ಭಾರತದಲ್ಲಿ 31 ಕೋಟಿಯ ಮೈಲಿಗಲ್ಲನ್ನು ದಾಟಿದ ಕೋವಿಡ್-19 ಲಸಿಕೆ ನೀಡುವಿಕೆ / ಸಕ್ರಿಯ ಪ್ರಕರಣಗಳ ಸಂಖ್ಯೆ ನಿರಂತರ ಕುಸಿತ

ನವದೆಹಲಿ: ಮಹತ್ವದ ಸಾಧನೆಯಲ್ಲಿ,ಭಾರತದ ಒಟ್ಟು ಲಸಿಕಾಕರಣವು 31 ಕೋಟಿ ಮೀರಿದೆ.ತಾತ್ಕಾಲಿಕ ವರದಿಯ ಪ್ರಕಾರ ಶನಿವಾರ ಬೆಳಗ್ಗೆ 7 ಗಂಟೆಯವರೆಗೆ ಒಟ್ಟು 31,50,45,926 ಲಸಿಕೆ ಡೋಸ್ ಗಳನ್ನು  42,00,839 ಸೆಷನ್‌ಗಳ ಮೂಲಕ ನೀಡಲಾಗಿದೆ.ಕಳೆದ 24 ಗಂಟೆಗಳಲ್ಲಿ 61,19,169 ಲಸಿಕೆ ಡೋಸ್ ಗಳನ್ನು ನೀಡಲಾಗಿದೆ. 

ಕೋವಿಡ್ 19 ಲಸಿಕಾ ಕಾರ್ಯಕ್ರಮದ ಸಾರ್ವತ್ರಿಕೀಕರಣದ ಹೊಸ ಹಂತವು ಜೂನ್ 21, 2021 ರಿಂದ ಪ್ರಾರಂಭವಾಯಿತು. ಕೇಂದ್ರ ಸರ್ಕಾರವು ಲಸಿಕೆ ನೀಡಿಕೆಯನ್ನು ಹೆಚ್ಚಿಸಲು ಮತ್ತು ದೇಶಾದ್ಯಂತ ವಿಸ್ತರಿಸಲು ಬದ್ಧವಾಗಿದೆ.

ಕಳೆದ 24 ಗಂಟೆಗಳಲ್ಲಿ ಭಾರತವು 48,698 ಹೊಸ  ಪ್ರಕರಣಗಳನ್ನು ವರದಿ ಮಾಡಿದೆ.ಸತತ 19 ದಿನಗಳಿಂದ 1 ಲಕ್ಷಕ್ಕಿಂತ ಕಡಿಮೆ ದೈನಂದಿನ ಹೊಸ ಪ್ರಕರಣಗಳು ವರದಿಯಾಗಿವೆ.ಇದು ಕೇಂದ್ರ ಮತ್ತು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ನಿರಂತರ ಮತ್ತು ಸಹಯೋಗದ ಪ್ರಯತ್ನಗಳ ಫಲಿತಾಂಶವಾಗಿದೆ.

ಭಾರತದಲ್ಲಿ  ಸಕ್ರಿಯ ಪ್ರಕರಣಗಳ ಹೊರೆಯಲ್ಲಿ ಕೂಡ ನಿರಂತರವಾಗಿ ಕುಸಿತ ಕಂಡುಬರುತ್ತಿದೆ.ದೇಶದ ಸಕ್ರಿಯ ಪ್ರಕರಣಗಳ ಹೊರೆಯು  ಇಂದು  5,95,565   ರಷ್ಟಿದೆ.ಸಕ್ರಿಯ ಪ್ರಕರಣಗಳ ಹೊರೆಯು 86 ದಿನಗಳ ನಂತರ 9 ಲಕ್ಷಕ್ಕಿಂತ ಕಡಿಮೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 17,303ರ ನಿವ್ವಳ ಕುಸಿತ ಕಂಡುಬಂದಿದೆ ಮತ್ತು ಸಕ್ರಿಯಪ್ರಕರಣಗಳು ಈಗ ದೇಶದ ಒಟ್ಟು ದೃಢಪಟ್ಟ ಪ್ರಕರಣಗಳ ಕೇವಲ 1.97%ರಷ್ಟ ಮಾತ್ರ ಇದೆ.

ಕೋವಿಡ್-19 ಸೋಂಕಿನಿಂದ ಹೆಚ್ಚು ಜನರು ಚೇತರಿಸಿಕೊಳ್ಳುತ್ತಿರುವ ಕಾರಣ, ಭಾರತದ ದೈನಂದಿನ ಚೇತರಿಕೆಗಳ ಪ್ರಮಾಣವು  ಸತತ 44ನೇ ದಿನವೂ ದೈನಂದಿನ ಹೊಸ ಪ್ರಕರಣಗಳನ್ನು ಮೀರಿಸುತ್ತಿವೆ. ಕಳೆದ 24 ಗಂಟೆಗಳಲ್ಲಿ 64,818 ಗುಣಮುಖರಾದ ಪ್ರಕರಣಗಳು ವರದಿಯಾಗಿವೆ.

ದೈನಂದಿನ ಹೊಸ ಪ್ರಕರಣಗಳಿಗೆ ಹೋಲಿಸಿದರೆ ಕಳೆದ 24 ಗಂಟೆಗಳಲ್ಲಿ ಹದಿನಾರು ಸಾವಿರಕ್ಕಿಂತ (16,120 ) ಹೆಚ್ಚಿನ ಚೇತರಿಕೆಯ ಪ್ರಕರಣಗಳು ವರದಿಯಾಗಿದೆ.

ಸಾಂಕ್ರಾಮಿಕದ ಆರಂಭದಿಂದಲೂ ಸೋಂಕಿತರಲ್ಲಿ  2,91,93,085 ಜನರು ಈಗಾಗಲೇ ಕೋವಿಡ್-19 ರಿಂದ ಚೇತರಿಸಿಕೊಂಡಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ 64,818 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರಿಂದಾಗಿ ಒಟ್ಟಾರೆ ಚೇತರಿಕೆ ದರವು 96.72%, ಆಗಿದ್ದು, ಇದು ಚೇತರಿಕೆಯ ಪ್ರಮಾಣವು ನಿರಂತರವಾಗಿ ಹೆಚ್ಚುತ್ತಿರುವುದನ್ನು ತೋರಿಸುತ್ತಿದೆ.

ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು ಕಳೆದ 24 ಗಂಟೆಗಳಲ್ಲಿ ಒಟ್ಟು 17,35,781 ಪರೀಕ್ಷೆಗಳನ್ನು ನಡೆಸಲಾಗಿದ್ದು, ಇಲ್ಲಿಯವರೆಗೆ ಭಾರತದಲ್ಲಿ  39.78 ಕೋಟಿಗಿಂತಲೂ (39,95,68,448) ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದೆ.

ದೇಶಾದ್ಯಂತ ಪರೀಕ್ಷೆಗಳನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು ವಾರದ ಪ್ರಕರಣದ ದೃಢಪಟ್ಟ ಪ್ರಕರಣಗಳಲ್ಲಿ ನಿರಂತರ ಕುಸಿತವನ್ನು ಗಮನಿಸಲಾಗಿದೆ. ವಾರದ  ದೃಢಪಟ್ಟ ಪ್ರಕರಣಗಳ ದರವು ಪ್ರಸ್ತುತ 2.97% ರಷ್ಟಿದ್ದರೆ, ದೈನಂದಿನ ದೃಢಪಟ್ಟ ಪ್ರಕರಣಗಳ ದರವು ಇಂದು 2.79% ರಷ್ಟಿದೆ. ಸತತ 19 ದಿನಗಳಿಂದ ಇದು 5% ಕ್ಕಿಂತ ಕಡಿಮೆಯಿದೆ ಎಂದು ವರದಿ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!