ರಂಗ ಶಿಕ್ಷಣವೂ ಅಂಕಗಳಿಕೆಯ ಪದ್ದತಿಗೆ ಒಳಪಟ್ಟಾಗಲೇ ಅದರ ಪ್ರಾಮುಖ್ಯತೆ ಹೆಚ್ಚಾಗಲು ಸಾಧ್ಯ: ಟಿ.ಎಸ್‌.ನಾಗಾಭರಣ

ಬೆಂಗಳೂರು: ಪದವಿ ತರಗತಿಗಳಲ್ಲಿ ರಂಗಶಿಕ್ಷಣದ ಶೈಕ್ಷಣಿಕ ಮಹತ್ವ ಬಹಳ ಹೆಚ್ಚಾಗಿದೆ. ಆದರೆ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಬೇಕಾದರೆ ಅದನ್ನು ಅಂಕಗಳಿಕೆಯ ಪದ್ದತಿಗೆ ಅಳವಡಿಸುವುದು ಅಗತ್ಯ ಎಂದು ಹಿರಿಯ ರಂಗಕರ್ಮಿ ಹಾಗೂ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌ ನಾಗಾಭರಣ ಅಭಿಪ್ರಾಯಪಟ್ಟರು. 

ವೆಬಿನಾರ್‌ ಮೂಲಕ ಕಾಲೇಜು ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರ, ಸುರಾನಾ ಕಾಲೇಜು ಸಂಯುಕ್ತಾಶ್ರಯದಲ್ಲಿ ಹಾಗೂ ಎರಡೂ ಕಾಲೇಜುಗಳ ಐ.ಕ್ಯೂ.ಎ.ಸಿ ಸಮಿತಿಯ ಸಹಕಾರ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಪ್ರದರ್ಶನ ಕಲಾ ವಿಭಾಗ ಇವರ ಸಹಯೋಗದಲ್ಲಿ ಆಯೋಜಿಸಲಾಗಿರುವ ಪದವಿ ತರಗತಿಗಳಲ್ಲಿ ರಂಗ ಶಿಕ್ಷಣದ ಮಹತ್ವ (ನಾಟಕ ಪಠ್ಯ – ಪ್ರದರ್ಶನ – ಭೋಧನೆ) ಏಳು ದಿನಗಳ ರಾಷ್ಟಮಟ್ಟದ ಎಫ್‌ಡಿಪಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಪದವಿ ಶಿಕ್ಷಣದಲ್ಲಿ ಅನ್ವಯಿಕ ರಂಗಪ್ರಕಾರವನ್ನು ಅಳವಡಿಸಿಕೊಳ್ಳುವ ಬಗ್ಗೆ ಹೆಚ್ಚಿನ ಚರ್ಚೆ ನಡೆಯಬೇಕಾಗಿದೆ. ಏಕೆಂದರೆ ರಂಗಶಿಕ್ಷಣವನ್ನು ನಾವು ಶಿಕ್ಷಣದ ಶಿಸ್ತಿಗೆ ಅಳವಡಿಸಿಕೊಳ್ಳಬೇಕಾದರೆ ಅದು ಅಗತ್ಯವಾಗಿದೆ. ಆದ್ಯತೆಯ ಶಿಕ್ಷಣ ಪದ್ದತಿಯಲ್ಲಿ ಬೌದ್ದಿಕ ಗ್ರಹಿಕೆಯ ಹೆಚ್ಚಾಗಲು ಇಂತಹ ವಿಷಯಗಳ ಪಠಣ ಅವಶ್ಯಕವಾಗಿದೆ. ರಂಗಭೂಮಿ ಎಂದರೆ ಕೇವಲ ಚಳುವಳಿ ಎಂದಲ್ಲ. ಅದೊಂದು ಪ್ರಭೇದ ಅಷ್ಟೇ. ಆದರೆ, ಮನೋವಿಕಾಸ ಎನ್ನುವುದು ಮತ್ತು ಸಾಂಸ್ಕೃತಿಕ ವಲಯದ ಸೃಷ್ಟಿ ಬಹಳ ದೊಡ್ಡ ಕರ್ತವ್ಯವಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಬರುವ ಹತ್ತು ಹಲವು ಯೋಜನೆಗಳನ್ನು ಅರ್ಥಮಾಡಿಕೊಳ್ಳುವುದು ಬಹಳ ಅಗತ್ಯವಿದೆ. ಅದರಲ್ಲಿ ಏಕರೂಪ ಪಠ್ಯಕ್ರಮ ಇಲ್ಲ. ಸೃಜನಾತ್ಮಕತೆ ಇದೆ, ಭಿನ್ನತೆ ಇದೆ ಅಲ್ಲದೆ ಹೊಸತನದ ಹಾದಿಯನ್ನು ಕಂಡುಕೊಳ್ಳಲು ಅವಕಾಶ ಇದೆ. ಭಾಷೆಯನ್ನು ಬೆಳೆಸುವ ಬಗ್ಗೆ, ಭಾಷೆಯ ನಿರಂತರತೆಯನ್ನು ಕಾಪಾಡುವಲ್ಲಿ, ಸಂಸ್ಕೃತಿಯ ಬೇರುಗಳನ್ನು ಗಟ್ಟಿಗೊಳಿಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ರಂಗಶಿಕ್ಷಣ ಪ್ರಮುಖ ಪಾತ್ರವಹಿಸಲಿದೆ. ಅಲ್ಲದೆ, ಪದವಿ ತರಗತಿಗಳಲ್ಲಿ ರಂಗಶಿಕ್ಷಣದ ಶೈಕ್ಷಣಿಕ ಮಹತ್ವ ಬಹಳ ಹೆಚ್ಚಾಗಿದೆ. ಆದರೆ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಬೇಕಾದರೆ ಅದನ್ನು ಅಂಕಗಳಿಕೆಯ ಪದ್ದತಿಗೆ ಅಳವಡಿಸುವುದು ಅಗತ್ಯ ಎನ್ನುವುದು ನಮ್ಮ ಒತ್ತಾಯವಾಗಿದೆ ಎಂದು ಹೇಳಿದರು.

ಕರ್ನಾಟಕ ನಾಟಕ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾದ ಜೆ. ಲೋಕೇಶ್‌ ಮಾತನಾಡಿ, ಪದವಿ ತರಗತಿಗಳಲ್ಲಿ ಯಾವ ರೀತಿಯ ನಾಟಕಗಳನ್ನು ಪಠ್ಯಪುಸ್ತಕಗಳನ್ನು ಅಳವಡಿಸಬೇಕು ಎನ್ನುವುದಕ್ಕೆ ಸಮಿತಿಗಳು ಹೆಚ್ಚಿನ ಒತ್ತು ನೀಡಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಅನುವು ಮಾಡಿಕೊಡುವಂತಹ ರಂಗ ಚಟುವಟಿಕೆಗಳು ಪಠ್ಯದಲ್ಲಿ ಅಳವಡಿಕೆಯಾಗಬೇಕು. ಅಲ್ಲದೆ, ಆ ಚಟುವಟಿಕೆಗಳನ್ನು ಅಂಕಗಳಿಕೆಯ ಪರಿಧಿಯಲ್ಲಿ ತಂದಲ್ಲಿ ಜನರು ಅದರಲ್ಲಿ ತೊಡಗಿಕೊಳ್ಳುತ್ತಾರೆ ಎಂದು ಅಬಿಪ್ರಾಯಪಟ್ಟರು. 

ಕಾರ್ಯಕ್ರಮದ ನಿರ್ವಹಣೆಯನ್ನು ಸಂಯೋಜಕರಾದ ಸುರಾನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ವತ್ಸಲಾ ಮೋಹನ್‌ ನಡೆಸಿಕೊಟ್ಟರು. ಡಾ. ರಾಜಶೇಖರಯ್ಯ ಮಠಪತಿ, ಸಹಾಯಕ ಪ್ರಧ್ಯಾಪಕರು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರ, ಬೆಂ.ವಿ.ವಿ ಜ್ಞಾನಭಾರತಿ ಕಲಾವಿಭಾಗದ ನಿರ್ದೇಶಕ ಪ್ರದರ್ಶನ, ಡಾ ಹಂಸಿನಿ ನಾಗೇಂದ್ರ. ಸುರಾನಾ ಕಾಲೇಜು ಸೌತ್‌ ಎಂಡ್‌ ರಸ್ತೆ ಪ್ರಾಂಶುಪಾಲೆ ಡಾ ಭವಾನಿ ಎಂ ಆರ್‌, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರದ ಪ್ರಾಂಶುಪಾಲರಾದ ಡಾ ಬಿ ಚಂದ್ರಶೇಖರ್‌, ಕಾರ್ಯಕ್ರಮ ಸಂಯೋಜಕರಲ್ಲೊಬ್ಬರಾದ ಡಾ. ಬಿ.ಆರ್‌. ರಘುನಂದನ್‌ (ಬೇಲೂರು ರಘುನಂದನ್) ವಂದನಾರ್ಪಣೆ ಮಾಡಿದರು. ರಾಜ್ಯ ಮತ್ತು ದೇಶಧ ವಿವಿಧ ಭಾಗಗಳ ಪ್ರಾಧ್ಯಾಪಕರುಗಳು,ರಂಗಾಸಕ್ತರು, ರಂಗನಟರು, ರಂಗಕರ್ಮಿಗಳು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!