ಕೋವಿಡ್‍ನಿಂದ ಮೃತಪಟ್ಟ ಎಲ್ಲ ಕುಟುಂಬಗಳಿಗೆ ಪರಿಹಾರ ಒದಗಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ: ಸಚಿವ ಬಿ.ಎ.ಬಸವರಾಜ

ದಾವಣಗೆರೆ: ಕೋವಿಡ್‍ನ ಮೊದಲನೆ ಮತ್ತು ಎರಡನೆ ಅಲೆಯಲ್ಲಿ ಬಿಪಿಎಲ್, ಎಪಿಎಲ್ ಎಂಬ ತಾರತಮ್ಯವಿಲ್ಲದೆ, ಕೋವಿಡ್-19 ಸೋಂಕಿನಿಂದ ಮೃತಪಟ್ಟ ಎಲ್ಲ ಕುಟುಂಬಗಳಿಗೂ ತಲಾ ಒಂದು ಲಕ್ಷ ರೂ. ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಗಳು ಒಪ್ಪಿಗೆ ನೀಡುವ ವಿಶ್ವಾಸವಿದೆ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ ಪರಿಶೀಲನಾ ಸಭೆ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಕಳೆದ ವರ್ಷ ಕೋವಿಡ್‍ನ ಮೊದಲನೆ ಅಲೆಯಲ್ಲಿ 264 ಜನ ಹಾಗೂ ಈ ವರ್ಷದ ಮಾರ್ಚ್ ನಿಂದ ಈವರೆಗಿನ ಎರಡನೆ ಅಲೆಯಲ್ಲಿ 273 ಜನ ಸೇರಿದಂತೆ ಒಟ್ಟು 537 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ.  ಕೋವಿಡ್‍ನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ವ್ಯಕ್ತಿಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.  ಕೋವಿಡ್‍ನಿಂದ ಸಂಭವಿಸಿದ ಸಾವಿಗೆ ಪರಿಹಾರ ನೀಡುವ ವಿಷಯದಲ್ಲಿ ಬಿಪಿಎಲ್, ಎಪಿಎಲ್ ಎಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಪರಿಹಾರ ನೀಡುವಂತೆ ಈಗಾಗಲೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.  ಜಿಲ್ಲೆಯಲ್ಲಿ ಒಟ್ಟು 537 ಜನ ಕೋವಿಡ್‍ನಿಂದ ಮೃತಪಟ್ಟಿದ್ದು, ಪ್ರತಿ ವ್ಯಕ್ತಿಗೆ 01 ಲಕ್ಷ ರೂ. ಗಳಂತೆ ಪರಿಹಾರ ನೀಡಿದರೆ, 5.37 ಕೋಟಿ ರೂ. ಅನುದಾನ ಜಿಲ್ಲೆಗೆ ಬೇಕಾಗುತ್ತದೆ.  ಆದಷ್ಟು ಶೀಘ್ರ ಮುಖ್ಯಮಂತ್ರಿಗಳು ಈ ಕುರಿತು ನಿರ್ಧಾರ ಕೈಗೊಳ್ಳುವರು ಎಂದರು. 

ಇದಕ್ಕೂ ಮುನ್ನ ಜರುಗಿದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,  ಜಿಲ್ಲೆಯಲ್ಲಿ ಸಂಭವಿಸಿರುವ ಕೋವಿಡ್ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಹೆಸರು, ವಿಳಾಸವುಳ್ಳ ಸಂಪೂರ್ಣ ವಿವರವಾದ ಪಟ್ಟಿಯನ್ನು ಜಿಲ್ಲಾಧಿಕಾರಿಗಳು, ತಾಲ್ಲೂಕುವಾರು ಸಿದ್ಧಪಡಿಸಿ ಇಟ್ಟುಕೊಳ್ಳಬೇಕು, ಸರ್ಕಾರ ನೀಡುವ ಪರಿಹಾರವನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಎಲ್ಲ ಜನಪ್ರತಿನಿಧಿಗಳ ಸಮಕ್ಷಮದಲ್ಲಿ ಆ ಕುಟುಂಬಗಳಿಗೆ ಗೌರವಪೂರ್ವಕವಾಗಿ ಸಮರ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.

ಖಾಸಗಿ ಬ್ಯಾನರ್ ನಡಿ ಸರ್ಕಾರಿ ಲಸಿಕೆ ನೀಡುವಂತಿಲ್ಲ: ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಅವರು ಮಾತನಾಡಿ, ಕೋವಿಡ್ ಸೋಂಕಿನಿಂದ ಜನರ ಪ್ರಾಣ ರಕ್ಷಣೆಗಾಗಿ ಕೇಂದ್ರ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುತ್ತಿದೆ, ಅಲ್ಲದೆ ರಾಜ್ಯ ಮತ್ತು ಜಿಲ್ಲೆಗಳಿಗೆ ಸಮರ್ಪಕವಾಗಿ ಲಸಿಕೆ ಹಂಚಿಕೆ ಮಾಡುತ್ತಿದೆ.  ಆದರೆ ನಗರದಲ್ಲಿ ಖಾಸಗಿ ಬ್ಯಾನರ್‍ನಡಿ ಸರ್ಕಾರದಿಂದ ಪೂರೈಕೆ ಮಾಡುವ ಉಚಿತ ಲಸಿಕೆಯನ್ನು ಖಾಸಗಿ ಶಿಬಿರದಲ್ಲಿ ನೀಡಿ ಪ್ರಚಾರ ಗಿಟ್ಟಿಸುವ ಯತ್ನ ಮಾಡುತ್ತಿದ್ದಾರೆ, ಖಾಸಗಿಯವರು ಬ್ಯಾನರ್‍ನಲ್ಲಿ ತಮ್ಮ ಫೋಟೋ ಹಾಕಿಕೊಂಡು, ತಮ್ಮ ಸ್ವಂತ ಹಣದಲ್ಲಿ ಪಡೆದ ಲಸಿಕೆಯನ್ನು ಯಾವ ರೀತಿಯಾದರೂ ಹಾಕಿಕೊಳ್ಳಲಿ, ಇದಕ್ಕೆ ನಮ್ಮ ಆಕ್ಷೇಪಣೆ ಇಲ್ಲ, ಆದರೆ ಖಾಸಗಿ ಬ್ಯಾನರ್‍ನಡಿ ಸರ್ಕಾರದಿಂದ ನೀಡುವ ಉಚಿತ ಲಸಿಕೆಯನ್ನು ವಿತರಿಸಲು ಅವಕಾಶವಿಲ್ಲ, ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ಎಂದರು.  ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತವಾರಿ ಸಚಿವರು, ಭಾರತ ಸರ್ಕಾರ ನೀಡುತ್ತಿರುವ ಉಚಿತ ಲಸಿಕೆಯನ್ನು ಖಾಸಗಿ ಬ್ಯಾನರ್‍ನಡಿ ಹಾಕಲು ಅವಕಾಶ ನೀಡಿದರೆ, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಡಿಹೆಚ್‍ಒ ಡಾ. ನಾಗರಾಜ್ ಹಾಗೂ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ ಅವರಿಗೆ ಎಚ್ಚರಿಕೆ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!