ಸ್ವದೇಶಿ ಜಾಗರಣಾ ಮಂಚ್ ವತಿಯಿಂದ ಸಾವಯವ ಕೃಷಿ ಪರಿವಾರ್ ಕಾರ್ಯಕ್ರಮಕ್ಕೆ ಚಾಲನೆ / ಸಾವಯವ ಕೃಷಿಯಿಂದ ಭೂ ಫಲವತ್ತತೆ: ಜಗದೀಶ್ ಜಿ

ದೊಡ್ಡಬಳ್ಳಾಪುರ: ಸಾವಯವ ಕೃಷಿಯಿಂದ ಭೂ ಫಲವತ್ತತೆ ಹೆಚ್ಚಾಗಿ ಉತ್ತಮ ಇಳುವರಿ ಪಡೆಯಲು ಹಾಗೂ ಮುಂದಿನ ಪೀಳಿಗೆಗೆ ಭೂಮಿಯನ್ನು ಉಳಿಸಲು ಸಾಧ್ಯ ಎಂದು ಸ್ವದೇಶಿ ಜಾಗರಣಾ ಮಂಚ್ ಕ್ಷೇತ್ರ ಸಂಘಟಕರಾದ ಜಗದೀಶ್ ಜಿ  ಹೇಳಿದರು.

ಸ್ವದೇಶಿ ಜಾಗರಣಾ ಮಂಚ್ ವತಿಯಿಂದ ತಾಲೂಕಿನ ಹೊಸಹಳ್ಳಿಯಲ್ಲಿ ಆಯೋಜಿಸಿದ್ದ ಸಾವಯವ ಕೃಷಿ ಪರಿವಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎರೆಹುಳು ಸಾಕಾಣಿಕೆ ಘಟಕ, ಕಾಂಪೋಸ್ಟ್ ಘಟಕ, ಅಜೋಲ ತಯಾರಿಕೆ, ಗಂಜಲ ಸಂಗ್ರಹಣಾ  ಡ್ರಂ, ಗಂಜಲ ಸಂಗ್ರಹಣಾ ಕೊಟ್ಟಿಗೆ, ಜೀವಾಮೃತ ತಯಾರಿಕೆ ಘಟಕ ನಿರ್ಮಾಣ, ಬಯೋಡೈಜಸ್ಟರ್ ಹಾಗೂ ಹಸಿರಲೆ ಗೊಬ್ಬರ ಬೀಜಗಳು ಹೀಗೆ ಹಲವಾರು ಕಾರ್ಯಕ್ರಮ ಪಡೆದುಕೊಂಡು ಸಾವಯವ ಕೃಷಿ ಮಾಡಿರುವ ಬಗ್ಗೆ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮಗಳನ್ನು ಆರ್ಥಿಕವಾಗಿ ಸದೃಢವನ್ನಾಗಿಸಲು ಹಾಗೂ ಸ್ವಾವಲಂಬಿಯಾಗ ಗುಡಿ ಕೈಗಾರಿಕೆ, ಪಂಡಿತ ಪರಂಪರೆ, ಗೋ ಉತ್ಪನ್ನಗಳ ಬಳಕೆ ಮತ್ತು ಅದರ ಮಹತ್ವವನ್ನು ಜಗದೀಶ್ ಜೀ ವಿವರಿಸಿದರು.

ಕಾರ್ಯಕ್ರಮದ ಆಯೋಜಕ ತಾಪಂ ಮಾಜಿ ಅಧ್ಯಕ್ಷ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ಮಾತನಾಡಿ, ಸಾವಯವ ಕೃಷಿ ಪದ್ದತಿ ಬದುಕಿನ ಭಾಗವಾಗಬೇಕು. ಭೂಮಿಯ ಫಲವತ್ತತೆ ಕಾಪಾಡಿಕೊಳ್ಳಬೇಕು, ಬೀಜೋಪಚಾರದಿಂದ ಹಿಡಿದು ಬೆಳೆ ತೆಗೆಯುವವರೆಗೂ ಭೂಮಿಗೆ ರಸಾಯನಿಕದ ಮೂಲಕ ವಿಷ ಉಣಿಸುತ್ತಿದ್ದೇವೆ. ರಸಾಯನಿಕದಿಂದ ಬರಿ ಕ್ರಿಮಿ ಕೀಟ ಸಾಯುತ್ತಿಲ್ಲ. ಮಣ್ಣಿನಲ್ಲಿರುವ ಸೂಕ್ಷ್ಮಾಣುಗಳು ಸಾಯುತ್ತಿವೆ. ಇದರಿಂದ ಭೂಮಿಯ ಫಲವತ್ತತೆ ಕಡಿಮೆಯಾಗಿ ಬೆಲೆ ಕುಂಠಿತ, ಪೌಷ್ಠಿಕವಲ್ಲದ ಆಹಾರ ಉತ್ಪಾದನೆ ಮಾಡುತ್ತಿದ್ದೇವೆ. ಹಿಂದಿನಂತೆ ಸಾವಯವ ಕೃಷಿ ನಮ್ಮ ಬದುಕಿನ ಭಾಗವಾಗಬೇಕು ಎಂದರು.

ಈ ಸಂದರ್ಭದಲ್ಲಿ ಸ್ವದೇಶಿ ಜಾಗರಣಾ ಮಂಚ್ ಬೆಂ.ಗ್ರಾ. ಜಿಲ್ಲಾ ಸಂಚಾಲಕ ಆಂಜಿನಪ್ಪ, ದಕ್ಷಿಣ ಪ್ರಾಂತ ಪ್ರಚಾರ ಪ್ರಮುಖ್ ಜಗದೀಶ್, ಗ್ರಾಮಪಂಚಾಯಿತಿ ಸದಸ್ಯರಾದ ಗೋವಿಂದರಾಜು, ತಿಮ್ಮೆಗೌಡ, ಪ್ರಸನ್ನಕುಮಾರ್, ಲಕ್ಷ್ಮೀದೇವಮ್ಮ ಬಸವರಾಜ್, ಹೋಬಳಿ ಬಿಜೆಪಿ ಅಧ್ಯಕ್ಷ ಕದಿರೇಗೌಡ, ಎಸ್ಸಿ ಮೋರ್ಚಾ ಕಾರ್ಯದರ್ಶಿ ಹರೀಶ್,  ರೈತ ಯುವ ಮುಖಂಡರಾದ ಗಜೇಂದ್ರ ಪಾಳೇಗಾರ್, ಪ್ರಕಾಶ್ ರೆಡ್ಡಿ, ಸುಬ್ರಹ್ಮಣ್ಯ ಶರ್ಮ ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ರಸ್ತೆ ತಡೆಗೋಡೆ ಮಣ್ಣು ಕುಸಿದು ಮೂವರ ದುರ್ಮರಣ.. ರೂ.5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ರಸ್ತೆ ತಡೆಗೋಡೆ ಮಣ್ಣು ಕುಸಿದು ಮೂವರ ದುರ್ಮರಣ.. ರೂ.5 ಲಕ್ಷ ಪರಿಹಾರ ಘೋಷಿಸಿದ

ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವನಪ್ಪಿದ್ದಾರೆ. ಈ ಕುರಿತಂತೆ ಸಿಎಂ‌ ಸಿದ್ದರಾಮಯ್ಯ (Cm Siddaramaiah) ಸ್ಪಂದಿಸಿದ್ದು, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.

[ccc_my_favorite_select_button post_id="120851"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]