91 ಸಾವಿರಕ್ಕೂ ಹೆಚ್ಚಿನ ಪಡಿತರ ಚೀಟಿ ರದ್ದು…! / ಬಡವರೆನ್ನುವವರ ಮಾಹಿತಿ ಸದ್ದಿಲ್ಲದೆ ಸಂಗ್ರಹಿಸುತ್ತಿರುವ ಆಹಾರ ಮತ್ತು ನಾಗರಿಕ ಸರಬರಾಜ ಇಲಾಖೆ

ಬೆಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜ ಇಲಾಖೆ ಸದ್ದಿಲ್ಲದೆ 91 ಸಾವಿರಕ್ಕೂ ಹೆಚ್ಚಿನ ಪಡಿತರ ಚೀಟಿಗಳನ್ನು ರದ್ದುಪಡಿಸಿದೆ.

ಪಡಿತರ ಚೀಟಿ ಹೊಂದಿರುವವರ ಪೈಕಿ ಕನಿಷ್ಠ 91,189 ಜನರು ಬಿಪಿಎಲ್ ಕಾರ್ಡ್ ವ್ಯಾಪ್ತಿಗೆ ಸೇರಿದವರಲ್ಲ, ಆದರೂ ಸರ್ಕಾರದ ಸಬ್ಸಿಡಿಗಳನ್ನು ಬಳಸುತ್ತಿದ್ದಾರೆ. ಇಲಾಖೆ ಇಂತವರನ್ನು ಗುರುತಿಸಿ ಅವರ ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ.

ಸಬ್ಸಿಡಿ ಪಡಿತರವನ್ನು ಪಡೆಯುತ್ತಿರುವ  ಅನೇಕ ವ್ಯಕ್ತಿಗಳು ಮೂರು ಹೆಕ್ಟೇರ್ ಭೂಮಿಯನ್ನು ಹೊಂದಿದ್ದಾರೆ ಅಥವಾ ವಾರ್ಷಿಕ ಆದಾಯವು 1.28 ಲಕ್ಷ ರೂ. ಇದೆ ಎಂದು ಕಾರಣ ನೀಡಲಾಗಿದೆ.

ಇಂತಹ ಹೆಚ್ಚಿನ ಪ್ರಕರಣಗಳನ್ನು ಇಲಾಖೆ ಪರಿಶೀಲಿಸುತ್ತಿದೆ. ಇತ್ತೀಚಿನ ವರದಿಯ ಅನ್ವಯ, ಬಿಪಿಎಲ್ ಕಾರ್ಡ್ ಹೊಂದಿರುವವರ ಆದಾಯ ತೆರಿಗೆ ವಿವರಗಳ ಆಧಾರದ ಮೇಲೆ ಒಟ್ಟು 91,189 ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎನ್ನಲಾಗುತ್ತಿದೆ.

ರಾಜ್ಯದಲ್ಲಿ 50,060 ಜನರು ಆಂತ್ಯೋದಯ ಅನ್ನ ಯೋಜನೆ ಕಾರ್ಡ್‌ಗಳನ್ನು ಹೊಂದಿದ್ದಾರೆ, 1.20 ಲಕ್ಷ ರೂ.ಗಿಂತ ಹೆಚ್ಚಿನ ಕೌಟುಂಬಿಕ ಆದಾಯ ಹೊಂದಿರುವ 85,204 ಆದಾಯ ತೆರಿಗೆ ಪಾವತಿದಾರರು ಮತ್ತು 2,18,125 ಜನರು ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್‌ಗಿಂತ ಹೆಚ್ಚು ಭೂಮಿಯನ್ನು ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರ ವಿವರವಾದ ವರದಿಯನ್ನು ಕೋರಿದ್ದು ಹಾಗೂ ಸಬ್ಸಿಡಿಯನ್ನು ದುರುಪಯೋಗಪಡಿಸಿಕೊಳ್ಳುವ ಎಲ್ಲರನ್ನು ಕಂಡುಹಿಡಿಯಲು ಅದೇ ಮಾದರಿಯನ್ನು ಬಳಸಿಕೊಳ್ಲಲು ಇತರ ರಾಜ್ಯಗಳನ್ನು ಕೇಳಿದೆ.

ರಾಜ್ಯದಲ್ಲಿ ಒಟ್ಟು ಪಡಿತರ ಚೀಟಿ ಹೊಂದಿರುವವರ ಸಂಖ್ಯೆ 1,48,89,430. ಸ್ವೀಕರಿಸಲಾದ ಹೊಸ ಪಡಿತರ ಚೀಟಿ ಅರ್ಜಿ3,37,920-ಅನರ್ಹ ಪಡಿತರ ಚೀಟಿಗಳು 5,53,969. ತಿರಸ್ಕರಿಸಲಾದ ಅರ್ಜಿ 57,423. ಪರಿಶೀಲಿಸಲಾಗಿರುವ ಅರ್ಜ 6,092.

ಡೇಟಾ ಎಲಿಮಿನೇಷನ್ ಮಾನದಂಡಗಳು ಆಧಾರ್ ಕಾರ್ಡ್‌ಗಳ ಡೇಟಾವನ್ನು ಆಧರಿಸಿದೆ. ಅನರ್ಹ ಫಲಾನುಭವಿಗಳನ್ನು ಗುರುತಿಸಲು ಭೂಮಿ ಡೇಟಾ ಸಂಚಯದ ದಾಖಲೆಗಳನ್ನು ಸಹ ಪರಿಶೀಲಿಸಲಾಯಿತು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಡೇಟಾಬೇಸ್‌ನಲ್ಲಿ ಸೇರ್ಪಡೆ ದೋಷಗಳನ್ನು ತೆಗೆದುಹಾಕಲು ಆಹಾರ ಫಲಾನುಭವಿಗಳ ಡೇಟಾಬೇಸ್ ಅನ್ನು ಈಗ ಬೇರೆ ಬೇರೆ ಇಲಾಖೆಗಳ ಫಲಾನುಭವಿಗಳ ಪಟ್ಟಿಗಳೊಂದಿಗೆ ಹೋಲಿಕೆ ಮಾಡಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಇಲಾಖೆ ಯಾವುದೇ ಪಡಿತರ ಚೀಟಿ ನೀಡಿಲ್ಲ, ಮತ್ತು ಸಾಂಕ್ರಾಮಿಕ ರೋಗದ ಒಂದು ವರ್ಷಕ್ಕೂ ಹೆಚ್ಚು ಕಾಲಅಕ್ರಮ ಫಲಾನುಭವಿಗಳನ್ನು ತೆಗೆದು ಹಾಕಲು ಬಳಸಿಕೊಳ್ಳಲಾಗಿದೆ. ಡೇಟಾವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆದಾಯ ತೆರಿಗೆ ಸಲ್ಲಿಕೆಯ ಆಧಾರದ ಮೇಲೆ ಒಟ್ಟು 79,069 ಅಂತ್ಯೋದಯ ಪಡಿತರ ಚೀಟಿಗಳು ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ಎಚ್ ಅನಿಲ್ ಕುಮಾರ್ ರಾಷ್ಟ್ರೀಯ ವಾಹಿನಿಗೆ ತಿಳಿಸಿದ್ದಾರೆ.

ಈ ಕಾರ್ಯಾಚರಣೆಯು ಇಲಾಖೆಗೆ ತಿಂಗಳಿಗೆ 5.01 ಕೋಟಿ ರೂ., ಮತ್ತು ವಾರ್ಷಿಕವಾಗಿ 60.20 ಕೋಟಿ ರೂ ಉಳಿತಾಯಕ್ಕೆ ಕಾರಣವಾಗಲಿದೆ.

ಪಡಿತರ ಚೀಟಿ ಹೊಂದಿರುವ ಕೆಲವರು ಮೃತರಾಗಿದ್ದಾರೆ ಇತರರು ರಾಜಕೀಯ ಸಂಪರ್ಕಗಳನ್ನು ಹೊಂದಿದ್ದಾರೆ ಅಥವಾ ಉತ್ತಮ ವೃತ್ತಿಯನ್ನು ಹೊಂದಿದ್ದಾರೆ, ಆದರೆ ಇನ್ನೂ ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ ಮತ್ತು ಮಾಸಿಕ ಸಬ್ಸಿಡಿ ಪಡಿತರವನ್ನು ಪಡೆಯುತ್ತಾರೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!