ನಿರಂತರವಾಗಿ ಯೋಗ ಮುಂದುವರಿಸಿ, ಉತ್ತಮ ಆರೋಗ್ಯ ಪಡೆಯಿರಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಸಂದರ್ಭದಲ್ಲಿ ಯೋಗ ಮತ್ತು ಪ್ರಾಣಾಯಾಮ ಮಾಡುವುದರಿಂದ ಶ್ವಾಸಕೋಶ ಹಾಗೂ ಉಸಿರಾಟದ ಸಮಸ್ಯೆ ನಿವಾರಣೆಯಾಗುತ್ತದೆ ಹಾಗೂ ಯೋಗವನ್ನು ನಿರಂತರವಾಗಿ ಮುಂದುವರಿಸಿಕೊಂಡು ಹೋದರೆ ಉತ್ತಮ ಆರೋಗ್ಯವನ್ನು ಪಡೆದುಕೊಳ್ಳಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.

“ಸ್ವಾತಂತ್ರ್ಯದ 75ನೇ ವರ್ಷ, ಸ್ವಾತಂತ್ರ್ಯದ ಅಮೃತ  ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆಯುಷ್ ಇಲಾಖೆ ಹಾಗೂ ಸುರಪನೇನಿ ವಿದ್ಯಾಸಾಗರ್ ಫೌಂಡೇಶನ್ ವತಿಯಿಂದ ದೇವನಹಳ್ಳಿ ಪುರಸಭಾ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಯೋಗ ಹಾಗೂ ಪ್ರಾಣಾಯಾಮ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆರೋಗ್ಯ ವೃದ್ಧಿ ಯೋಗ ಹಾಗೂ ಪ್ರಾಣಾಯಾಮ ಏರ್ಪಡಿಸಲಾಗಿದೆ. ಯೋಗ ಮಾಡುವುದರಿಂದ ಹಲವು ಉಪಯೋಗಗಳಿದ್ದು, ಯೋಗದಿಂದ ಅಧಿಕಾರಿಗಳು ಕ್ರೀಯಾಶೀಲವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಹಾಗೂ ಕೋವಿಡ್ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ಜನರಿಗೆ ಆರೋಗ್ಯ ಮುಖ್ಯವಾಗಿದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಕರೋನಾ ವಾರಿಯರ್ಸ್‌ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಉತ್ಸಾಹ ತುಂಬಲು ಯೋಗ ಹಾಗೂ ಪ್ರಾಣಾಯಾಮ ಶಿಬಿರ ಏರ್ಪಡಿಸಿರುವುದು ಶ್ಲಾಘನೀಯ ಎಂದರಲ್ಲದೆ, ಮುಂದಿನ ದಿನಗಳಲ್ಲಿ ಆಸ್ಪತ್ರೆಗಳು ಹಾಗೂ ಶಾಲಾ ಕಾಲೇಜುಗಳಲ್ಲಿಯೂ ಯೋಗ ಹಾಗೂ ಪ್ರಾಣಾಯಾಮ ಮಾಡಿಸುವಂತೆ ತಿಳಿಸಲಾಗುವುದು ಎಂದು ಹೇಳಿದರು.

ಸೂರಪನೇನಿ ವಿದ್ಯಾ ಸಾಗರ್ ಫೌಂಡೇಶನ್‌ನ ಅಧ್ಯಕ್ಷ ವಿದ್ಯಾಸಾಗರ್ ಅವರು ಮಾತನಾಡಿ, ಪ್ರಾಣಾಯಾಮ ಎಂದರೆ ಉಸಿರಾಟದ ಪ್ರಯಾಣ ಎಂದರ್ಥ, ಪ್ರಾಣಾಯಾಮ ಮಾಡುವುದರಿಂದ ಶ್ವಾಸಕೋಶ ಹಾಗೂ ಕಂಠದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ, ಕೋವಿಡ್ ಎರಡನೇ ಅಲೆಯನ್ನು ತಡೆಯಲು ಅನುಕೂಲವಾಗುತ್ತದೆ. ದೀರ್ಘವಾಗಿ ಉಸಿರಾಡುವುದರಿಂದ ಶ್ವಾಸಕೋಶಕ್ಕೆ ಆಮ್ಲಜನಕ ಸರಬರಾಜಾಗುತ್ತದೆ ಹಾಗೂ ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚಳಕ್ಕೆ ಸಹಕಾರಿಯಾಗಲಿದೆ ಎಂದರಲ್ಲದೆ, ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯ ವೃದ್ಧಿಸುತ್ತದೆ ಎಂದು ಯೋಗ ಹಾಗೂ ಪ್ರಾಣಾಯಾಮದ ಮಹತ್ವ ತಿಳಿಸಿದರು.

ದೇವನಹಳ್ಳಿ ಪುರಸಭೆ ಅಧ್ಯಕ್ಷರಾದ ರೇಖಾ ವೇಣುಗೋಪಾಲ್, ಸದಸ್ಯರಾದ ರವೀಂದ್ರ, ಸುರೇಶ್, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ.ಅಕ್ಕಿಮ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ತಹಶೀಲ್ದಾರ್ ಅನಿಲ್‌ಕುಮಾರ್, ಪುರಸಭೆ ಮುಖ್ಯಾಧಿಕಾರಿ ನಾಗರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ: ಶಿರವಾರ MPCSಗೆ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ಶಿರವಾರ MPCSಗೆ ಅವಿರೋಧ ಆಯ್ಕೆ

ಶಿರವಾರ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ಪ್ರಕ್ರಿಯೆ ನಡೆಸಲಾಯಿತು.

[ccc_my_favorite_select_button post_id="119566"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಪ್ಯಾಕ್ಟರಿ ಪ್ರದೇಶದಲ್ಲಿ ಅಸ್ಥಿಪಂಜರ ಪತ್ತೆ.. ಮರದಲ್ಲಿ ನೇತಾಡುತ್ತಿದ್ದ ಬುರುಡೆ..!

ದೊಡ್ಡಬಳ್ಳಾಪುರ: ಪ್ಯಾಕ್ಟರಿ ಪ್ರದೇಶದಲ್ಲಿ ಅಸ್ಥಿಪಂಜರ ಪತ್ತೆ.. ಮರದಲ್ಲಿ ನೇತಾಡುತ್ತಿದ್ದ ಬುರುಡೆ..!

ಸುಮಾರು 4,5 ತಿಂಗಳ ಹಿಂದೆ ಕಾರ್ಖಾನೆಗೆ ಸೇರಿದ ನಿರ್ಜನ ಪ್ರದೇಶದಲ್ಲಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗುತ್ತಿರುವ ವ್ಯಕ್ತಿಯೋರ್ವನ ಅಸ್ಥಿಪಂಜರ (Skeleton) ನಗರದ ಹೊರವಲಯದಲ್ಲಿರುವ ಬ್ಯಾಂಕ್ ಸರ್ಕಲ್ ಬಳಿ ಪತ್ತೆಯಾಗಿದೆ.

[ccc_my_favorite_select_button post_id="119569"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!