ್ತಿಗಳ ಹಾಗೂ ಸಂಘಟನೆಗಳ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರುವುದು ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಈ ಮುಂಚೆ ಅಮಾನತು ಆದರೂ ಶಾಸಕರಿಗೆ ಅರಿವು ಬಂದಿಲ್ಲ: ಸ್ಪೀಕರ್ ಯುಟಿ ಖಾದರ್ ಗರಂ

ಈ ಮುಂಚೆ ಅಮಾನತು ಆದರೂ ಶಾಸಕರಿಗೆ ಅರಿವು ಬಂದಿಲ್ಲ: ಸ್ಪೀಕರ್ ಯುಟಿ ಖಾದರ್

ಬೆಂಗಳೂರು: ಈ ಮುಂಚೆಯೇ ಸದನದಿಂದ ಅಮಾನತು ಆದರೂ ಶಾಸಕರಿಗೆ ತಮ್ಮ ತಪ್ಪಿನ ಅರಿವು ಬಂದಿಲ್ಲ. ಇಂತಹ ವರ್ತನೆ ಸರಿಯಾಗಬೇಕು. ಅವರಿಗೆ ಶಿಸ್ತು ಕಲಿಸುವ ಪ್ರಯತ್ನ ಇದಾಗಿದೆ ಎಂದು 18 ಶಾಸಕರ ಅಮಾನತು ಆದೇಶದ ಕುರಿತು

[ccc_my_favorite_select_button post_id="104452"]
2ನೇ ವಿಮಾನ ನಿಲ್ದಾಣ: ಮೂರು ಸ್ಥಳಗಳು ಇವೇ ನೋಡಿ.. ಪರಿಶೀಲನೆಗೆ ಕೇಂದ್ರ ತಂಡದ ಆಗಮನ

2ನೇ ವಿಮಾನ ನಿಲ್ದಾಣ: ಮೂರು ಸ್ಥಳಗಳು ಇವೇ ನೋಡಿ.. ಪರಿಶೀಲನೆಗೆ ಕೇಂದ್ರ ತಂಡದ

ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ (MB Patila) ಶನಿವಾರ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮ

[ccc_my_favorite_select_button post_id="104458"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
ಕಾಶ್ಮೀರದ ಬಿಜೆಪಿ ನಾಯಕ ಆತ್ಮಹತ್ಯೆ

ಕಾಶ್ಮೀರದ ಬಿಜೆಪಿ ನಾಯಕ ಆತ್ಮಹತ್ಯೆ

ಶ್ರೀನಗರ: ಶಿಫಾರಸು-ಕಾಶ್ಮೀರದ ಮಾಜಿ ಶಾಸಕ, ಬಿಜೆಪಿ ಮುಖಂಡ ಫಕೀರ್ ಮೊಹಮ್ಮದ್ ಖಾನ್ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಅವರು ತುಳಸಿ ಭಾಗ್ ಸರಕಾರಿ ವಸತಿ ಗೃಹದ ಕೊಠಡಿಯಲ್ಲಿ ಗುರುವಾರ ಬೆಳಗ್ಗೆ ತಮ್ಮದೇ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡ ದ್ದಾರೆ ಎಂದು

[ccc_my_favorite_select_button post_id="104372"]
Doddaballapura: ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸಾವು..!

Doddaballapura: ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸಾವು..!

ದೊಡ್ಡಬಳ್ಳಾಪುರ (Doddaballapura): ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಜಿಂಕೆಯೊಂದು ಸ್ಥಳದಲ್ಲೇ ಸಾವನ್ನಪಿರುವ ಘಟನೆ ನೆಲಮಂಗಲ ರಸ್ತೆಯ ಆಕಾಶವಾಣಿ ಪ್ರಸಾರ ಕೇಂದ್ರ ಬಳಿ ಸಂಭವಿಸಿದೆ. ಶುಕ್ರವಾರ ರಾತ್ರಿ ಸುಮಾರು 4 ವರ್ಷ

[ccc_my_favorite_select_button post_id="104439"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!