ಸ್ವದೇಶಿ ಜಾಗರಣಾ ಮಂಚ್ ವತಿಯಿಂದ ಸಾವಯವ ಕೃಷಿ ಪರಿವಾರ್ ಕಾರ್ಯಕ್ರಮಕ್ಕೆ ಚಾಲನೆ / ಸಾವಯವ ಕೃಷಿಯಿಂದ ಭೂ ಫಲವತ್ತತೆ: ಜಗದೀಶ್ ಜಿ

ದೊಡ್ಡಬಳ್ಳಾಪುರ: ಸಾವಯವ ಕೃಷಿಯಿಂದ ಭೂ ಫಲವತ್ತತೆ ಹೆಚ್ಚಾಗಿ ಉತ್ತಮ ಇಳುವರಿ ಪಡೆಯಲು ಹಾಗೂ ಮುಂದಿನ ಪೀಳಿಗೆಗೆ ಭೂಮಿಯನ್ನು ಉಳಿಸಲು ಸಾಧ್ಯ ಎಂದು ಸ್ವದೇಶಿ ಜಾಗರಣಾ ಮಂಚ್ ಕ್ಷೇತ್ರ ಸಂಘಟಕರಾದ ಜಗದೀಶ್ ಜಿ  ಹೇಳಿದರು.

ಸ್ವದೇಶಿ ಜಾಗರಣಾ ಮಂಚ್ ವತಿಯಿಂದ ತಾಲೂಕಿನ ಹೊಸಹಳ್ಳಿಯಲ್ಲಿ ಆಯೋಜಿಸಿದ್ದ ಸಾವಯವ ಕೃಷಿ ಪರಿವಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎರೆಹುಳು ಸಾಕಾಣಿಕೆ ಘಟಕ, ಕಾಂಪೋಸ್ಟ್ ಘಟಕ, ಅಜೋಲ ತಯಾರಿಕೆ, ಗಂಜಲ ಸಂಗ್ರಹಣಾ  ಡ್ರಂ, ಗಂಜಲ ಸಂಗ್ರಹಣಾ ಕೊಟ್ಟಿಗೆ, ಜೀವಾಮೃತ ತಯಾರಿಕೆ ಘಟಕ ನಿರ್ಮಾಣ, ಬಯೋಡೈಜಸ್ಟರ್ ಹಾಗೂ ಹಸಿರಲೆ ಗೊಬ್ಬರ ಬೀಜಗಳು ಹೀಗೆ ಹಲವಾರು ಕಾರ್ಯಕ್ರಮ ಪಡೆದುಕೊಂಡು ಸಾವಯವ ಕೃಷಿ ಮಾಡಿರುವ ಬಗ್ಗೆ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮಗಳನ್ನು ಆರ್ಥಿಕವಾಗಿ ಸದೃಢವನ್ನಾಗಿಸಲು ಹಾಗೂ ಸ್ವಾವಲಂಬಿಯಾಗ ಗುಡಿ ಕೈಗಾರಿಕೆ, ಪಂಡಿತ ಪರಂಪರೆ, ಗೋ ಉತ್ಪನ್ನಗಳ ಬಳಕೆ ಮತ್ತು ಅದರ ಮಹತ್ವವನ್ನು ಜಗದೀಶ್ ಜೀ ವಿವರಿಸಿದರು.

ಕಾರ್ಯಕ್ರಮದ ಆಯೋಜಕ ತಾಪಂ ಮಾಜಿ ಅಧ್ಯಕ್ಷ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ಮಾತನಾಡಿ, ಸಾವಯವ ಕೃಷಿ ಪದ್ದತಿ ಬದುಕಿನ ಭಾಗವಾಗಬೇಕು. ಭೂಮಿಯ ಫಲವತ್ತತೆ ಕಾಪಾಡಿಕೊಳ್ಳಬೇಕು, ಬೀಜೋಪಚಾರದಿಂದ ಹಿಡಿದು ಬೆಳೆ ತೆಗೆಯುವವರೆಗೂ ಭೂಮಿಗೆ ರಸಾಯನಿಕದ ಮೂಲಕ ವಿಷ ಉಣಿಸುತ್ತಿದ್ದೇವೆ. ರಸಾಯನಿಕದಿಂದ ಬರಿ ಕ್ರಿಮಿ ಕೀಟ ಸಾಯುತ್ತಿಲ್ಲ. ಮಣ್ಣಿನಲ್ಲಿರುವ ಸೂಕ್ಷ್ಮಾಣುಗಳು ಸಾಯುತ್ತಿವೆ. ಇದರಿಂದ ಭೂಮಿಯ ಫಲವತ್ತತೆ ಕಡಿಮೆಯಾಗಿ ಬೆಲೆ ಕುಂಠಿತ, ಪೌಷ್ಠಿಕವಲ್ಲದ ಆಹಾರ ಉತ್ಪಾದನೆ ಮಾಡುತ್ತಿದ್ದೇವೆ. ಹಿಂದಿನಂತೆ ಸಾವಯವ ಕೃಷಿ ನಮ್ಮ ಬದುಕಿನ ಭಾಗವಾಗಬೇಕು ಎಂದರು.

ಈ ಸಂದರ್ಭದಲ್ಲಿ ಸ್ವದೇಶಿ ಜಾಗರಣಾ ಮಂಚ್ ಬೆಂ.ಗ್ರಾ. ಜಿಲ್ಲಾ ಸಂಚಾಲಕ ಆಂಜಿನಪ್ಪ, ದಕ್ಷಿಣ ಪ್ರಾಂತ ಪ್ರಚಾರ ಪ್ರಮುಖ್ ಜಗದೀಶ್, ಗ್ರಾಮಪಂಚಾಯಿತಿ ಸದಸ್ಯರಾದ ಗೋವಿಂದರಾಜು, ತಿಮ್ಮೆಗೌಡ, ಪ್ರಸನ್ನಕುಮಾರ್, ಲಕ್ಷ್ಮೀದೇವಮ್ಮ ಬಸವರಾಜ್, ಹೋಬಳಿ ಬಿಜೆಪಿ ಅಧ್ಯಕ್ಷ ಕದಿರೇಗೌಡ, ಎಸ್ಸಿ ಮೋರ್ಚಾ ಕಾರ್ಯದರ್ಶಿ ಹರೀಶ್,  ರೈತ ಯುವ ಮುಖಂಡರಾದ ಗಜೇಂದ್ರ ಪಾಳೇಗಾರ್, ಪ್ರಕಾಶ್ ರೆಡ್ಡಿ, ಸುಬ್ರಹ್ಮಣ್ಯ ಶರ್ಮ ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!