ರಂಗ ಶಿಕ್ಷಣವೂ ಅಂಕಗಳಿಕೆಯ ಪದ್ದತಿಗೆ ಒಳಪಟ್ಟಾಗಲೇ ಅದರ ಪ್ರಾಮುಖ್ಯತೆ ಹೆಚ್ಚಾಗಲು ಸಾಧ್ಯ: ಟಿ.ಎಸ್‌.ನಾಗಾಭರಣ

ಬೆಂಗಳೂರು: ಪದವಿ ತರಗತಿಗಳಲ್ಲಿ ರಂಗಶಿಕ್ಷಣದ ಶೈಕ್ಷಣಿಕ ಮಹತ್ವ ಬಹಳ ಹೆಚ್ಚಾಗಿದೆ. ಆದರೆ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಬೇಕಾದರೆ ಅದನ್ನು ಅಂಕಗಳಿಕೆಯ ಪದ್ದತಿಗೆ ಅಳವಡಿಸುವುದು ಅಗತ್ಯ ಎಂದು ಹಿರಿಯ ರಂಗಕರ್ಮಿ ಹಾಗೂ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌ ನಾಗಾಭರಣ ಅಭಿಪ್ರಾಯಪಟ್ಟರು. 

ವೆಬಿನಾರ್‌ ಮೂಲಕ ಕಾಲೇಜು ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರ, ಸುರಾನಾ ಕಾಲೇಜು ಸಂಯುಕ್ತಾಶ್ರಯದಲ್ಲಿ ಹಾಗೂ ಎರಡೂ ಕಾಲೇಜುಗಳ ಐ.ಕ್ಯೂ.ಎ.ಸಿ ಸಮಿತಿಯ ಸಹಕಾರ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಪ್ರದರ್ಶನ ಕಲಾ ವಿಭಾಗ ಇವರ ಸಹಯೋಗದಲ್ಲಿ ಆಯೋಜಿಸಲಾಗಿರುವ ಪದವಿ ತರಗತಿಗಳಲ್ಲಿ ರಂಗ ಶಿಕ್ಷಣದ ಮಹತ್ವ (ನಾಟಕ ಪಠ್ಯ – ಪ್ರದರ್ಶನ – ಭೋಧನೆ) ಏಳು ದಿನಗಳ ರಾಷ್ಟಮಟ್ಟದ ಎಫ್‌ಡಿಪಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಪದವಿ ಶಿಕ್ಷಣದಲ್ಲಿ ಅನ್ವಯಿಕ ರಂಗಪ್ರಕಾರವನ್ನು ಅಳವಡಿಸಿಕೊಳ್ಳುವ ಬಗ್ಗೆ ಹೆಚ್ಚಿನ ಚರ್ಚೆ ನಡೆಯಬೇಕಾಗಿದೆ. ಏಕೆಂದರೆ ರಂಗಶಿಕ್ಷಣವನ್ನು ನಾವು ಶಿಕ್ಷಣದ ಶಿಸ್ತಿಗೆ ಅಳವಡಿಸಿಕೊಳ್ಳಬೇಕಾದರೆ ಅದು ಅಗತ್ಯವಾಗಿದೆ. ಆದ್ಯತೆಯ ಶಿಕ್ಷಣ ಪದ್ದತಿಯಲ್ಲಿ ಬೌದ್ದಿಕ ಗ್ರಹಿಕೆಯ ಹೆಚ್ಚಾಗಲು ಇಂತಹ ವಿಷಯಗಳ ಪಠಣ ಅವಶ್ಯಕವಾಗಿದೆ. ರಂಗಭೂಮಿ ಎಂದರೆ ಕೇವಲ ಚಳುವಳಿ ಎಂದಲ್ಲ. ಅದೊಂದು ಪ್ರಭೇದ ಅಷ್ಟೇ. ಆದರೆ, ಮನೋವಿಕಾಸ ಎನ್ನುವುದು ಮತ್ತು ಸಾಂಸ್ಕೃತಿಕ ವಲಯದ ಸೃಷ್ಟಿ ಬಹಳ ದೊಡ್ಡ ಕರ್ತವ್ಯವಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಬರುವ ಹತ್ತು ಹಲವು ಯೋಜನೆಗಳನ್ನು ಅರ್ಥಮಾಡಿಕೊಳ್ಳುವುದು ಬಹಳ ಅಗತ್ಯವಿದೆ. ಅದರಲ್ಲಿ ಏಕರೂಪ ಪಠ್ಯಕ್ರಮ ಇಲ್ಲ. ಸೃಜನಾತ್ಮಕತೆ ಇದೆ, ಭಿನ್ನತೆ ಇದೆ ಅಲ್ಲದೆ ಹೊಸತನದ ಹಾದಿಯನ್ನು ಕಂಡುಕೊಳ್ಳಲು ಅವಕಾಶ ಇದೆ. ಭಾಷೆಯನ್ನು ಬೆಳೆಸುವ ಬಗ್ಗೆ, ಭಾಷೆಯ ನಿರಂತರತೆಯನ್ನು ಕಾಪಾಡುವಲ್ಲಿ, ಸಂಸ್ಕೃತಿಯ ಬೇರುಗಳನ್ನು ಗಟ್ಟಿಗೊಳಿಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ರಂಗಶಿಕ್ಷಣ ಪ್ರಮುಖ ಪಾತ್ರವಹಿಸಲಿದೆ. ಅಲ್ಲದೆ, ಪದವಿ ತರಗತಿಗಳಲ್ಲಿ ರಂಗಶಿಕ್ಷಣದ ಶೈಕ್ಷಣಿಕ ಮಹತ್ವ ಬಹಳ ಹೆಚ್ಚಾಗಿದೆ. ಆದರೆ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಬೇಕಾದರೆ ಅದನ್ನು ಅಂಕಗಳಿಕೆಯ ಪದ್ದತಿಗೆ ಅಳವಡಿಸುವುದು ಅಗತ್ಯ ಎನ್ನುವುದು ನಮ್ಮ ಒತ್ತಾಯವಾಗಿದೆ ಎಂದು ಹೇಳಿದರು.

ಕರ್ನಾಟಕ ನಾಟಕ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾದ ಜೆ. ಲೋಕೇಶ್‌ ಮಾತನಾಡಿ, ಪದವಿ ತರಗತಿಗಳಲ್ಲಿ ಯಾವ ರೀತಿಯ ನಾಟಕಗಳನ್ನು ಪಠ್ಯಪುಸ್ತಕಗಳನ್ನು ಅಳವಡಿಸಬೇಕು ಎನ್ನುವುದಕ್ಕೆ ಸಮಿತಿಗಳು ಹೆಚ್ಚಿನ ಒತ್ತು ನೀಡಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಅನುವು ಮಾಡಿಕೊಡುವಂತಹ ರಂಗ ಚಟುವಟಿಕೆಗಳು ಪಠ್ಯದಲ್ಲಿ ಅಳವಡಿಕೆಯಾಗಬೇಕು. ಅಲ್ಲದೆ, ಆ ಚಟುವಟಿಕೆಗಳನ್ನು ಅಂಕಗಳಿಕೆಯ ಪರಿಧಿಯಲ್ಲಿ ತಂದಲ್ಲಿ ಜನರು ಅದರಲ್ಲಿ ತೊಡಗಿಕೊಳ್ಳುತ್ತಾರೆ ಎಂದು ಅಬಿಪ್ರಾಯಪಟ್ಟರು. 

ಕಾರ್ಯಕ್ರಮದ ನಿರ್ವಹಣೆಯನ್ನು ಸಂಯೋಜಕರಾದ ಸುರಾನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ವತ್ಸಲಾ ಮೋಹನ್‌ ನಡೆಸಿಕೊಟ್ಟರು. ಡಾ. ರಾಜಶೇಖರಯ್ಯ ಮಠಪತಿ, ಸಹಾಯಕ ಪ್ರಧ್ಯಾಪಕರು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರ, ಬೆಂ.ವಿ.ವಿ ಜ್ಞಾನಭಾರತಿ ಕಲಾವಿಭಾಗದ ನಿರ್ದೇಶಕ ಪ್ರದರ್ಶನ, ಡಾ ಹಂಸಿನಿ ನಾಗೇಂದ್ರ. ಸುರಾನಾ ಕಾಲೇಜು ಸೌತ್‌ ಎಂಡ್‌ ರಸ್ತೆ ಪ್ರಾಂಶುಪಾಲೆ ಡಾ ಭವಾನಿ ಎಂ ಆರ್‌, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರದ ಪ್ರಾಂಶುಪಾಲರಾದ ಡಾ ಬಿ ಚಂದ್ರಶೇಖರ್‌, ಕಾರ್ಯಕ್ರಮ ಸಂಯೋಜಕರಲ್ಲೊಬ್ಬರಾದ ಡಾ. ಬಿ.ಆರ್‌. ರಘುನಂದನ್‌ (ಬೇಲೂರು ರಘುನಂದನ್) ವಂದನಾರ್ಪಣೆ ಮಾಡಿದರು. ರಾಜ್ಯ ಮತ್ತು ದೇಶಧ ವಿವಿಧ ಭಾಗಗಳ ಪ್ರಾಧ್ಯಾಪಕರುಗಳು,ರಂಗಾಸಕ್ತರು, ರಂಗನಟರು, ರಂಗಕರ್ಮಿಗಳು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

"ಅನಿಲ ಸಿಲಿಂಡರ್ ಗಳು (LPG) ಸರಿಯಾಗಿ ದೊರೆಯದೆ ಹೋಟೆಲ್ ಉದ್ದಿಮೆ ಮುಚ್ಚುವ ಹಂತಕ್ಕೆ ಬಂದಿದೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಆದರೂ ಕೇಂದ್ರ ಸರ್ಕಾರ ಬಾಯಿಬಿಡುತ್ತಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು

[ccc_my_favorite_select_button post_id="120126"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!