ವಾರಾಂತ್ಯದ ಕಫ್ರ್ಯೂ: ಅತ್ಯಾವಶ್ಯಕ ಹಾಗೂ ತುರ್ತು ಸೇವೆಗಳಿಗೆ ಅವಕಾಶ: ಡಿವೈಎಸ್ಪಿ ಟಿ.ರಂಗಪ್ಪ

ದೊಡ್ಡಬಳ್ಳಾಪುರ: ಕೋವಿಡ್ -19 ಎರಡನೇ ಅಲೆ ಹಿನ್ನೆಲೆಯಲ್ಲಿ  ವಾರಾಂತ್ಯದ  ಕಫ್ರ್ಯೂ ಮುಂದುವರಿಸಲಾಗಿದ್ದು, ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅತ್ಯಾವಶ್ಯಕ ಮತ್ತು ತುರ್ತು ಚಟುವಟಿಕೆಗಳಿಗೆ ಮಾತ್ರ ಅವಕಾಶ ಇರಲಿದೆ ಎಂದು ಡಿವೈಎಸ್ಪಿ ಟಿ.ರಂಗಪ್ಪ ತಿಳಿಸಿದ್ದಾರೆ.

ವಾರಾಂತ್ಯದ ಕಫ್ರ್ಯೂ: ಕೋವಿಡ್-19ರ ಎರಡನೇ ಅಲೆ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಸರ್ಕಾರದಿಂದ ಜಾರಿಗೊಳಿಸಲಾದ ಮಾರ್ಗಸೂಚಿಗಳನ್ನು ಜುಲೈ 5 ರವರೆಗೆ ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಲು ಸರ್ಕಾರ ಜೂನ್ 20 ರಂದು ಹೊರಡಿಸಿದ ಆದೇಶದಂತೆ ವಾರಾಂತ್ಯದಲ್ಲಿ  ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ದಿನಸಿ, ತರಕಾರಿ, ಹಾಲು, ಔಷಧಿ, ಮಾಂಸ, ಮೀನು, ಪಶು ಆಹಾರದ ಅಂಗಡಿಗಳು, ಬೀದಿ ಬದಿ ವ್ಯಾಪಾರಿಗಳು, ಸಾರ್ವಜನಿಕ ವಿತರಣಾ ವ್ಯವಸ್ಥೆ  ಅಂಗಡಿಗಳಿಗೆ ಹಾಗೂ ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಅನುಮತಿಸಲಾಗಿದೆ. ಅತ್ಯಾವಶ್ಯಕ ಹಾಗೂ ತುರ್ತು ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ.

ಉಳಿದ ವಾರದ ದಿನಗಳಲ್ಲಿ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ ಐದು ಗಂಟೆವರೆವರೆಗೆ ನಿಗಧಿತ ವ್ಯಾಪಾರ ವಹಿವಾಟಿಗೆ  ಅನುಮತಿ ನೀಡಲಾಗಿದೆ.   ಸೋಮವಾರದಿಂದ ಶುಕ್ರವಾರದವರೆ ರಾತ್ರಿ ಕಫ್ರ್ಯೂ ಸಂಜೆ 7 ರಿಂದ ಬೆಳಿಗ್ಗೆ 5 ಗಂಟೆವರೆಗೆ  ಜಾರಿಯಲ್ಲಿರುತ್ತದೆ. 

ವಾರಾಂತ್ಯದ ಕಫ್ಯೂ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಎಲ್ಲಾ ಉತ್ಪಾದನಾ ಘಟಕಗಳು, ಸಂಸ್ಥೆಗಳು, ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮಥ್ರ್ಯದ ಶೇ.50 ರಷ್ಟು ಸಿಬ್ಬಂದಿಯೊಂದಿಗೆ  ಹಾಗೂ ಗಾರ್ಮೆಂಟ್ ತಯಾರಿಕೆಯಲ್ಲಿ ತೊಡಗಿರುವ  ಉತ್ಪಾದನಾ ಘಟಕಗಳು, ಸಂಸ್ಥೆಗಳು, ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮಥ್ರ್ಯದ ಶೇ.30 ರಷ್ಟು ಸಿಬ್ಬಂದಿಯೊಂದಿಗೆ  ಕೋವಿಡ್-19 ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. 

ಹವಾನಿಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಎಲ್ಲ ಅಂಗಡಿಗಳಿಗೆ ಪ್ರತಿದಿನ ಬೆಳಿಗ್ಗೆ 6 ಸಂಜೆ 5 ಗಂಟೆವರೆಗೆ ಕೋವಿಡ್ ಪ್ರಮಾಣಿಕೃತ ಕಾರ್ಯವಿಧಾನ(ಎಸ್‍ಓಪಿ) ಅನುಸರಿಸಿಕೊಂಡು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಹವಾನಿಯಂತ್ರಿತ ವಾಣಿಜ್ಯ ಸಂಕೀರ್ಣ, ಮಾಲ್‍ಗಳು ಕಾರ್ಯನಿರ್ವಹಿಸಲು ಅವಕಾಶವಿರುವುದಿಲ್ಲ.

ಸಾರ್ವಜನಿಕರು ಹೊರಗಡೆ ಓಡಾಡುವುದನ್ನು ನಿಯಂತ್ರಿಸುವುದಕ್ಕಾಗಿ ಕೋವಿಡ್-19 ನಿರ್ವಹಣೆಯ ಕಾರ್ಯಾಚರಣೆಗಳನ್ನು ರಾಷ್ಟ್ರೀಯ ನಿರ್ದೇಶನಗಳಿಗೆ ಒಳಪಟ್ಟು ಎಲ್ಲಾ ಅವಶ್ಯಕ ವಸ್ತುಗಳನ್ನು ಮನೆ ಮನೆಗೆ 24×7 ಅವಧಿಯಲ್ಲಿ ಪೂರೈಸಲು ಅನುಮತಿಸಲಾಗಿದೆ. ಹವಾನಿಯಂತ್ರಿತ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಕೋವಿಡ್ ಪ್ರಮಾಣಿಕೃತ ಕಾರ್ಯವಿಧಾನ(ಎಸ್‍ಓಪಿ) ಅನುಸರಿಸುವ ಷರತ್ತುಗಳೊಂದಿಗೆ ಹೋಟೆಲ್, ರೆಸ್ಟೋರೆಂಟ್, ಬಾರ್ ಮತ್ತು ಕ್ಲಬ್‍ಗಳಲ್ಲಿ(ಮದ್ಯಪಾನ ಹೊರತುಪಡಿಸಿ) ಕುಳಿತುಕೊಂಡು ಆಹಾರ ಸೇವಿಸಲು ಪ್ರತಿದಿನ ಬೆಳಿಗ್ಗೆ 6 ಸಂಜೆ 5 ಗಂಟವರೆಗೆ ಅನುಮತಿ ನೀಡಲಾಗಿದೆ.  

ಕೋವಿಡ್ ಮಾರ್ಗಸೂಚಿ ಅನುಸರಿಸಿ ಶೇ.50 ಸಾಮಥ್ರ್ಯದೊಂದಿಗೆ ಲಾಡ್ಜ್‍ಗಳು ಮತ್ತು ರೆಸಾರ್ಟ್‍ಗಳಿಗೆ, ಚಲನಚಿತ್ರ, ಟಿವಿ ಧಾರವಾಹಿಗಳಿಗೆ ಹೊರಾಂಗಣ ಚಿತ್ರಿಕರಣಕ್ಕೆ ಅವಕಾಶ ನೀಡಲಾಗಿದೆ. ಕಟ್ಟಡ ನಿರ್ಮಾಣ ಮತ್ತು ದುರಸ್ಥಿಗೆ ಸಂಬಂಧಿಸಿದ ಸಾಮಗ್ರಿಗಳೊಂದಿಗೆ ವ್ಯವಹರಿಸುವ ಅಂಗಡಿಗಳು, ಸಂಸ್ಥೆಗಳಿಗೆ ಪ್ರತಿದಿನ ಬೆಳಿಗ್ಗೆ 6 ಸಂಜೆ 5 ಗಂಟೆವರೆಗೆ ಅನುಮತಿ ನೀಡಲಾಗಿದೆ.

ವಾಕಿಂಗ್ ಉದ್ದೇಶಕ್ಕಾಗಿ ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆವರೆಗೆ ಉದ್ಯಾನವನಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಯಾವುದೇ ಗುಂಪು ಚಟುವಟಿಕೆಗಳಿಗೆ ಅನುಮತಿ ಇರುವುದಿಲ್ಲ. ಶೇ.50 ರಷ್ಟು ಸಾಮಥ್ರ್ಯದೊಂದಿಗೆ  ಜಿಮ್‍ಗಳಿಗೆ(ಹವಾನಿಯಂತ್ರಣ ಇಲ್ಲದೆ) ಅವಕಾಶ ನೀಡಲಾಗಿದೆ.

ಗರಿಷ್ಟ ಇಬ್ಬರು ಪ್ರಯಾಣಿಕರೊಂದಿಗೆ ಟ್ಯಾಕ್ಸಿಗಳು ಮತ್ತು ಆಟೋ ರೀಕ್ಷಾಗಳಿಗೆ ಸಂಚರಿಸಲು ಅನುಮತಿಸಿದೆ. ವೀಕ್ಷರಿಲ್ಲದೆ ಹೊರಾಂಗಣ ಕ್ರೀಡೆಗಳಿಗೆ ಅನುಮತಿ ನೀಡಲಾಗಿದೆ.  ಎಲ್ಲ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಿಗೆ ಸಿಬ್ಬಂದಿಯ ಶೇ.50 ರಷ್ಟು ಸಾಮಥ್ರ್ಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಆರೋಗ್ಯ ವಲಯಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿಗಳಿಗೆ ಅನುಮತಿಸಿದೆ.

ನಿಂತು ಪ್ರಯಾಣಿಸುವುದನ್ನು ನಿರ್ಬಧಿಸಿ ಬಸ್ಸಗಳ ಸಂಚಾರಕ್ಕೆ ಶೇ.50 ರಷ್ಟು ಪ್ರಯಾಣಿಕರಿಗೆ ಮಿತಿಗೊಳಿಸಿ ಅನುಮತಿಸಲಾಗಿದೆ.

ಈಗಾಗಲೇ ನಿಗಧಿಪಡಿಸಲಾಗಿರುವ ಮದುವೆ ಸಮಾರಂಭಗಳನ್ನು ಅವರವರ ಮನೆಗಳಲ್ಲಿಯೇ ಹತ್ತಿರದ ಸಂಬಂಧಿಕರು ಒಳಗೊಂಡಂತೆ 40 ಜನರಿಗೆ ಮೀರದಂತೆ ಅನುಮತಿಸಿದೆ ಹಾಗೂ ಅಂತ್ಯ ಸಂಸ್ಕಾರಕ್ಕೆ ಐದು ಜನರು ಮೀರದಂತೆ ನಡೆಸಲು  ಅನುಮತಿಸಿದೆ.

ಈ ಆದೇಶವು ಕೋವಿಡ್-19 ಕಾರ್ಯನಿರತ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸರ್ಕಾರಿ ವಾಹನಗಳ ಓಡಾಟಕ್ಕೆ ಅನ್ವಯಿಸುವುದಿಲ್ಲ.

ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ಜಿಲ್ಲೆಯಾದ್ಯಂತ ವಿನಾಯಿತಿ ಪಡೆದ ಉದ್ದೇಶಗಳನ್ನು ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕೂ ಅಧಿಕ ವ್ಯಕ್ತಿಗಳ ಸೇರುವಿಕೆಯನ್ನು ನಿಷೇಧಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ರಸ್ತೆ ತಡೆಗೋಡೆ ಮಣ್ಣು ಕುಸಿದು ಮೂವರ ದುರ್ಮರಣ.. ರೂ.5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ರಸ್ತೆ ತಡೆಗೋಡೆ ಮಣ್ಣು ಕುಸಿದು ಮೂವರ ದುರ್ಮರಣ.. ರೂ.5 ಲಕ್ಷ ಪರಿಹಾರ ಘೋಷಿಸಿದ

ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವನಪ್ಪಿದ್ದಾರೆ. ಈ ಕುರಿತಂತೆ ಸಿಎಂ‌ ಸಿದ್ದರಾಮಯ್ಯ (Cm Siddaramaiah) ಸ್ಪಂದಿಸಿದ್ದು, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.

[ccc_my_favorite_select_button post_id="120851"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]