ಪಂಚಾಯಿತಿ ಚುನಾಯಿತರ ಸದಸ್ಯತ್ವದಿಂದ ಪದಚ್ಯುತಿ ಕುರಿತು: ಜನಸಾಮಾನ್ಯರಿಗೆ ಕಾನೂನು ಅರಿವು.

ಆಡಳಿತ ಸುಧಾರಣೆಗಾಗಿ ಹಾಗೂ ಗ್ರಾಮಗಳ ಅಭಿವೃದ್ಧಿಗಾಗಿ ಗ್ರಾಮಪಂಚಾಯಿತಿ, ತಾಲೂಕುಪಂಚಾಯಿತಿ, ಜಿಲ್ಲಾಪಂಚಾಯಿತಿಗಳನ್ನು ಸ್ಥಾಪಿಸಲಾಗಿದೆ.

ಚುನಾವಣೆ ಮೂಲಕ ಸದಸ್ಯರನ್ನು ಮತದಾರರು ಆಯ್ಕೆ ಮಾಡಿದರೆ, ಸದಸ್ಯರುಗಳು ಪಂಚಾಯಿತಿಯ ಅಧ್ಯಕ್ಷ / ಉಪಾಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ. ಈ ರೀತಿ ಆಯ್ಕೆಗೊಂಡವರ ಪದಚ್ಯುತಿ ಯಾವ ರೀತಿ ಮಾಡಬಹುದು ಎಂಬುದು ಅನೇಕರಲ್ಲಿ ಕಾಡುವುದು ಸಹಜ ಈ ಕುರಿತು ಒಂದು ವರದಿ ಇಲ್ಲಿದೆ.

೧,ಪಂಚಾಯಿತಿಗೆ ಆಯ್ಕೆಯಾದ ಸದಸ್ಯರು ತನ್ನ ಕರ್ತವ್ಯಗಳನ್ನು ನಿರ್ವಹಿಸುವಾಗ ದುರ್ನಡತೆ ಅಥವಾ ತಲೆ ತಗ್ಗಿಸುವಂತಹ ಕೆಲಸವನ್ನು ಮಾಡಿದಾಗ.

೨,ವೈದ್ಯಕೀಯವಾಗಿ ಸಾಮರ್ಥ್ಯ ಇಲ್ಲ ಎಂದು ಜಿಲ್ಲಾ ವೈದ್ಯ ಅಧಿಕಾರಿ ಪ್ರಮಾಣೀಕರಿಸಿದರೆ, ದಿವಾಳಿ ಅಥವಾ ಅಸ್ವಸ್ಥಚಿತ್ತದವನಾಗಿದರೆ.

೩,ಯಾವ ಸದಸ್ಯನ್ನು ಸತತವಾಗಿ 4 ಸಭೆಗಳಿಗೆ ಗೈರು ರಾಜರಾದ ಸಂದರ್ಭದಲ್ಲಿ ಮತ್ತು ಅಧ್ಯಕ್ಷ ಅಥವಾ ಉಪ-ಅಧ್ಯಕ್ಷ ಸಭೆಗಳನ್ನು ಕರೆಯಬೇಕಾಗಿದ್ದಾಗ ಅಥವಾ ವಿಶೇಷ ಸಂದರ್ಭದಲ್ಲಿ ಒಂದಾದ ಮೇಲೊಂದರಂತೆ ನಡೆಯಬೇಕಾದ ಎರಡು ಸಭೆಗಳನ್ನು ಕರೆಯಲು ತಪ್ಪಿದ್ದರೆ ವಿಚಾರಣೆ ನಂತರ ಪದಚ್ಯುತಿಗೆ ಅರ್ಹನಾಗುತ್ತಾರೆ.

೪,ಪಂಚಾಯಿತಿ ಸದಸ್ಯನು ಅಧ್ಯಕ್ಷ ಅಥವಾ ಉಪಾಧ್ಯಕ್ಷರ ಹುದ್ದೆಯ ವ್ಯಾಪಾರಕ್ಕಾಗಿ ಸಂದರ್ಭಕ್ಕೆ ಅನುಗುಣವಾಗಿ, ಯಾವುದೇ ಮತದಾರ ಅಥವಾ ಸದಸ್ಯರನ್ನು ಸೆಳೆಯುವುದು ಅಥವಾ ದಬ್ಬಾಳಿಕೆ ಅಥವಾ ವಂಚನೆ ಮಾಡಿದ್ದಾಗ.

೫,ಪಂಚಾಯಿತಿಯ ಯಾವುದೇ ಕಾಮಗಾರಿಗಳನ್ನು ಕಾರ್ಯಗತಗೊಳಿಸುವಾಗ, ಕರಾರು ಅಥವಾ ಕಾಮಗಾರಿಗೆ ಯಾವುದೇ ವ್ಯಾವಹಾರದಲ್ಲಿ ಕುಟುಂಬದ ಹತ್ತಿರದ ಸಂಬಂಧಿಯಾಗಿರುವ ಯಾವೊಬ್ಬ ವ್ಯಕ್ತಿಯನ್ನು ಪ್ರತ್ಯಕ್ಷವಾಗಿ ತೊಡಗಿಕೊಂಡಿರುವುದು ಕಂಡುಬಂದರೆ ಉದಾಹರಣೆಗೆ (ಕುಟುಂಬದ ಹತ್ತಿರದ ಸಂಬಂಧಿಗಳು ಎಂದರೆ ಪತ್ನಿ, ಪತಿ, ಮಗ, ಮಗಳು ಅಥವಾ ಮಲ ಮಗ, ಮಲ ಮಗಳು ಅಂತ ವ್ಯಕ್ತಿಯ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರುವ ರಕ್ತಸಂಬಂಧವಾಗಿರಲಿ ಅಥವಾ ವಿವಾಹದಿಂದಾಗಲಿ ಸಂಬಂಧಿಸಿದ ಯಾವೊಬ್ಬ ವ್ಯಕ್ತಿಗಳು) ಅಥವಾ ಪಾಲುದಾರನಾಗಿ, ನೌಕರರಂತೆ ಅಥವಾ ಬೇರೆ ಸಂಘ-ಸಂಸ್ಥೆ ಮಂಡಳಿಯಲ್ಲಿ ಸದಸ್ಯನಂತೆ ಸಹಭಾಗಿಯಾಗಿರುವನೆಂದು ತಿಳಿದುಬಂದ ಸಂದರ್ಭಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅದಿನಿಧಿನಿಯಮ- 1993 ಅನ್ವಯ ಅಂತಹ ಸದಸ್ಯನಿಗೆ ನೋಟೀಸು ನೀಡಿ ಅವನ ಹೇಳಿಕೆಗಳನ್ನು ಹೇಳಿಕೊಳ್ಳಲು ಅವಕಾಶ ನೀಡಿ ವಿಚಾರಣೆ ಮಾಡಿದ ನಂತರ, ತೆಗೆದುಹಾಕುವುದು ಸೂಕ್ತವೆಂದು ಭಾವಿಸಿದರೆ ಸದಸ್ಯನ ಸದಸ್ಯತ್ವದಿಂದ ತೆಗೆದುಹಾಕಬಹುದು. 

ಈ ರೀತಿ ಯಾವ ಅಧ್ಯಕ್ಷ, ಉಪಾಧ್ಯಕ್ಷ ಅಥವಾ ಸದಸ್ಯ ತನ್ನ ಸದಸ್ಯ ಸ್ಥಾನವನ್ನು ಕಳೆದುಕೊಂಡ ನಂತರ ಮುಂದಿನ ಆರು ವರ್ಷಗಳ ಕಾಲ ಯಾವುದೇ ಪಂಚಾಯಿತಿಯ ಚುನಾವಣೆಗಳಲ್ಲಿ ಸ್ಪರ್ಧಿಸಲು ಅನರ್ಹನಾಗಿರುತ್ತಾನೆ.@ಟಿ.ಕೆ.ಹನುಮಂತರಾಜು, 9740768291

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!