ರಂಗ ಶಿಕ್ಷಣವೂ ಅಂಕಗಳಿಕೆಯ ಪದ್ದತಿಗೆ ಒಳಪಟ್ಟಾಗಲೇ ಅದರ ಪ್ರಾಮುಖ್ಯತೆ ಹೆಚ್ಚಾಗಲು ಸಾಧ್ಯ: ಟಿ.ಎಸ್‌.ನಾಗಾಭರಣ

ಬೆಂಗಳೂರು: ಪದವಿ ತರಗತಿಗಳಲ್ಲಿ ರಂಗಶಿಕ್ಷಣದ ಶೈಕ್ಷಣಿಕ ಮಹತ್ವ ಬಹಳ ಹೆಚ್ಚಾಗಿದೆ. ಆದರೆ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಬೇಕಾದರೆ ಅದನ್ನು ಅಂಕಗಳಿಕೆಯ ಪದ್ದತಿಗೆ ಅಳವಡಿಸುವುದು ಅಗತ್ಯ ಎಂದು ಹಿರಿಯ ರಂಗಕರ್ಮಿ ಹಾಗೂ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌ ನಾಗಾಭರಣ ಅಭಿಪ್ರಾಯಪಟ್ಟರು. 

ವೆಬಿನಾರ್‌ ಮೂಲಕ ಕಾಲೇಜು ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರ, ಸುರಾನಾ ಕಾಲೇಜು ಸಂಯುಕ್ತಾಶ್ರಯದಲ್ಲಿ ಹಾಗೂ ಎರಡೂ ಕಾಲೇಜುಗಳ ಐ.ಕ್ಯೂ.ಎ.ಸಿ ಸಮಿತಿಯ ಸಹಕಾರ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಪ್ರದರ್ಶನ ಕಲಾ ವಿಭಾಗ ಇವರ ಸಹಯೋಗದಲ್ಲಿ ಆಯೋಜಿಸಲಾಗಿರುವ ಪದವಿ ತರಗತಿಗಳಲ್ಲಿ ರಂಗ ಶಿಕ್ಷಣದ ಮಹತ್ವ (ನಾಟಕ ಪಠ್ಯ – ಪ್ರದರ್ಶನ – ಭೋಧನೆ) ಏಳು ದಿನಗಳ ರಾಷ್ಟಮಟ್ಟದ ಎಫ್‌ಡಿಪಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಪದವಿ ಶಿಕ್ಷಣದಲ್ಲಿ ಅನ್ವಯಿಕ ರಂಗಪ್ರಕಾರವನ್ನು ಅಳವಡಿಸಿಕೊಳ್ಳುವ ಬಗ್ಗೆ ಹೆಚ್ಚಿನ ಚರ್ಚೆ ನಡೆಯಬೇಕಾಗಿದೆ. ಏಕೆಂದರೆ ರಂಗಶಿಕ್ಷಣವನ್ನು ನಾವು ಶಿಕ್ಷಣದ ಶಿಸ್ತಿಗೆ ಅಳವಡಿಸಿಕೊಳ್ಳಬೇಕಾದರೆ ಅದು ಅಗತ್ಯವಾಗಿದೆ. ಆದ್ಯತೆಯ ಶಿಕ್ಷಣ ಪದ್ದತಿಯಲ್ಲಿ ಬೌದ್ದಿಕ ಗ್ರಹಿಕೆಯ ಹೆಚ್ಚಾಗಲು ಇಂತಹ ವಿಷಯಗಳ ಪಠಣ ಅವಶ್ಯಕವಾಗಿದೆ. ರಂಗಭೂಮಿ ಎಂದರೆ ಕೇವಲ ಚಳುವಳಿ ಎಂದಲ್ಲ. ಅದೊಂದು ಪ್ರಭೇದ ಅಷ್ಟೇ. ಆದರೆ, ಮನೋವಿಕಾಸ ಎನ್ನುವುದು ಮತ್ತು ಸಾಂಸ್ಕೃತಿಕ ವಲಯದ ಸೃಷ್ಟಿ ಬಹಳ ದೊಡ್ಡ ಕರ್ತವ್ಯವಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಬರುವ ಹತ್ತು ಹಲವು ಯೋಜನೆಗಳನ್ನು ಅರ್ಥಮಾಡಿಕೊಳ್ಳುವುದು ಬಹಳ ಅಗತ್ಯವಿದೆ. ಅದರಲ್ಲಿ ಏಕರೂಪ ಪಠ್ಯಕ್ರಮ ಇಲ್ಲ. ಸೃಜನಾತ್ಮಕತೆ ಇದೆ, ಭಿನ್ನತೆ ಇದೆ ಅಲ್ಲದೆ ಹೊಸತನದ ಹಾದಿಯನ್ನು ಕಂಡುಕೊಳ್ಳಲು ಅವಕಾಶ ಇದೆ. ಭಾಷೆಯನ್ನು ಬೆಳೆಸುವ ಬಗ್ಗೆ, ಭಾಷೆಯ ನಿರಂತರತೆಯನ್ನು ಕಾಪಾಡುವಲ್ಲಿ, ಸಂಸ್ಕೃತಿಯ ಬೇರುಗಳನ್ನು ಗಟ್ಟಿಗೊಳಿಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ರಂಗಶಿಕ್ಷಣ ಪ್ರಮುಖ ಪಾತ್ರವಹಿಸಲಿದೆ. ಅಲ್ಲದೆ, ಪದವಿ ತರಗತಿಗಳಲ್ಲಿ ರಂಗಶಿಕ್ಷಣದ ಶೈಕ್ಷಣಿಕ ಮಹತ್ವ ಬಹಳ ಹೆಚ್ಚಾಗಿದೆ. ಆದರೆ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಬೇಕಾದರೆ ಅದನ್ನು ಅಂಕಗಳಿಕೆಯ ಪದ್ದತಿಗೆ ಅಳವಡಿಸುವುದು ಅಗತ್ಯ ಎನ್ನುವುದು ನಮ್ಮ ಒತ್ತಾಯವಾಗಿದೆ ಎಂದು ಹೇಳಿದರು.

ಕರ್ನಾಟಕ ನಾಟಕ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾದ ಜೆ. ಲೋಕೇಶ್‌ ಮಾತನಾಡಿ, ಪದವಿ ತರಗತಿಗಳಲ್ಲಿ ಯಾವ ರೀತಿಯ ನಾಟಕಗಳನ್ನು ಪಠ್ಯಪುಸ್ತಕಗಳನ್ನು ಅಳವಡಿಸಬೇಕು ಎನ್ನುವುದಕ್ಕೆ ಸಮಿತಿಗಳು ಹೆಚ್ಚಿನ ಒತ್ತು ನೀಡಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಅನುವು ಮಾಡಿಕೊಡುವಂತಹ ರಂಗ ಚಟುವಟಿಕೆಗಳು ಪಠ್ಯದಲ್ಲಿ ಅಳವಡಿಕೆಯಾಗಬೇಕು. ಅಲ್ಲದೆ, ಆ ಚಟುವಟಿಕೆಗಳನ್ನು ಅಂಕಗಳಿಕೆಯ ಪರಿಧಿಯಲ್ಲಿ ತಂದಲ್ಲಿ ಜನರು ಅದರಲ್ಲಿ ತೊಡಗಿಕೊಳ್ಳುತ್ತಾರೆ ಎಂದು ಅಬಿಪ್ರಾಯಪಟ್ಟರು. 

ಕಾರ್ಯಕ್ರಮದ ನಿರ್ವಹಣೆಯನ್ನು ಸಂಯೋಜಕರಾದ ಸುರಾನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ವತ್ಸಲಾ ಮೋಹನ್‌ ನಡೆಸಿಕೊಟ್ಟರು. ಡಾ. ರಾಜಶೇಖರಯ್ಯ ಮಠಪತಿ, ಸಹಾಯಕ ಪ್ರಧ್ಯಾಪಕರು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರ, ಬೆಂ.ವಿ.ವಿ ಜ್ಞಾನಭಾರತಿ ಕಲಾವಿಭಾಗದ ನಿರ್ದೇಶಕ ಪ್ರದರ್ಶನ, ಡಾ ಹಂಸಿನಿ ನಾಗೇಂದ್ರ. ಸುರಾನಾ ಕಾಲೇಜು ಸೌತ್‌ ಎಂಡ್‌ ರಸ್ತೆ ಪ್ರಾಂಶುಪಾಲೆ ಡಾ ಭವಾನಿ ಎಂ ಆರ್‌, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರದ ಪ್ರಾಂಶುಪಾಲರಾದ ಡಾ ಬಿ ಚಂದ್ರಶೇಖರ್‌, ಕಾರ್ಯಕ್ರಮ ಸಂಯೋಜಕರಲ್ಲೊಬ್ಬರಾದ ಡಾ. ಬಿ.ಆರ್‌. ರಘುನಂದನ್‌ (ಬೇಲೂರು ರಘುನಂದನ್) ವಂದನಾರ್ಪಣೆ ಮಾಡಿದರು. ರಾಜ್ಯ ಮತ್ತು ದೇಶಧ ವಿವಿಧ ಭಾಗಗಳ ಪ್ರಾಧ್ಯಾಪಕರುಗಳು,ರಂಗಾಸಕ್ತರು, ರಂಗನಟರು, ರಂಗಕರ್ಮಿಗಳು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!