ನಿರಂತರವಾಗಿ ಯೋಗ ಮುಂದುವರಿಸಿ, ಉತ್ತಮ ಆರೋಗ್ಯ ಪಡೆಯಿರಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಸಂದರ್ಭದಲ್ಲಿ ಯೋಗ ಮತ್ತು ಪ್ರಾಣಾಯಾಮ ಮಾಡುವುದರಿಂದ ಶ್ವಾಸಕೋಶ ಹಾಗೂ ಉಸಿರಾಟದ ಸಮಸ್ಯೆ ನಿವಾರಣೆಯಾಗುತ್ತದೆ ಹಾಗೂ ಯೋಗವನ್ನು ನಿರಂತರವಾಗಿ ಮುಂದುವರಿಸಿಕೊಂಡು ಹೋದರೆ ಉತ್ತಮ ಆರೋಗ್ಯವನ್ನು ಪಡೆದುಕೊಳ್ಳಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.

“ಸ್ವಾತಂತ್ರ್ಯದ 75ನೇ ವರ್ಷ, ಸ್ವಾತಂತ್ರ್ಯದ ಅಮೃತ  ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆಯುಷ್ ಇಲಾಖೆ ಹಾಗೂ ಸುರಪನೇನಿ ವಿದ್ಯಾಸಾಗರ್ ಫೌಂಡೇಶನ್ ವತಿಯಿಂದ ದೇವನಹಳ್ಳಿ ಪುರಸಭಾ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಯೋಗ ಹಾಗೂ ಪ್ರಾಣಾಯಾಮ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆರೋಗ್ಯ ವೃದ್ಧಿ ಯೋಗ ಹಾಗೂ ಪ್ರಾಣಾಯಾಮ ಏರ್ಪಡಿಸಲಾಗಿದೆ. ಯೋಗ ಮಾಡುವುದರಿಂದ ಹಲವು ಉಪಯೋಗಗಳಿದ್ದು, ಯೋಗದಿಂದ ಅಧಿಕಾರಿಗಳು ಕ್ರೀಯಾಶೀಲವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಹಾಗೂ ಕೋವಿಡ್ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ಜನರಿಗೆ ಆರೋಗ್ಯ ಮುಖ್ಯವಾಗಿದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಕರೋನಾ ವಾರಿಯರ್ಸ್‌ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಉತ್ಸಾಹ ತುಂಬಲು ಯೋಗ ಹಾಗೂ ಪ್ರಾಣಾಯಾಮ ಶಿಬಿರ ಏರ್ಪಡಿಸಿರುವುದು ಶ್ಲಾಘನೀಯ ಎಂದರಲ್ಲದೆ, ಮುಂದಿನ ದಿನಗಳಲ್ಲಿ ಆಸ್ಪತ್ರೆಗಳು ಹಾಗೂ ಶಾಲಾ ಕಾಲೇಜುಗಳಲ್ಲಿಯೂ ಯೋಗ ಹಾಗೂ ಪ್ರಾಣಾಯಾಮ ಮಾಡಿಸುವಂತೆ ತಿಳಿಸಲಾಗುವುದು ಎಂದು ಹೇಳಿದರು.

ಸೂರಪನೇನಿ ವಿದ್ಯಾ ಸಾಗರ್ ಫೌಂಡೇಶನ್‌ನ ಅಧ್ಯಕ್ಷ ವಿದ್ಯಾಸಾಗರ್ ಅವರು ಮಾತನಾಡಿ, ಪ್ರಾಣಾಯಾಮ ಎಂದರೆ ಉಸಿರಾಟದ ಪ್ರಯಾಣ ಎಂದರ್ಥ, ಪ್ರಾಣಾಯಾಮ ಮಾಡುವುದರಿಂದ ಶ್ವಾಸಕೋಶ ಹಾಗೂ ಕಂಠದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ, ಕೋವಿಡ್ ಎರಡನೇ ಅಲೆಯನ್ನು ತಡೆಯಲು ಅನುಕೂಲವಾಗುತ್ತದೆ. ದೀರ್ಘವಾಗಿ ಉಸಿರಾಡುವುದರಿಂದ ಶ್ವಾಸಕೋಶಕ್ಕೆ ಆಮ್ಲಜನಕ ಸರಬರಾಜಾಗುತ್ತದೆ ಹಾಗೂ ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚಳಕ್ಕೆ ಸಹಕಾರಿಯಾಗಲಿದೆ ಎಂದರಲ್ಲದೆ, ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯ ವೃದ್ಧಿಸುತ್ತದೆ ಎಂದು ಯೋಗ ಹಾಗೂ ಪ್ರಾಣಾಯಾಮದ ಮಹತ್ವ ತಿಳಿಸಿದರು.

ದೇವನಹಳ್ಳಿ ಪುರಸಭೆ ಅಧ್ಯಕ್ಷರಾದ ರೇಖಾ ವೇಣುಗೋಪಾಲ್, ಸದಸ್ಯರಾದ ರವೀಂದ್ರ, ಸುರೇಶ್, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ.ಅಕ್ಕಿಮ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ತಹಶೀಲ್ದಾರ್ ಅನಿಲ್‌ಕುಮಾರ್, ಪುರಸಭೆ ಮುಖ್ಯಾಧಿಕಾರಿ ನಾಗರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದಿನ ಭವಿಷ್ಯ: ಈ ರಾಶಿಯವರಿಂದು ಉದ್ವಿಗ್ನತೆಗೆ ಒಳಗಾಗದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಉದ್ವಿಗ್ನತೆಗೆ ಒಳಗಾಗದಿರಿ

ರಾಹುಕಾಲ: 07:30AM ರಿಂದ 09:00AM ಗುಳಿಕಕಾಲ: 01:30PM ರಿಂದ 03:00PM ಯಮಗಂಡಕಾಲ: 10:30AM ರಿಂದ 12:00PM Astrology

[ccc_my_favorite_select_button post_id="120054"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!