ವಾರಾಂತ್ಯದ ಕಫ್ರ್ಯೂ: ಅತ್ಯಾವಶ್ಯಕ ಹಾಗೂ ತುರ್ತು ಸೇವೆಗಳಿಗೆ ಅವಕಾಶ: ಡಿವೈಎಸ್ಪಿ ಟಿ.ರಂಗಪ್ಪ

ದೊಡ್ಡಬಳ್ಳಾಪುರ: ಕೋವಿಡ್ -19 ಎರಡನೇ ಅಲೆ ಹಿನ್ನೆಲೆಯಲ್ಲಿ  ವಾರಾಂತ್ಯದ  ಕಫ್ರ್ಯೂ ಮುಂದುವರಿಸಲಾಗಿದ್ದು, ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅತ್ಯಾವಶ್ಯಕ ಮತ್ತು ತುರ್ತು ಚಟುವಟಿಕೆಗಳಿಗೆ ಮಾತ್ರ ಅವಕಾಶ ಇರಲಿದೆ ಎಂದು ಡಿವೈಎಸ್ಪಿ ಟಿ.ರಂಗಪ್ಪ ತಿಳಿಸಿದ್ದಾರೆ.

ವಾರಾಂತ್ಯದ ಕಫ್ರ್ಯೂ: ಕೋವಿಡ್-19ರ ಎರಡನೇ ಅಲೆ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಸರ್ಕಾರದಿಂದ ಜಾರಿಗೊಳಿಸಲಾದ ಮಾರ್ಗಸೂಚಿಗಳನ್ನು ಜುಲೈ 5 ರವರೆಗೆ ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಲು ಸರ್ಕಾರ ಜೂನ್ 20 ರಂದು ಹೊರಡಿಸಿದ ಆದೇಶದಂತೆ ವಾರಾಂತ್ಯದಲ್ಲಿ  ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ದಿನಸಿ, ತರಕಾರಿ, ಹಾಲು, ಔಷಧಿ, ಮಾಂಸ, ಮೀನು, ಪಶು ಆಹಾರದ ಅಂಗಡಿಗಳು, ಬೀದಿ ಬದಿ ವ್ಯಾಪಾರಿಗಳು, ಸಾರ್ವಜನಿಕ ವಿತರಣಾ ವ್ಯವಸ್ಥೆ  ಅಂಗಡಿಗಳಿಗೆ ಹಾಗೂ ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಅನುಮತಿಸಲಾಗಿದೆ. ಅತ್ಯಾವಶ್ಯಕ ಹಾಗೂ ತುರ್ತು ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ.

ಉಳಿದ ವಾರದ ದಿನಗಳಲ್ಲಿ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ ಐದು ಗಂಟೆವರೆವರೆಗೆ ನಿಗಧಿತ ವ್ಯಾಪಾರ ವಹಿವಾಟಿಗೆ  ಅನುಮತಿ ನೀಡಲಾಗಿದೆ.   ಸೋಮವಾರದಿಂದ ಶುಕ್ರವಾರದವರೆ ರಾತ್ರಿ ಕಫ್ರ್ಯೂ ಸಂಜೆ 7 ರಿಂದ ಬೆಳಿಗ್ಗೆ 5 ಗಂಟೆವರೆಗೆ  ಜಾರಿಯಲ್ಲಿರುತ್ತದೆ. 

ವಾರಾಂತ್ಯದ ಕಫ್ಯೂ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಎಲ್ಲಾ ಉತ್ಪಾದನಾ ಘಟಕಗಳು, ಸಂಸ್ಥೆಗಳು, ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮಥ್ರ್ಯದ ಶೇ.50 ರಷ್ಟು ಸಿಬ್ಬಂದಿಯೊಂದಿಗೆ  ಹಾಗೂ ಗಾರ್ಮೆಂಟ್ ತಯಾರಿಕೆಯಲ್ಲಿ ತೊಡಗಿರುವ  ಉತ್ಪಾದನಾ ಘಟಕಗಳು, ಸಂಸ್ಥೆಗಳು, ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮಥ್ರ್ಯದ ಶೇ.30 ರಷ್ಟು ಸಿಬ್ಬಂದಿಯೊಂದಿಗೆ  ಕೋವಿಡ್-19 ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. 

ಹವಾನಿಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಎಲ್ಲ ಅಂಗಡಿಗಳಿಗೆ ಪ್ರತಿದಿನ ಬೆಳಿಗ್ಗೆ 6 ಸಂಜೆ 5 ಗಂಟೆವರೆಗೆ ಕೋವಿಡ್ ಪ್ರಮಾಣಿಕೃತ ಕಾರ್ಯವಿಧಾನ(ಎಸ್‍ಓಪಿ) ಅನುಸರಿಸಿಕೊಂಡು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಹವಾನಿಯಂತ್ರಿತ ವಾಣಿಜ್ಯ ಸಂಕೀರ್ಣ, ಮಾಲ್‍ಗಳು ಕಾರ್ಯನಿರ್ವಹಿಸಲು ಅವಕಾಶವಿರುವುದಿಲ್ಲ.

ಸಾರ್ವಜನಿಕರು ಹೊರಗಡೆ ಓಡಾಡುವುದನ್ನು ನಿಯಂತ್ರಿಸುವುದಕ್ಕಾಗಿ ಕೋವಿಡ್-19 ನಿರ್ವಹಣೆಯ ಕಾರ್ಯಾಚರಣೆಗಳನ್ನು ರಾಷ್ಟ್ರೀಯ ನಿರ್ದೇಶನಗಳಿಗೆ ಒಳಪಟ್ಟು ಎಲ್ಲಾ ಅವಶ್ಯಕ ವಸ್ತುಗಳನ್ನು ಮನೆ ಮನೆಗೆ 24×7 ಅವಧಿಯಲ್ಲಿ ಪೂರೈಸಲು ಅನುಮತಿಸಲಾಗಿದೆ. ಹವಾನಿಯಂತ್ರಿತ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಕೋವಿಡ್ ಪ್ರಮಾಣಿಕೃತ ಕಾರ್ಯವಿಧಾನ(ಎಸ್‍ಓಪಿ) ಅನುಸರಿಸುವ ಷರತ್ತುಗಳೊಂದಿಗೆ ಹೋಟೆಲ್, ರೆಸ್ಟೋರೆಂಟ್, ಬಾರ್ ಮತ್ತು ಕ್ಲಬ್‍ಗಳಲ್ಲಿ(ಮದ್ಯಪಾನ ಹೊರತುಪಡಿಸಿ) ಕುಳಿತುಕೊಂಡು ಆಹಾರ ಸೇವಿಸಲು ಪ್ರತಿದಿನ ಬೆಳಿಗ್ಗೆ 6 ಸಂಜೆ 5 ಗಂಟವರೆಗೆ ಅನುಮತಿ ನೀಡಲಾಗಿದೆ.  

ಕೋವಿಡ್ ಮಾರ್ಗಸೂಚಿ ಅನುಸರಿಸಿ ಶೇ.50 ಸಾಮಥ್ರ್ಯದೊಂದಿಗೆ ಲಾಡ್ಜ್‍ಗಳು ಮತ್ತು ರೆಸಾರ್ಟ್‍ಗಳಿಗೆ, ಚಲನಚಿತ್ರ, ಟಿವಿ ಧಾರವಾಹಿಗಳಿಗೆ ಹೊರಾಂಗಣ ಚಿತ್ರಿಕರಣಕ್ಕೆ ಅವಕಾಶ ನೀಡಲಾಗಿದೆ. ಕಟ್ಟಡ ನಿರ್ಮಾಣ ಮತ್ತು ದುರಸ್ಥಿಗೆ ಸಂಬಂಧಿಸಿದ ಸಾಮಗ್ರಿಗಳೊಂದಿಗೆ ವ್ಯವಹರಿಸುವ ಅಂಗಡಿಗಳು, ಸಂಸ್ಥೆಗಳಿಗೆ ಪ್ರತಿದಿನ ಬೆಳಿಗ್ಗೆ 6 ಸಂಜೆ 5 ಗಂಟೆವರೆಗೆ ಅನುಮತಿ ನೀಡಲಾಗಿದೆ.

ವಾಕಿಂಗ್ ಉದ್ದೇಶಕ್ಕಾಗಿ ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆವರೆಗೆ ಉದ್ಯಾನವನಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಯಾವುದೇ ಗುಂಪು ಚಟುವಟಿಕೆಗಳಿಗೆ ಅನುಮತಿ ಇರುವುದಿಲ್ಲ. ಶೇ.50 ರಷ್ಟು ಸಾಮಥ್ರ್ಯದೊಂದಿಗೆ  ಜಿಮ್‍ಗಳಿಗೆ(ಹವಾನಿಯಂತ್ರಣ ಇಲ್ಲದೆ) ಅವಕಾಶ ನೀಡಲಾಗಿದೆ.

ಗರಿಷ್ಟ ಇಬ್ಬರು ಪ್ರಯಾಣಿಕರೊಂದಿಗೆ ಟ್ಯಾಕ್ಸಿಗಳು ಮತ್ತು ಆಟೋ ರೀಕ್ಷಾಗಳಿಗೆ ಸಂಚರಿಸಲು ಅನುಮತಿಸಿದೆ. ವೀಕ್ಷರಿಲ್ಲದೆ ಹೊರಾಂಗಣ ಕ್ರೀಡೆಗಳಿಗೆ ಅನುಮತಿ ನೀಡಲಾಗಿದೆ.  ಎಲ್ಲ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಿಗೆ ಸಿಬ್ಬಂದಿಯ ಶೇ.50 ರಷ್ಟು ಸಾಮಥ್ರ್ಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಆರೋಗ್ಯ ವಲಯಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿಗಳಿಗೆ ಅನುಮತಿಸಿದೆ.

ನಿಂತು ಪ್ರಯಾಣಿಸುವುದನ್ನು ನಿರ್ಬಧಿಸಿ ಬಸ್ಸಗಳ ಸಂಚಾರಕ್ಕೆ ಶೇ.50 ರಷ್ಟು ಪ್ರಯಾಣಿಕರಿಗೆ ಮಿತಿಗೊಳಿಸಿ ಅನುಮತಿಸಲಾಗಿದೆ.

ಈಗಾಗಲೇ ನಿಗಧಿಪಡಿಸಲಾಗಿರುವ ಮದುವೆ ಸಮಾರಂಭಗಳನ್ನು ಅವರವರ ಮನೆಗಳಲ್ಲಿಯೇ ಹತ್ತಿರದ ಸಂಬಂಧಿಕರು ಒಳಗೊಂಡಂತೆ 40 ಜನರಿಗೆ ಮೀರದಂತೆ ಅನುಮತಿಸಿದೆ ಹಾಗೂ ಅಂತ್ಯ ಸಂಸ್ಕಾರಕ್ಕೆ ಐದು ಜನರು ಮೀರದಂತೆ ನಡೆಸಲು  ಅನುಮತಿಸಿದೆ.

ಈ ಆದೇಶವು ಕೋವಿಡ್-19 ಕಾರ್ಯನಿರತ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸರ್ಕಾರಿ ವಾಹನಗಳ ಓಡಾಟಕ್ಕೆ ಅನ್ವಯಿಸುವುದಿಲ್ಲ.

ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ಜಿಲ್ಲೆಯಾದ್ಯಂತ ವಿನಾಯಿತಿ ಪಡೆದ ಉದ್ದೇಶಗಳನ್ನು ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕೂ ಅಧಿಕ ವ್ಯಕ್ತಿಗಳ ಸೇರುವಿಕೆಯನ್ನು ನಿಷೇಧಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಹಾವು ಬಿಡ್ತೀನಿ ಅಂತೇಳಿ ಹಾವ್ರಾಣಿ ಬಿಟ್ಟ ರಾಜಣ್ಣ..!

ಹಾವು ಬಿಡ್ತೀನಿ ಅಂತೇಳಿ ಹಾವ್ರಾಣಿ ಬಿಟ್ಟ ರಾಜಣ್ಣ..!

ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ದಾಖಲೆಗಳಿಲ್ಲ. ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಸಿಸಿ ಕ್ಯಾಮರಾ ಇಲ್ಲ. Rajanna

[ccc_my_favorite_select_button post_id="104571"]
ಕರ್ನಾಟಕದ ರಫ್ತು: 100 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ; ಎಂಬಿ ಪಾಟೀಲ

ಕರ್ನಾಟಕದ ರಫ್ತು: 100 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ; ಎಂಬಿ

`ರಾಜ್ಯದ ಕೈಗಾರಿಕಾ ವಲಯವು ಸದ್ಯಕ್ಕೆ ವಾರ್ಷಿಕವಾಗಿ 27 ಬಿಲಿಯನ್ ಡಾಲರ್ ಮೌಲ್ಯದ ರಫ್ತು ವಹಿವಾಟನ್ನು ಮಾತ್ರ ನಡೆಸುತ್ತಿದೆ. ಇದನ್ನು 100 ಬಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯಬೇಕು ಎನ್ನುವುದು ನಮ್ಮ ಗುರಿಯಾಗಿದೆ. MB Patila

[ccc_my_favorite_select_button post_id="104564"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
ಮಾತೃ ನಿಂದನೆ ಮಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಹೇಳಿದ್ದು ಭಾರತ್ ಮಾತಾ ಕಿ ಜೈ..!| Video

ಮಾತೃ ನಿಂದನೆ ಮಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಹೇಳಿದ್ದು ಭಾರತ್ ಮಾತಾ ಕಿ ಜೈ..!|

ಹಾವೇರಿ: ದೇಶ, ಧರ್ಮ, ಗೋಮಾತೆ, ಮಾತೆಯರ ಕುರಿತು ಗೌರವಯುತ ಸಿದ್ದಾಂತ ಹೊಂದಿರುವ ಬಿಜೆಪಿ (BJP)ಯ ಜಿಲ್ಲಾ ಅಧ್ಯಕ್ಷನೋರ್ವ ಮಾತೃ ನಿಂದನೆ ಮಾಡಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುರಿತು ಪ್ರತಿಭಟನೆ ವೇಳೆ ಅಸಭ್ಯ ಪದ ಬಳಸಿದ್ದು ಸಾರ್ವಜನಿಕ ವಲಯದಲ್ಲಿ

[ccc_my_favorite_select_button post_id="104539"]
ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗೌರಿಬಿದನೂರು: ಶಾಲಾ ವಾಹನ ಮತ್ತು ದ್ವಿಚಕ್ರ, ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹಿಂದೂಪುರ ಬೈಪಾಸ್ ರಸ್ತೆಯ ನರಿಂಗ್ ಕಾಲೇಜು ಮುಂಭಾಗದಲ್ಲಿ

[ccc_my_favorite_select_button post_id="104484"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!