ಮೋಟಾರು ವಾಹನ ಕಾಯ್ದೆ 1988: ಹಳೆಯ ಮತ್ತು ತಿದ್ದುಪಡಿ / ಜನಸಾಮಾನ್ಯರಿಗೆ ಕಾನೂನು ಅರಿವು.

ದೇಶವ್ಯಾಪಿಯಾಗಿ ಮೋಟಾರು ವಾಹನ ಕಾಯ್ದೆ (1988ರ ತಿದ್ದುಪಡಿ) ಸೆಪ್ಟೆಂಬರ್ 1 ರಿಂದ ಜಾರಿಗೆ ಬಂದಿದೆ. ಈ ತಿದ್ದುಪಡಿ ಕಾಯ್ದೆಯು ವಾಹನ ಸವಾರರು ಮತ್ತು ಮಾಲೀಕರನ್ನು ನಿದ್ದೆಗೆಡಿಸದೆ ಇರುವುದರಲ್ಲಿ ಯಾವುದೇ ಸಂಶಯ ಬೇಡ!

ರಸ್ತೆ ಅಪಘಾತಗಳಿಂದ ಸಂಭವಿಸುವ ಪ್ರಾಣಹಾನಿಯನ್ನು ತಪ್ಪಿಸುವ ಸಲುವಾಗಿ ವಾಹನ ಸವಾರರನ್ನು ನಿಯಂತ್ರಿಸಲು ಗಣನೀಯ ಪ್ರಮಾಣದಲ್ಲಿ ದಂಡದ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ. 

ರಸ್ತೆ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರನ್ನು ನಿಯಂತ್ರಿಸಲು ಹೆಚ್ಚಿನ ಪ್ರಮಾಣದಲ್ಲಿ ದಂಡ ಹಾಕುವುದೇ ಪರಿಹಾರವೆಂದು ಸರ್ಕಾರ ಭಾವಿಸಿದೆ. 

ಮೋಟಾರು ವಾಹನ ಕಾಯ್ದೆ 1988,  ಸೆಕ್ಷನ್ 140 ರ ಅಡಿಯಲ್ಲಿ ಅಫಘಾತ ಸಂಭವಿಸಿದ ನಂತರ ಗಾಯಾಳುವಿನ ತುರ್ತು ಚಿಕಿತ್ಸೆಗಾಗಿ ರೂ.25 ಸಾವಿರ ಅಥವಾ ಮೃತಪಟ್ಟ ವ್ಯಕ್ತಿಯ ಕುಟುಂಬದವರ ಅಂತ್ಯಕ್ರಿಯೆ, ಇತ್ಯಾದಿ ಕಾರಣಕ್ಕೆ ರೂ.50 ಸಾವಿರ ತಕ್ಷಣದ ಪರಿಹಾರವನ್ನು ವಿಮಾ ಕಂಪನಿಯಿಂದ ಪಡೆಯುವ ಹಕ್ಕನ್ನು ನೀಡಿತ್ತು. ಆದರೆ ಮೋಟಾರು ವಾಹನ ಕಾಯ್ದೆ 1988ರ ತಿದ್ದುಪಡಿ ಕಾಯ್ದೆ ಇಂತಹ ಹಕ್ಕನ್ನು ಮೊಟಕುಗೊಳಿಸಿದೆ. ಅಫಘಾತಕ್ಕೆ ಒಳಗಾದ ವ್ಯಕ್ತಿಗೆ ಯಾವುದೇ ಬಗೆಯ ಮಧ್ಯಂತರ ಪರಿಹಾರ ಸಿಗುವುದಿಲ್ಲ. ಪರಿಹಾರ ಪಡೆಯಬೇಕಾದರೆ ನ್ಯಾಯಾಲಯದಲ್ಲಿ ಅಪಘಾತ ಪ್ರಕರಣದ ತೀರ್ಪು ಬರುವವರೆಗೂ ಕಾಯಬೇಕು. 

ಈ ಹಿಂದೆ ಸೆಕ್ಷನ್ 145 ರ ಅಡಿಯಲ್ಲಿ ಮೂರನೇ ವ್ಯಕ್ತಿಯ(Third Party Liability) ನಿಬಂಧನೆ ಇತ್ತು. ತಿದ್ದುಪಡಿ ಮೂಲಕ ‘ಹೊಣೆಗಾರಿಕೆ’ ಪದದ ವ್ಯಾಪ್ತಿಯನ್ನು ಕುಗ್ಗಿಸಲಾಗಿದೆ. ಅಂದರೆ ವಾಹನ ಚಾಲಕ/ನಿರ್ವಾಹಕ/ ಸಹಾಯಕರು (ವಿಶೇಷವಾಗಿ ಗೂಡ್ಸ್ ವಾಹನಗಳ ಹಮಾಲಿಗಳು) ಕಾರ್ಮಿಕ ಪರಿಹಾರ ಕಾಯ್ದೆಯ ಅನ್ವಯ ಪರಿಹಾರ ಪಡೆಯುವ ಹಕ್ಕನ್ನು ಮೊಟಕುಗೊಳಿಸಲಾಗಿದೆ. ವಾಹನದಲ್ಲಿನ ಸಹ ಪ್ರಯಾಣಿಕನನ್ನು ಮೂರನೇ ವ್ಯಕ್ತಿ ವ್ಯಾಖ್ಯಾನದಿಂದ ಹೊರಗಿಡಲಾಗಿದೆ. ಉದಾಹರಣೆಗೆ ವಾಹನ ಅಪಘಾತ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ್ದರೆ ವಿಮಾ ಕಂಪನಿ ನಷ್ಟ ಪರಿಹಾರದ ಜವಾಬ್ದಾರಿಯಿಂದ ನುಣುಚಿಕೊಂಡು ವಾಹನದ ಚಾಲಕ ಮತ್ತು ಮಾಲೀಕನನ್ನು ಹೊಣೆಗಾರನನ್ನಾಗಿಸಿದೆ. ಅದೇ ರೀತಿ ಸೆಕ್ಷನ್ 147 ರ ಅಡಿಯಲ್ಲಿನ ವಿಮಾ ಕಂಪನಿಗಳ ಮೇಲಿನ ಅಪರಿಮಿತ ಹೊಣೆಗಾರಿಕೆಯನ್ನು (Unlimited Liability) ತೆಗೆದುಹಾಕಲಾಗಿದೆ. ಉದಾಹರಣೆಗೆ ವಾಹನದ ವಿಮೆಯನ್ನು 10 ಲಕ್ಷಕ್ಕೆ ಮಾಡಿಸಿದ್ದರೆ, ವಿಮಾ ಕಂಪನಿಗಳು ಕೇವಲ 10 ಲಕ್ಷ ರೂಪಾಯಿವರೆಗಿನ ಪರಿಹಾರ ನೀಡಲಷ್ಟೇ ಜವಾಬ್ದಾರಿ ಹೊಂದಿರುತ್ತವೆ. ಒಂದು ಪಕ್ಷ ನ್ಯಾಯಾಲಯವು 10 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ಪರಿಹಾರವನ್ನು ನೀಡಿ ಎಂದು ತೀರ್ಪು ಕೊಟ್ಟರೆ ವಾಹನದ ಮಾಲೀಕ ಉಳಿದ ಪರಿಹಾರವನ್ನು ನೀಡಬೇಕಾಗುತ್ತದೆ.

ಕಾರ್ಮಿಕ ವಲಯಕ್ಕೆ ಆಘಾತಕಾರಿಯಾಗುವಂತಹ ಅಂಶವೊಂದಿದೆ. ಕೆಲಸದ ಅವಧಿಯಲ್ಲಿ (During the course of employment) ವಾಹನ ಚಾಲಕ ಅಫಘಾತದಲ್ಲಿ ಗಾಯಗೊಂಡರೆ ಅಥವಾ ಸಾವನ್ನಪ್ಪಿದರೆ ವಾಹನದ ಮಾಲೀಕ ಮತ್ತು ವಿಮಾ ಕಂಪನಿಯನ್ನು ಹೊಣೆಗಾರರನ್ನಾಗಿಸಿ ಕಾರ್ಮಿಕ ನ್ಯಾಯಾಲಯದಲ್ಲಿ ಪರಿಹಾರ ಕೋರಬಹುದಾಗಿತ್ತು. ಸದರಿ ತಿದ್ದುಪಡಿ ಇದರ ಸ್ವರೂಪವನ್ನು ಬದಲಾಯಿಸಲಾಗಿದೆ. ಅಫಘಾತ ಚಾಲಕನ ಅಜಾಗರೂಕತೆಯಿಂದ ಸಂಭವಿಸಿದ್ದರೆ ನ್ಯಾಯಾಲಯದಲ್ಲೂ ಪರಿಹಾರ ಪಡೆಯುವುದು ಅಸಾಧ್ಯ, ಮೊದಲೇ ಹದಗೆಟ್ಟ ರಸ್ತೆಗಳು ಒತ್ತಡದ ಕೆಲಸ, ಹಠಾತನೇ ಎದುರಾಗುವ ಸಮಸ್ಯೆಗಳ ಮಧ್ಯೆ ಚಾಲಕ ವೃತ್ತಿ ಮಾಡುವವರಿಗೆ ಈ ತಿದ್ದುಪಡಿಯಿಂದ ತೊಂದರೆಯಾಗಲಿದೆ.

ಇದನ್ನು ಸರಿದೂಗಿಸಲು ವಾಹನ ಚಾಲಕ/ನಿರ್ವಾಹಕ/ಹಮಾಲಿಗಳಿಗೆ ವಿಮಾ ಪಾಲಿಸಿಯಲ್ಲಿ ಹೆಚ್ಚಿನ ಹಣ ನೀಡಿ ವಿಮೆ ಪಡೆದುಕೊಳ್ಳುವ ಹೊಣೆಗಾರಿಕೆಯನ್ನು ವಾಹನ ಮಾಲೀಕರ ಮೇಲೆ ವರ್ಗಾಯಿಸಲಾಗಿದೆ. ಪ್ರತಿವರ್ಷವೂ ವಿಮೆ ಪಾಲಿಸಿಯನ್ನು ನವೀಕರಿಸಬೇಕು ಅಲ್ಲದೇ ವರ್ಷ ವರ್ಷವೂ ವಿಮೆಯ ಮೊತ್ತ ಏರಿಕೆಯಾಗುತ್ತದೆ. ಇದರಿಂದ ವಾಹನ ಮಾಲೀಕರಿಗೆ ಹೆಚ್ಚಿನ ಹೊರೆಯಾಗುತ್ತದೆ. 

ಸಣ್ಣಪುಟ್ಟ ನ್ಯೂನತೆಗಳಿದ್ದಾಗ ಅಥವಾ ವಿಮಾ ಪಾಲಿಸಿಯಲ್ಲಿನ ನಿಬಂಧನೆಗಳನ್ನು ಅರ್ಥೈಸುವಲ್ಲಿ ತೊಡಕುಗಳು ಕಂಡುಬಂದಾಗ ಸೆಕ್ಷನ್ 150 ರ ಅಡಿಯಲ್ಲಿ ವಿಮಾ ಕಂಪನಿಗಳು ತೊಂದರೆಗೆ ಒಳಗಾದವರಿಗೆ ಪರಿಹಾರ ನೀಡಿ ನಂತರ ವಾಹನದ ಮಾಲೀಕರಿಂದ ಪರಿಹಾರದ ಹಣವನ್ನು ಹಿಂಪಡೆಯುವಂತಹ ಅವಕಾಶವಿತ್ತು. ಆದರೆ ತಿದ್ದುಪಡಿಯು ಭಾದಿತನ ಸಾಮಾಜಿಕ ಹಿತಾಸಕ್ತಿಯನ್ನು ಪರಿಗಣಿಸದೇ ವಿಮಾ ವಲಯವನ್ನು ಸಂಪೂರ್ಣವಾಗಿ ಲಾಭ ನಷ್ಟದ ಸಂಸ್ಥೆಯಂತೆ ಬಿಂಬಿಸಲಾಗಿದೆ. 

ಈ ಹಿಂದೆ ಇದ್ದ ಸೆಕ್ಷನ್ 163 ಎ ಪ್ರಕಾರ ರಚನಾತ್ಮಕ ಸೂತ್ರದಡಿಯಲ್ಲಿ ಗಾಯಾಳು ಮತ್ತು ಮೃತರಿಗೆ ವೈದ್ಯಕೀಯ ವೆಚ್ಚದ ಪರಿಹಾರವನ್ನು ನೀಡಲು ಸಾಧ್ಯವಿತ್ತು. ಇದಕ್ಕೆ ಬದಲಾಗಿ ಜಾರಿಗೆ ಬಂದಿರುವ ಸೆಕ್ಷನ್ 164 ಇಂತಹ ಸೌಲಭ್ಯಗಳನ್ನು ಮೊಟಕುಗೊಳಿಸಿ ಒಂದು ಬಾರಿಗೆ ಮಾತ್ರ ಗಾಯಾಳುವಿಗೆ ರೂ.2.50 ಲಕ್ಷ ಮತ್ತು ಮೃತರಿಗೆ ರೂ.5 ಲಕ್ಷ ನಿರ್ದಿಷ್ಟ ವೈದ್ಯಕೀಯ ವೆಚ್ಚ ಪಡೆಯಲು ಅನುವು ಮಾಡಿಕೊಟ್ಟಿದೆ. 

ಹಿಂದಿನ ಕಾಯ್ದೆಯ ಸೆಕ್ಷನ್ 166 ರ ಅಡಿಯಲ್ಲಿ ಗಾಯಾಳು ಪರಿಹಾರ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಕಾಲಮಿತಿ ಇರಲಿಲ್ಲ. ತಿದ್ದುಪಡಿ ಪ್ರಕಾರ ಗಾಯಾಳು ಅಫಘಾತ ಸಂಭವಿಸಿದ ಆರು ತಿಂಗಳ ಒಳಗೆ ಪ್ರಕರಣ ದಾಖಲಿಸಬೇಕು. ಇದರಿಂದ ಗಂಭೀರ ಗಾಯಗಳಿಂದ ನರಳುವ ವ್ಯಕ್ತಿ ಚಿಕಿತ್ಸೆಯನ್ನು ಬಿಟ್ಟು ನ್ಯಾಯಾಲಯ ಅಥವಾ ವಕೀಲರ ಕಚೇರಿ ಅಥವಾ ಪೋಲಿಸ್ ಠಾಣೆಗೆ ಹೋರಾಡಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ ?  

ಕೆಲವು ವಿಶೇಷ ಪ್ರಕರಣಗಳಲ್ಲಿ(ವಿಮಾ ಸೌಲಭ್ಯವಿಲ್ಲದೇ ಇರುವ) ಗಾಯಾಳುವಿಗೆ 2.50 ಲಕ್ಷ ಮತ್ತು ಮೃತನಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವ ಶಾಸನಾತ್ಮಕ ಹೊಣೆಗಾರಿಕೆ ಸರ್ಕಾರಕ್ಕಿತ್ತು. ಆದರೆ ಪ್ರಸ್ತುತ ತಿದ್ದುಪಡಿ ಮೂಲಕ ಅದನ್ನೂ ತೆಗೆದುಹಾಕಿ ವಿಮಾ ಕಂಪನಿಗಳನ್ನು ಜನರ ಹಿತಾಸಕ್ತಿ ವಲಯದಿಂದ ಹೊರಗಿಡಲಾಗಿದೆ. 

ಈ ಮೇಲಿನ ಎಲ್ಲಾ ಅಂಶಗಳ ನೇರ ಪರಿಣಾಮ ವಾಹನ ಮಾಲೀಕರು ಮತ್ತು ಚಾಲಕರ ಮೇಲೆ ಬೀಳಲಿದೆ. @ಟಿ.ಕೆ.ಹನುಮಂತರಾಜು, 9740768291

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಕಣದಲ್ಲಿ ಸೋಮವಾರದಿಂದ ಜೆಡಿಎಸ್ (JDS) ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರು ಮತಯಾಚನೆಗೆ ಚಾಲನೆ ನೀಡಿದ್ದಾರೆ.

[ccc_my_favorite_select_button post_id="117387"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ಜಾಲ್ಗೊಂನ್ ನಲ್ಲಿ ನಡೆದ 5ನೇ ಫೆಡರೇಶನ್ ಕಪ್ ನ್ಯಾಷನಲ್ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ (Kabbadi Championship) ಭಾಗವಹಿಸಿದ ಕರ್ನಾಟಕದ ಕಬ್ಬಡಿ ತಂಡ ಕಂಚಿನ

[ccc_my_favorite_select_button post_id="117398"]
ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಸ್ಥಾನದಲ್ಲಿ (Chowdeshwari Temple) ಮತ್ತೆ ಕಳ್ಳತನ ಪ್ರಕರಣ ನಡೆದಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

[ccc_my_favorite_select_button post_id="117382"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]