ಇಂದು ವಿಶ್ವ ಅಪ್ಪಂದಿರ ದಿನ: ಬದುಕು ರೂಪಿಸಿದ ಅಪ್ಪನೆಂಬ ಸೂಪರ್ ಹೀರೋ

ಅಪ್ಪ – ಎಲ್ಲ ಮಕ್ಕಳ ಪಾಲಿನ ಮೊದಲ ಸೂಪರ್ ಹೀರೋ. ಅದರಲ್ಲೂ ಹೆಣ್ಣು ಮಕ್ಕಳ ಪಾಲಿಗಂತೂ ಆತ ಯಾವಾಗಲೂ ಪ್ರಥಮ ಪ್ರೀತಿಯಾಗಿರುತ್ತಾನೆ. ಅಪ್ಪ ಅನ್ನುವ ಬಂಧವೇ ಅಂಥದ್ದು. ಅಪ್ಪ ಅಂದರೆ ಕೆಲವರಿಗೆ ಸಿಡುಕು, ಗಂಭೀರ ಮುಖವೊಂದು ನೆನಪಾಗಬಹುದು, ಹಾಗೆಯೇ ಹೆಗಲಿಗೇರಿಸಿಕೊಂಡು ನಡೆದ ಜೀವವೊಂದು ಕಣ್ಣ ಮುಂದೆ ಸುಳಿದು ಹೋಗಬಹುದು. ಚಿಕ್ಕಂದಿನಲ್ಲಿ ಶಿಕ್ಷೆ ಕೊಡುವ, ಗದರುವ ಅಪ್ಪ , ಬೆಳೆಯುತ್ತಿದ್ದಂತೆ ಹೆಗಲ ಮೇಲೆ ಕೈ ಹಾಕಿಕೊಂಡು ನಡೆಯುವ ಸ್ನೇಹಿತನಾಗುತ್ತಾನೆ.

ಅಮ್ಮ ಎನ್ನುವ ದೇವತೆ ಹೊತ್ತು, ಹೆತ್ತು ಹಾಲನ್ನಿತ್ತು ಬೆಳೆಸಿದರೆ, ಅಪ್ಪ ಅನ್ನೋ ಜೀವ ಮಗುವಿಗೆ ಬಲ ತುಂಬುತ್ತದೆ, ರಕ್ಷಣೆ ಒದಗಿಸುತ್ತದೆ. ಮೌನವಾಗಿಯೇ ನಮ್ಮೆಲ್ಲ ಜವಾಬ್ದಾರಿಯನ್ನು ಹೊರುವ ಅಪ್ಪ ಮಳೆ, ಚಳಿ, ಗಾಳಿ ಎನ್ನದೇ ನಮಗಾಗಿ ಬೆವರು ಸುರಿಸುತ್ತಾನೆ. ನಿದ್ದೆಗೆಡುತ್ತಾನೆ. ನಿಮಗಾಗಿ ಬದುಕು ತೆತ್ತೆ ಎನ್ನದ ಅಪ್ಪ ಸದಾ ನಮಗಾಗಿಯೇ ಹೆಣಗಾಡುತ್ತಾನೆ.

ಬದುಕಿಗೆ ಅರ್ಥ, ಸಮಾಜದಲ್ಲಿ ಅಸ್ತಿತ್ವವನ್ನು ಒದಗಿಸಿಕೊಟ್ಟವರು ಅಪ್ಪ. ಈ ಅಪ್ಪ ಎಂಬ ಅಪರೂಪದ ಮನುಷ್ಯ ಅಮ್ಮನಂತೆ ಸಲುಗೆಯಿಂದ ಇರುವುದು ಕಡಿಮೆ. ಹೀಗಾಗಿ ಅಪ್ಪನಿಗೆ ಸಲ್ಲಬೇಕಾದ ಪ್ರೀತಿಯ ಪಾಲು ಕೂಡ ಅಮ್ಮನತ್ತವೇ ಹರಿದು ಬಿಡುತ್ತದೆ. ಮಕ್ಕಳ ಭವಿಷ್ಯಕ್ಕಾಗಿ ಶಿಸ್ತಿನ ಸಿಪಾಯಿಯ ಪಾತ್ರ ನಿರ್ವಹಿಸುವ ಆತ ಜೀವನದುದ್ದಕ್ಕೂ ಕೊಂಚ ಗಡುಸಾಗಿಯೇ ಕಾಣಿಸಿಕೊಳ್ಳುತ್ತಾನೆ. ಆದರೆ ಅವನಲ್ಲಿಯೂ ಆಕಾಶದಷ್ಟು ಪ್ರೀತಿ, ವಾತ್ಸಲ್ಯ, ಮಮತೆಯಿರುತ್ತದೆ. ಅವುಗಳನ್ನು ನಮ್ಮ ಮೂಲಕ ನನಸು ಮಾಡಿಕೊಳ್ಳುವ ಪ್ರಯತ್ನ ಆತನನ್ನು ಕೊಂಚ ಕಠಿನನನ್ನಾಗಿ ಮಾಡುತ್ತದೆ.

ಅಮ್ಮ ಎಂಬ ಪದಕ್ಕಿರುವಷ್ಟೇ ಅನಂತ ವಿಸ್ತಾರ ಅಪ್ಪನೆಂಬ ಪದಕ್ಕೂ ಇದೆ. ಅಪ್ಪನೆಂದರೆ ವಿಶ್ವಾಸ, ಭರವಸೆ. ಜೀವ ಕೊಟ್ಟು, ಜೀವನ ರೂಪಿಸಿದ ಅಪ್ಪ – ಅಮ್ಮಂದಿರ ದಿನ ಒಂದು ದಿನಕ್ಕೆ ಸೀಮಿತವಲ್ಲ. ಈ ಜಗತ್ತು ನಡೆಯುತ್ತಿರುವುದೇ ಅವರಿಂದ. ಆದರೆ ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ನಮ್ಮಲ್ಲಿ ಕೂಡ ಕೆಲ ವರ್ಷಗಳಿಂದ ಅಮ್ಮಂದಿರ ದಿನದಂತೆ, ಅಪ್ಪಂದಿರ ದಿನ ಕೂಡ ಪ್ರಚಲಿತಕ್ಕೆ ಬರುತ್ತಿದೆ. ತಂದೆ -ತಾಯಿ ಎಂದರೆ ದೇವರೆಂದು ಪೂಜಿಸುವ ನಮ್ಮ ದೇಶದಲ್ಲಿ ವರ್ಷಗಳು ಕಳೆದಂತೆ ಈ ದಿನ ಮಹತ್ವ ಪಡೆಯುತ್ತಲೇ ಸಾಗಿದೆ.

ರಾಷ್ಟ್ರೀಯ ತಂದೆಯಂದಿರ ದಿನಾಚರಣೆ ಸಮಿತಿಯ ಅನ್ವಯ 1910ರಲ್ಲಿ ವಾಷಿಂಗ್ಟನ್‌ನಲ್ಲಿ ಮೊದಲ ಬಾರಿಗೆ ತಂದೆಯಂದಿರ ದಿನಾಚರಣೆ ಪ್ರಾರಂಭಿಸಿದ್ದು, ಪ್ರತಿವರ್ಷ ಜೂನ್‌ ತಿಂಗಳ ಮೂರನೇ ಭಾನುವಾರವನ್ನು “ವಿಶ್ವ ಅಪ್ಪಂದಿರ ದಿನ’ ಎಂದು ಆಚರಿಸಲಾಗುತ್ತದೆ. ಈ ದಿನ ತಂದೆಯ ತ್ಯಾಗ, ಕುಟುಂಬದ ಸುಖಕ್ಕಾಗಿ ಆತ ಪಡುವ ಕಷ್ಟ ಎಲ್ಲವನ್ನೂ ಸ್ಮರಿಸುತ್ತಾ ಆತನಿಗೆ ಅಭಿನಂದನೆ ಮತ್ತು ಗೌರವ ಸಲ್ಲಿಸಲಾಗುತ್ತದೆ.

ಬದುಕು ರೂಪಿಸಿದ, ಜೀವನ ಪಾಠ ಕಲಿಸಿದ, ಕಿರು ಬೆರಳ ಹಿಡಿದು ಮುನ್ನಡೆಸಿದ ಅಕ್ಕರೆಯ ಅಪ್ಪನಿಗೊಂದು ಕೃತಜ್ಞತೆ ಹೇಳುವ ದಿನವಿದು.(ಸಂಗ್ರಹ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!