ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗೃತಿ ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ. ಜಗದೀಶ.ಕೆ.ನಾಯಕ

ಬೆಂ.ಗ್ರಾ.ಜಿಲ್ಲೆ: ಮಳೆಗಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ ಹಾಗೂ ಚಿಕನ್ ಗುನ್ಯದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆಯು ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳ ಸಹಕಾರದೊಂದಿಗೆ ಬೀದಿ ನಾಟಕ, ಆಟೋ ಪ್ರಚಾರ ಹಾಗೂ ಕರಪತ್ರಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ .ಕೆ.ನಾಯಕ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನಡೆದ “ಮಲೇರಿಯಾ ವಿರೋಧಿ ಮಾಸಾಚರಣೆ 2021ರ ಅಂಗವಾಗಿ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆ”ಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು. 

ಜಿಲ್ಲೆಯಲ್ಲಿ ಮಲೇರಿಯಾ ಹಾಗೂ ಡೆಂಗ್ಯೂ ಪ್ರಕರಣಗಳು ಇರುವ ಸ್ಥಳಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಜೊತೆಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದರು. 

ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಕಾರ್ಮಿಕರು ಹಂತ ಹಂತವಾಗಿ ಜಿಲ್ಲೆಗೆ ಆಗಮಿಸಲಿದ್ದು, ಕಾರ್ಮಿಕ ಇಲಾಖೆ ಅಧಿಕಾರಿಗಳು ಅಂತಹ ಕಾರ್ಮಿಕರನ್ನು ಗುರುತಿಸಿ ಅವರ ಆರೋಗ್ಯ ತಪಾಸಣೆ ಮಾಡಬೇಕು ಹಾಗೂ ಅವರಲ್ಲಿ ರೋಗದ ಕುರಿತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸುವುದರಿಂದ ಮಲೇರಿಯಾ ಹರಡದಂತೆ ತಡೆಗಟ್ಟಬಹುದು ಎಂದು ತಿಳಿಸಿದರು. 

ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯಿತಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರಲ್ಲದೆ, ಮಳೆಗಾಲ ಪ್ರಾರಂಭವಾಗಿದ್ದು, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಬೇಕು ಹಾಗೂ ನಿಂತ ನೀರಿನಲ್ಲಿ ಸೊಳ್ಳೆಗಳು ಹೆಚ್ಚಾಗಿ ಉತ್ಪತ್ತಿಯಾಗುವುದರಿಂದ ಮಲೇರಿಯಾ, ಡೆಂಗ್ಯೂ ಹಾಗೂ ಚಿಕನ್ ಗುನ್ಯದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚಿಸಿದರು. 

ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಮಲೇರಿಯಾ, ಡೆಂಗ್ಯೂ ಹಾಗೂ ಚಿಕನ್ ಗುನ್ಯ ಕುರಿತು ಆಟೋ ಪ್ರಚಾರ ಮಾಡಲು ಸೂಚಿಸಲಾಗಿದ್ದು, ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆಯ ಕಸ ಸಂಗ್ರಹ ವಾಹನಗಳಲ್ಲಿ ಈ ಕುರಿತು ರೋಗ ಹರಡದಂತೆ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಗತ್ಯ ಪ್ರಚಾರ ಕೈಗೊಳ್ಳುವಂತೆ ಸೂಚಿಸಿದರು. 

ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಅವರು ಮಾತನಾಡಿ, ಇನ್ನು ಕೆಲವು ದಿನಗಳಲ್ಲಿ ಶಾಲಾ-ಕಾಲೇಜುಗಳು  ಪ್ರಾರಂಭವಾಗಲಿದ್ದು, ಶಾಲೆಯ ಸುತ್ತಮುತ್ತ ಸ್ವಚ್ಛತೆಗೆ ಗಮನ ಹರಿಸಬೇಕು ಎಂದರಲ್ಲದೆ, ಮಲೇರಿಯಾ, ಡೆಂಗ್ಯೂ ಹಾಗೂ ಚಿಕನ್ ಗುನ್ಯದಂತಹ ರೋಗ ಹರಡುವ ಸೊಳ್ಳೆಗಳು ಹಗಲಿನ ವೇಳೆಯಲ್ಲಿ ಚಟುವಟಿಕೆ ನಡೆಸುವುದರಿಂದ  ವಿದ್ಯಾರ್ಥಿಗಳಿಗೆ ರೋಗ ಹರಡುವ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳಿಗೆ ಈ ಕುರಿತು ಆನ್‌ಲೈನ್ ತರಗತಿ ವೇಳೆ ಅರಿವು ಮೂಡಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಧರ್ಮೇಂದ್ರ, ಹಿರಿಯ ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪುಷ್ಪಲತಾ.ಜಿ.ರಾಯರ್, ತಾಲ್ಲೂಕು ವೈದ್ಯಾಧಿಕಾರಿಗಳು, ತಾಲ್ಲೂಕು ಕಾರ್ಯನಿರ್ವಾಹಣಾ ಅಧಿಕಾರಿಗಳು, ನಗರಸಭೆ ಹಾಗೂ ಪುರಸಭೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!