ಅಸಂಘಟಿತ ವಲಯದ ಕಾರ್ಮಿಕರಿಗೆ ಸೌಲಭ್ಯಗಳನ್ನು ತುರ್ತಾಗಿ ತಲುಪಿಸಿ: ಸಿಇಒ ಎಂ.ಆರ್.ರವಿಕುಮಾರ್

ಬೆಂ.ಗ್ರಾ.ಜಿಲ್ಲೆ: ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ತುರ್ತಾಗಿ ತಲುಪಿಸುವಂತಹ ಕೆಲಸ ಮಾಡಬೇಕು ಎಂದು ಬೆಂಗಳೂರು ಗ್ರಾಮಾಂತರ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ, ಕೋವಿಡ್-19 ಎರಡನೇ ಅಲೆಯ ತೀವ್ರತೆಯಿಂದ ಸಂಕಷ್ಟದಲ್ಲಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅಸಂಘಟಿತ ಕಾರ್ಮಿಕರಿಗೆ ಪರಿಹಾರ ಧನ ನೀಡುವ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ತಾಲ್ಲೂಕು ಮಟ್ಟದ ಕಾರ್ಮಿಕ ಅಧಿಕಾರಿಗಳು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿ ಪರಿಹಾರ ಒದಗಿಸಬೇಕು ಎಂದು ಸೂಚಿಸಿದರು. 

ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ್ ಅವರು ಮಾತನಾಡಿ, ಜಿಲ್ಲೆಯಲ್ಲಿರುವ ಅಸಂಘಟಿತ ವಲಯದ ಕಾರ್ಮಿಕರು ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಪಡೆಯಬೇಕು ಹಾಗೂ ಕಾರ್ಮಿಕ ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಿ ಅವರಿಗೆ ಸೂಕ್ತ ಸಹಾಯಧನ ತಲುಪುವಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು. 

ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ಕೋವಿಡ್-19 ಪರಿಹಾರ ನಿಧಿಯು ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ತಲುಪಲಿದ್ದು, ಈ ಕುರಿತಂತೆ ವಿವಿಧ ಸಂಘ ಸಂಸ್ಥೆಗಳು ತಮ್ಮಲ್ಲಿ ನೋಂದಣಿಯಾಗಿರುವ ಕಾರ್ಮಿಕರಿಗೆ ತಿಳಿಸಬೇಕು. ಇದರಿಂದ ಹಲವರಲ್ಲಿರುವ ಗೊಂದಲ ನಿವಾರಣೆಯಾಗಲಿದೆ ಎಂದರು.

ಕಳೆದ ಬಾರಿ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕೆಲವರಿಗೆ ಸಹಾಯಧನ ತಲುಪುವುದು ವಿಳಂಬವಾಗಿದ್ದು, ಹೊಸದಾಗಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಬ್ಯಾಂಕ್ ಖಾತೆಗೆ ಆಧಾರ್ ಜೊಡಣೆಯಾಗಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಖಾತರಿ ಪಡಿಸಿಕೊಂಡು ಅರ್ಜಿ ಸಲ್ಲಿಸಬೇಕು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಅಸಂಘಟಿತ ವಲಯದ ಕಾರ್ಮಿಕರ ಜೊತೆ ಆಗಿಂದಾಗ್ಗೆ ಸಭೆಗಳನ್ನು ನಡೆಸುವ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ತಿಳಿಸಿದರು. 

ಸಭೆಯಲ್ಲಿ ಸಹಾಯಕ ಕಾರ್ಮಿಕ ಆಯುಕ್ತರಾದ ತಮ್ಮಣ್ಣ, ವೀಣಾ, ಕಾರ್ಮಿಕ ಅಧಿಕಾರಿ ನಾಗೇಂದ್ರ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಭವ್ಯಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಅಸಂಘಟಿತ ವಲಯದ ಕಾರ್ಮಿಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="111004"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!