ಕೃಷಿ ಸೌಲಭ್ಯಗಳ ಕುರಿತು ರೈತರಲ್ಲಿ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ರೈತರಿಗೆ ಅನುಕೂಲವಾಗುವಂತೆ  ರಸಗೊಬ್ಬರ, ಬಿತ್ತನೆ ಬೀಜಗಳು, ಕ್ರಿಮಿನಾಶಕ ಸೇರಿದಂತೆ ಕೃಷಿಗೆ ಸಂಬಂಧಿಸಿದ ವಿವಿಧ ಸೌಲಭ್ಯಗಳು ಹಾಗೂ ಪರಿಕರಗಳ ಕುರಿತು ರೈತರಲ್ಲಿ ಅರಿವು ಮೂಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿಂದು ನಡೆದ ಕೃಷಿ ಪರಿಕರಗಳ ಉಸ್ತುವಾರಿ ಸಮಿತಿ, ಕೃಷಿ ಅಭಿಯಾನ ಸಮಿತಿ, ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಪ್ರಧಾನ ಮಂತ್ರಿಗಳ ಸಣ್ಣ ಕೃಷಿ ಸಂಸ್ಕರಣೆ ಉದ್ದಿಮೆದಾರರ ನಿಯಮಿತಗೊಳಿಸುವ ಯೋಜನೆ ಮತ್ತು ಕೃಷಿ ಅಭಿಯಾನ ಸಮಿತಿ  ಚರ್ಚೆಗಳನ್ನೊಳಗೊಂಡ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ ಪರಿಕರಗಳನ್ನು ಒಳಗೊಂಡಂತೆ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಔಷಧಿಗಳನ್ನು ಬಳಸಿಕೊಂಡು ಯಾವ ಯಾವ ಋತುಮಾನದಲ್ಲಿ ವ್ಯವಸಾಯ ಮಾಡಬೇಕು ಎಂಬುದರ ಮಾಹಿತಿಯನ್ನು ನೀಡಬೇಕು‌ ಎಂದರಲ್ಲದೆ, ಇದೀಗ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಮಾಸ್ಟರ್ ಡೇಟಾದ ಬಗ್ಗೆ ಪ್ರಚಾರ ನೀಡಬೇಕು ಹಾಗೂ ರಸಗೊಬ್ಬರವನ್ನು ಎಷ್ಟು ವರ್ಷಗಳ ಕಾಲ ದಾಸ್ತಾನು ಮಾಡಬಹುದು ಎಂದು ಅಧಿಕಾರಿಗಳು ತಿಳಿದಿರಬೇಕು ಎಂದರು. 

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಪ್ರಕೃತಿ ವಿಕೋಪದಿಂದ ಬೆಳೆ ಹಾನಿಗೊಳಪಟ್ಟ ರೈತರು ಅರ್ಜಿ ಸಲ್ಲಿಸಿದರೆ, ಶೀಘ್ರವೇ  ಪರಿಹಾರವನ್ನು ನೀಡಲಾಗುತ್ತದೆ ಎಂದರು.

ಉತ್ತಮ ಮಳೆಯಿಂದಾಗಿ ರಾಗಿ ಬೆಳೆಯು ಹೆಚ್ಚಾಗಿದ್ದು, ಜಿಲ್ಲೆಯಲ್ಲಿ ಈ ವರ್ಷ ಹೆಚ್ಚಿನ ಫಸಲನ್ನು ಪಡೆಯಲಾಗಿದೆ ಎಂದು ಹೇಳಿದರು.

ರೈತರಿಗೆ ಅನುಕೂಲವಾಗುವ ಯೋಜನೆಗಳು, ಬ್ಯಾಂಕಿನಲ್ಲಿ ಒದಗುವ ಸಾಲ ಸೌಲಭ್ಯ, ರಸಗೊಬ್ಬರಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದ್ದು, ರೈತರಿಗೆ ಉಪಯೋಗವಾಗುವ ಮಾಹಿತಿಗಳನ್ನು ಸ್ಥಳೀಯ ಮಟ್ಟದಲ್ಲಿ ಕರಪತ್ರ, ದೂರದರ್ಶನ ಹಾಗೂ ಪತ್ರಿಕೆಗಳಲ್ಲಿ ವ್ಯಾಪಕವಾಗಿ ಪ್ರಚಾರ ನೀಡುವಂತೆ ತಿಳಿಸಿದರು. 

ಪ್ರತಿ ಬೆಳೆಗಳಿಗೆ ಅನುಗುಣವಾಗಿ ಸಾಲ ಒದಗಿಸಲಾಗುತ್ತಿದ್ದು, ರೈತರು ಇನ್ಶೂರೆನ್ಸ್ ಮಾಡಿಸಲು   ಸಂಬಂಧಪಟ್ಟಂತಹ ದಾಖಲೆಗಳಾದ ಬೆಳೆ ದೃಢೀಕರಣ ಪತ್ರ, ಭೂ ದಾಖಲೆ, ಪಹಣಿ, ಕಂದಾಯ ರಶೀದಿ, ಆಧಾರ್ ಕಾರ್ಡ್, ಮೊಬೈಲ್‌ ಸಂಖ್ಯೆ, ನೀಡಬೇಕು ಎಂದರು. 

ರೈತರಿಗೆ ಕಳಪೆ ಮಟ್ಟದ ರಸಗೊಬ್ಬರ ಮಾರಾಟ ಮಾಡುವ ರಸಗೊಬ್ಬರಗಳ ಮಾಲೀಕರ ವಿರುದ್ಧ ಮೊಕದ್ದಮೆ ಹೂಡಿ, ರೈತರಿಗೆ ಪರಿಹಾರಧನವನ್ನು ಒದಗಿಸುವ ಕಾರ್ಯವಾಗಬೇಕು ಎಂದರಲ್ಲದೆ, ಪರವಾನಿಗೆ ಇಲ್ಲದೆ ರಸಗೊಬ್ಬರ ಹಾಗೂ ಕ್ರಿಮಿನಾಶಕ  ಮಾರಾಟ ಮಾಡುವ ಮಾಲೀಕರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದರು. 

ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ ಅವರು ಮಾತನಾಡಿ, ಕೃಷಿಯಲ್ಲಿ ಹೆಚ್ಚಿನ ಉತ್ಪಾದನೆಗೆ ಆದ್ಯತೆ ನೀಡಬೇಕು ಹಾಗೂ ರೈತರಿಗೆ ಕೃಷಿ ಅಭಿಯಾನದಡಿ‌ ಇರುವ ಕಾರ್ಯಕ್ರಮಗಳ ಕುರಿತು ಅಗತ್ಯ ಪ್ರಚಾರ ಮಾಡಬೇಕು ಎಂದರು.

ರೈತರು ಹಾಗೂ ಕೃಷಿ ವಿಜ್ಞಾನಿಗಳ ಜೊತೆ ಸಂವಾದ ನಡೆಸಿ, ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು ಎಂದರಲ್ಲದೆ, ರೈತರಿಗೆಂದೇ ಕೃಷಿಗೆ ಸಂಬಂಧಿಸಿದಂತೆ  ಹಲವಾರು ತಂತ್ರಾಂಶಗಳು ಇದ್ದು ಇದರ ಅನುಕೂಲವನ್ನು ರೈತರು ಪಡೆಯುವಂತೆ ತಿಳಿಸಬೇಕು ಎಂದು ಹೇಳಿದರು.

“ಒಂದು ಜಿಲ್ಲೆ, ಒಂದು ಉದ್ಯಮ” ಯೋಜನೆಯಡಿಯಲ್ಲಿ ಜಿಲ್ಲೆಗೆ ಕುಕ್ಕುಟ(ಪೌಲ್ಟ್ರಿ) ಉದ್ಯಮ ಮಾಡುವವರಿಗೆ ತರಬೇತಿ ನೀಡಬೇಕು ಹಾಗೂ ಬ್ಯಾಂಕುಗಳು ಹಣಕಾಸು ಸೌಲಭ್ಯ ಕಲ್ಪಿಸಬೇಕು ಎಂದರು.

ಹಾಗೂ ಸಣ್ಣ ಉದ್ದಿಮೆ ಮಾಡುವವರು 10ಕ್ಕಿಂತ ಕಡಿಮೆ ಜನ ಹೊಂದಿದ್ದು, 18 ವರ್ಷ ಮೇಲ್ಪಟ್ಟ, ಕನಿಷ್ಠ ಎಂಟನೇ ತರಗತಿಯನ್ನು ಪೂರ್ಣಗೊಳಿಸಿರುವ ಫಲಾನುಭವಿಗಳನ್ನು ಗುರುತಿಸಿ, ಯೋಜನೆಯ ಬಗ್ಗೆ ಮಾಹಿತಿ ನೀಡಬೇಕು ಎಂದು  ಹೇಳಿದರು.

ರೈತರು ಯಾವ ಬೆಳೆಗಳಿಗೆ ಯಾವ ರಸಗೊಬ್ಬರ ಹಾಕಬೇಕು, ಮಣ್ಣಿನ ಫಲವತ್ತತೆ ಪರೀಕ್ಷೆ ನಡೆಸುವುದು ಸಹ ಅಗತ್ಯವಾಗಿದೆ ಎಂದರು.

ಮುಖ್ಯ ಬೆಳೆಗಳಾದ ರಾಗಿ, ತೊಗರಿ, ದ್ರಾಕ್ಷಿ, ಮಾವು ಮುಂತಾದ ಬೆಳೆಗಳಿಗೆ ಯಾವ ರೀತಿಯ ರಸಗೊಬ್ಬರಗಳ ಬಳಸಬೇಕೆಂದು ರೈತರಿಗೆ ತಿಳಿಸಿಕೊಡಬೇಕು ಹಾಗೂ ಕೃಷಿ ಅಭಿಯಾನದಡಿ ಇಲಾಖೆಗಳು ಪ್ರಚಾರ ಮಾಡಬೇಕು ಎಂದು ತಿಳಿಸಿದರು.

ಸಭೆಯ ನಂತರದಲ್ಲಿ ರೈತರು ಬಳಸಬಹುದಾದಂತಹ ವಿವಿಧ ರಸಗೊಬ್ಬರಗಳ ಮಾಹಿತಿ ಒಳಗೊಂಡ ಕರಪತ್ರಗಳನ್ನು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಬಿಡುಗಡೆಗೊಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಕೃಷಿ ಜಂಟಿ ನಿರ್ದೇಶಕ ಜಯಸ್ವಾಮಿ, ಕೃಷಿ ಉಪ ನಿರ್ದೇಶಕಿ ವಿನುತಾ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಾಂತೇಶ ಮುರುಗೋಡು, ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ. ಎನ್.ನಾಗರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಪುಷ್ಪಾ.ಜಿ.ರಾಯರ್, ಲೀಡ್ ಬ್ಯಾಂಕ್‌ನ ವ್ಯವಸ್ಥಾಪಕ ಮಧುಸೂದನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಮಾರೇಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]