ಕೇಂದ್ರ ಸರ್ಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಸ್ವಾಗತವೇ…?

ರಾಷ್ಟ್ರೀಯ ಶಿಕ್ಷಣ ನೀತಿಯದ್ದೆ ಈಗ ಎಲ್ಲೆಡೆ ಚರ್ಚೆ. ದೇಶದ ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಬದಲಿಸುವ ಈ ಕ್ರಾಂತಿಕಾರಿ ನೀತಿಯಲ್ಲಿ ಏನಿದೆ ಎಂಬ ಕುತೂಹಲ ವಿದ್ಯಾರ್ಥಿಗಳಿಂದ ಹಿಡಿದು ಶಿಕ್ಷಣ ತಜ್ಞರ ವರೆಗೂ ಇದೆ. ಈ ಕುರಿತು ದೊಡ್ಡಬಳ್ಳಾಪುರದ ಶ್ರೀ ದೇವರಾಜ್ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಸ್ವಾಗತವೇ ಆದರೆ.. ನಾಲ್ಕು ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಭೋದನೆಯನ್ನು ಕೇವಲ ಒಂದು ವರ್ಷಕ್ಕೆ ಅಂದರೆ ಎರಡು ಸೆಮಿಸ್ಟರ್ ಗಳಿಗೆ ಮಾತ್ರ ಸೀಮಿತಗೊಳಿಸಿರುವುದು, ಕನ್ನಡ ಭಾಷೆಗೆ, ಕನ್ನಡ ಕಲಿಯುವ ಪ್ರತಿಭೆಗಳಿಗೆ ಹಾಗೂ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಅವರು ಆರೋಪಿಸಿದ್ದಾರೆ .

ಮೂರು ವರ್ಷಗಳ ಪದವಿಯಲ್ಲಿ ಎರಡು ವರ್ಷ ಅಥವಾ ನಾಲ್ಕು ಸೆಮಿಸ್ಟರ್ ಗಳಲ್ಲಿ ವಿದ್ಯಾರ್ಥಿಗಳು ಕನ್ನಡ ಕಲಿಯುತ್ತಿದ್ದರು. ಆದರೆ ಈಗ ನಾಲ್ಕು ವರ್ಷಗಳ ಪದವಿಯಲ್ಲಿ ಕೇವಲ ಒಂದೇ ವರ್ಷಕ್ಕೆ ಸೀಮಿತಗೊಳಿಸಿರುವುದು ಸಮಂಜಸವಲ್ಲ.

ಇದು ಕನ್ನಡ ಜನ, ಕನ್ನಡ ನಾಡು ನುಡಿಯ ಕಡಗಣನೆ. ಹಾಗಾಗಿ ಕನಿಷ್ಟ ಮೂರು ವರ್ಷಗಳಿಗೆ ಅಂದರೆ ಆರು ಸೆಮಿಸ್ಟರ್ ಗಳಲ್ಲಿ ವಿದ್ಯಾರ್ಥಿಗಳು ಕನ್ನಡ ಕಲಿಯಲು ಸರ್ಕಾರ ನೂತನ ಶಿಕ್ಷಣ ನೀತಿಯಲ್ಲಿ ಅವಕಾಶ ಮಾಡಿಕೊಡಬೇಕು ಎಂದವರು ಒತ್ತಾಯಿಸಿದ್ದಾರೆ‌.

ಕರ್ನಾಟಕದ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್ ಗಳಲ್ಲಿ ಕನ್ನಡ ಭಾಷೆಯ ಬೋಧನೆಗೆ ಕೇವಲ ಒಂದು ವರ್ಷ ಅಂದರೆ ಎರಡು ಸೆಮಿಸ್ಟರ್ ಗಳಿಗೆ ಮಾತ್ರ ನಿಗದಿಗೊಳಿಸಿರುವುದು  ಅವೈಜ್ಞಾನಿಕ, ಅಶೈಕ್ಷಣಿಕ ಹಾಗೂ ಅಸಾಂಸ್ಕೃತಿಕ ನಿಲುವಾಗಿದೆ.

ಜೀವನಪೂರ್ತಿ ಭಾಷೆ ಬಳಸಬೇಕಾಗಿರುವ ವಿದ್ಯಾರ್ಥಿಗಳು ಇನ್ನೂ ಎರಡು ವರ್ಷ ಭಾಷೆ ಕುರಿತು  ಓದಿದಲ್ಲಿ ಯಾರಿಗೂ ಯಾವುದೇ ನಷ್ಟ ಆಗುವುದಿಲ್ಲ ಬದಲಾಗಿ ನಮ್ಮ ಭಾಷೆ, ನಮ್ಮನಾಡು, ನಮ್ಮಸಂಸ್ಕೃತಿ, ಸಾಹಿತ್ಯ ಮೊದಲಾದುವುಗಳ ಸ್ಪಷ್ಟ  ಅರಿವಿಗೆ ವೇದಿಕೆ ಕಲ್ಪಿಸಿದಂತಾಗುತ್ತದೆ.

ಆದ ಕಾರಣ ಕೇಂದ್ರ ಸರ್ಕಾರ ಈ ಕುರಿತು ಗಮನಹರಿಸಿ ಕರ್ನಾಟಕದ 4 ವರ್ಷದ ಪದವಿ ಕೋರ್ಸ್ ಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ 6 ಸೆಮಿಸ್ಟರ್ ಗಳಲ್ಲಿ ಅಂದರೆ ಮೂರು ವರ್ಷಗಳಲ್ಲಿ ಕಲಿಯುವಂತೆ, ಕಲಿಸುವಂತೆ, ವ್ಯವಸ್ಥೆ ಮಾಡುವ ಮೂಲಕ ಕನ್ನಡ ನಾಡು, ನುಡಿ, ಸಂಸ್ಕೃತಿ, ಸಾಹಿತ್ಯದ ಉಳಿವು ಮತ್ತು ಅಧ್ಯಯನಕ್ಕೆ ಮಹತ್ವ ಕೊಡಬೇಕು ಎಂದವರು ಒತ್ತಾಯಿಸಿದ್ದಾರೆ‌.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…. 

ರಾಜಕೀಯ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

ಜೆಡಿಎಸ್ ಪಕ್ಷವನ್ನು ರಾಜ್ಯಾದ್ಯಂತ ಸಂಘಟಿಸುತ್ತಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಹೋದಲೆಲ್ಲಾ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

[ccc_my_favorite_select_button post_id="110752"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!