ವಾರಾಂತ್ಯದ ಕಫ್ರ್ಯೂ: ಅತ್ಯಾವಶ್ಯಕ ಹಾಗೂ ತುರ್ತು ಸೇವೆಗಳಿಗೆ ಅವಕಾಶ: ಡಿವೈಎಸ್ಪಿ ಟಿ.ರಂಗಪ್ಪ

ದೊಡ್ಡಬಳ್ಳಾಪುರ: ಕೋವಿಡ್ -19 ಎರಡನೇ ಅಲೆ ಹಿನ್ನೆಲೆಯಲ್ಲಿ  ವಾರಾಂತ್ಯದ  ಕಫ್ರ್ಯೂ ಮುಂದುವರಿಸಲಾಗಿದ್ದು, ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅತ್ಯಾವಶ್ಯಕ ಮತ್ತು ತುರ್ತು ಚಟುವಟಿಕೆಗಳಿಗೆ ಮಾತ್ರ ಅವಕಾಶ ಇರಲಿದೆ ಎಂದು ಡಿವೈಎಸ್ಪಿ ಟಿ.ರಂಗಪ್ಪ ತಿಳಿಸಿದ್ದಾರೆ.

ವಾರಾಂತ್ಯದ ಕಫ್ರ್ಯೂ: ಕೋವಿಡ್-19ರ ಎರಡನೇ ಅಲೆ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಸರ್ಕಾರದಿಂದ ಜಾರಿಗೊಳಿಸಲಾದ ಮಾರ್ಗಸೂಚಿಗಳನ್ನು ಜುಲೈ 5 ರವರೆಗೆ ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಲು ಸರ್ಕಾರ ಜೂನ್ 20 ರಂದು ಹೊರಡಿಸಿದ ಆದೇಶದಂತೆ ವಾರಾಂತ್ಯದಲ್ಲಿ  ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ದಿನಸಿ, ತರಕಾರಿ, ಹಾಲು, ಔಷಧಿ, ಮಾಂಸ, ಮೀನು, ಪಶು ಆಹಾರದ ಅಂಗಡಿಗಳು, ಬೀದಿ ಬದಿ ವ್ಯಾಪಾರಿಗಳು, ಸಾರ್ವಜನಿಕ ವಿತರಣಾ ವ್ಯವಸ್ಥೆ  ಅಂಗಡಿಗಳಿಗೆ ಹಾಗೂ ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಅನುಮತಿಸಲಾಗಿದೆ. ಅತ್ಯಾವಶ್ಯಕ ಹಾಗೂ ತುರ್ತು ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ.

ಉಳಿದ ವಾರದ ದಿನಗಳಲ್ಲಿ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ ಐದು ಗಂಟೆವರೆವರೆಗೆ ನಿಗಧಿತ ವ್ಯಾಪಾರ ವಹಿವಾಟಿಗೆ  ಅನುಮತಿ ನೀಡಲಾಗಿದೆ.   ಸೋಮವಾರದಿಂದ ಶುಕ್ರವಾರದವರೆ ರಾತ್ರಿ ಕಫ್ರ್ಯೂ ಸಂಜೆ 7 ರಿಂದ ಬೆಳಿಗ್ಗೆ 5 ಗಂಟೆವರೆಗೆ  ಜಾರಿಯಲ್ಲಿರುತ್ತದೆ. 

ವಾರಾಂತ್ಯದ ಕಫ್ಯೂ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಎಲ್ಲಾ ಉತ್ಪಾದನಾ ಘಟಕಗಳು, ಸಂಸ್ಥೆಗಳು, ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮಥ್ರ್ಯದ ಶೇ.50 ರಷ್ಟು ಸಿಬ್ಬಂದಿಯೊಂದಿಗೆ  ಹಾಗೂ ಗಾರ್ಮೆಂಟ್ ತಯಾರಿಕೆಯಲ್ಲಿ ತೊಡಗಿರುವ  ಉತ್ಪಾದನಾ ಘಟಕಗಳು, ಸಂಸ್ಥೆಗಳು, ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮಥ್ರ್ಯದ ಶೇ.30 ರಷ್ಟು ಸಿಬ್ಬಂದಿಯೊಂದಿಗೆ  ಕೋವಿಡ್-19 ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. 

ಹವಾನಿಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಎಲ್ಲ ಅಂಗಡಿಗಳಿಗೆ ಪ್ರತಿದಿನ ಬೆಳಿಗ್ಗೆ 6 ಸಂಜೆ 5 ಗಂಟೆವರೆಗೆ ಕೋವಿಡ್ ಪ್ರಮಾಣಿಕೃತ ಕಾರ್ಯವಿಧಾನ(ಎಸ್‍ಓಪಿ) ಅನುಸರಿಸಿಕೊಂಡು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಹವಾನಿಯಂತ್ರಿತ ವಾಣಿಜ್ಯ ಸಂಕೀರ್ಣ, ಮಾಲ್‍ಗಳು ಕಾರ್ಯನಿರ್ವಹಿಸಲು ಅವಕಾಶವಿರುವುದಿಲ್ಲ.

ಸಾರ್ವಜನಿಕರು ಹೊರಗಡೆ ಓಡಾಡುವುದನ್ನು ನಿಯಂತ್ರಿಸುವುದಕ್ಕಾಗಿ ಕೋವಿಡ್-19 ನಿರ್ವಹಣೆಯ ಕಾರ್ಯಾಚರಣೆಗಳನ್ನು ರಾಷ್ಟ್ರೀಯ ನಿರ್ದೇಶನಗಳಿಗೆ ಒಳಪಟ್ಟು ಎಲ್ಲಾ ಅವಶ್ಯಕ ವಸ್ತುಗಳನ್ನು ಮನೆ ಮನೆಗೆ 24×7 ಅವಧಿಯಲ್ಲಿ ಪೂರೈಸಲು ಅನುಮತಿಸಲಾಗಿದೆ. ಹವಾನಿಯಂತ್ರಿತ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಕೋವಿಡ್ ಪ್ರಮಾಣಿಕೃತ ಕಾರ್ಯವಿಧಾನ(ಎಸ್‍ಓಪಿ) ಅನುಸರಿಸುವ ಷರತ್ತುಗಳೊಂದಿಗೆ ಹೋಟೆಲ್, ರೆಸ್ಟೋರೆಂಟ್, ಬಾರ್ ಮತ್ತು ಕ್ಲಬ್‍ಗಳಲ್ಲಿ(ಮದ್ಯಪಾನ ಹೊರತುಪಡಿಸಿ) ಕುಳಿತುಕೊಂಡು ಆಹಾರ ಸೇವಿಸಲು ಪ್ರತಿದಿನ ಬೆಳಿಗ್ಗೆ 6 ಸಂಜೆ 5 ಗಂಟವರೆಗೆ ಅನುಮತಿ ನೀಡಲಾಗಿದೆ.  

ಕೋವಿಡ್ ಮಾರ್ಗಸೂಚಿ ಅನುಸರಿಸಿ ಶೇ.50 ಸಾಮಥ್ರ್ಯದೊಂದಿಗೆ ಲಾಡ್ಜ್‍ಗಳು ಮತ್ತು ರೆಸಾರ್ಟ್‍ಗಳಿಗೆ, ಚಲನಚಿತ್ರ, ಟಿವಿ ಧಾರವಾಹಿಗಳಿಗೆ ಹೊರಾಂಗಣ ಚಿತ್ರಿಕರಣಕ್ಕೆ ಅವಕಾಶ ನೀಡಲಾಗಿದೆ. ಕಟ್ಟಡ ನಿರ್ಮಾಣ ಮತ್ತು ದುರಸ್ಥಿಗೆ ಸಂಬಂಧಿಸಿದ ಸಾಮಗ್ರಿಗಳೊಂದಿಗೆ ವ್ಯವಹರಿಸುವ ಅಂಗಡಿಗಳು, ಸಂಸ್ಥೆಗಳಿಗೆ ಪ್ರತಿದಿನ ಬೆಳಿಗ್ಗೆ 6 ಸಂಜೆ 5 ಗಂಟೆವರೆಗೆ ಅನುಮತಿ ನೀಡಲಾಗಿದೆ.

ವಾಕಿಂಗ್ ಉದ್ದೇಶಕ್ಕಾಗಿ ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆವರೆಗೆ ಉದ್ಯಾನವನಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಯಾವುದೇ ಗುಂಪು ಚಟುವಟಿಕೆಗಳಿಗೆ ಅನುಮತಿ ಇರುವುದಿಲ್ಲ. ಶೇ.50 ರಷ್ಟು ಸಾಮಥ್ರ್ಯದೊಂದಿಗೆ  ಜಿಮ್‍ಗಳಿಗೆ(ಹವಾನಿಯಂತ್ರಣ ಇಲ್ಲದೆ) ಅವಕಾಶ ನೀಡಲಾಗಿದೆ.

ಗರಿಷ್ಟ ಇಬ್ಬರು ಪ್ರಯಾಣಿಕರೊಂದಿಗೆ ಟ್ಯಾಕ್ಸಿಗಳು ಮತ್ತು ಆಟೋ ರೀಕ್ಷಾಗಳಿಗೆ ಸಂಚರಿಸಲು ಅನುಮತಿಸಿದೆ. ವೀಕ್ಷರಿಲ್ಲದೆ ಹೊರಾಂಗಣ ಕ್ರೀಡೆಗಳಿಗೆ ಅನುಮತಿ ನೀಡಲಾಗಿದೆ.  ಎಲ್ಲ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಿಗೆ ಸಿಬ್ಬಂದಿಯ ಶೇ.50 ರಷ್ಟು ಸಾಮಥ್ರ್ಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಆರೋಗ್ಯ ವಲಯಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿಗಳಿಗೆ ಅನುಮತಿಸಿದೆ.

ನಿಂತು ಪ್ರಯಾಣಿಸುವುದನ್ನು ನಿರ್ಬಧಿಸಿ ಬಸ್ಸಗಳ ಸಂಚಾರಕ್ಕೆ ಶೇ.50 ರಷ್ಟು ಪ್ರಯಾಣಿಕರಿಗೆ ಮಿತಿಗೊಳಿಸಿ ಅನುಮತಿಸಲಾಗಿದೆ.

ಈಗಾಗಲೇ ನಿಗಧಿಪಡಿಸಲಾಗಿರುವ ಮದುವೆ ಸಮಾರಂಭಗಳನ್ನು ಅವರವರ ಮನೆಗಳಲ್ಲಿಯೇ ಹತ್ತಿರದ ಸಂಬಂಧಿಕರು ಒಳಗೊಂಡಂತೆ 40 ಜನರಿಗೆ ಮೀರದಂತೆ ಅನುಮತಿಸಿದೆ ಹಾಗೂ ಅಂತ್ಯ ಸಂಸ್ಕಾರಕ್ಕೆ ಐದು ಜನರು ಮೀರದಂತೆ ನಡೆಸಲು  ಅನುಮತಿಸಿದೆ.

ಈ ಆದೇಶವು ಕೋವಿಡ್-19 ಕಾರ್ಯನಿರತ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸರ್ಕಾರಿ ವಾಹನಗಳ ಓಡಾಟಕ್ಕೆ ಅನ್ವಯಿಸುವುದಿಲ್ಲ.

ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ಜಿಲ್ಲೆಯಾದ್ಯಂತ ವಿನಾಯಿತಿ ಪಡೆದ ಉದ್ದೇಶಗಳನ್ನು ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕೂ ಅಧಿಕ ವ್ಯಕ್ತಿಗಳ ಸೇರುವಿಕೆಯನ್ನು ನಿಷೇಧಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಮಹಿಳಾ ಮೀಸಲಾತಿ (Women's reservation Bill) ಮಸೂದೆಗೆ ಸಂಬಂಧಿಸಿದ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಸಂಸತ್ತಿನಲ್ಲಿ ಸೋಲಾಗಿದ್ದು, ಇದೇ ಮೊದಲ ಬಾರಿಗೆ ಮಸೂದೆಯನ್ನು ಅಂಗೀಕರಿಸುವಲ್ಲಿ ಮೋದಿ (Modi) ಸರ್ಕಾರ ವಿಫಲವಾಗಿ, ಮುಖಭಂಗಕ್ಕೀಡಾಗಿದೆ.

[ccc_my_favorite_select_button post_id="121067"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!