ಟೌನ್‌ಶಿಪ್‌ಗಳಿಗೆ ಅನುಮತಿ ನೀಡುವ ಕಾರ್ಯಕ್ಕೆ ಚುರುಕು: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

ಬೆಂಗಳೂರು: ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ಪ್ರತ್ಯೇಕ ಸ್ಲಾಬನ್ನ ಘೋಷಿಸುವ ಬಗ್ಗೆ ಶೀಘ್ರದಲ್ಲೇ ಕೈಗಾರಿಕಾ, ನಗರಾಭಿವೃದ್ದಿ ಹಾಗೂ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು. 

ನಗರದ ಎಫ್‌ಕೆಸಿಸಿಐ ನಲ್ಲಿ ನಗರಾಭಿವೃದ್ದಿ ಸಚಿವರು ಹಾಗೂ ಕೈಗಾರಿಕಾ ಸಚಿವರೊಂದಿಗೆ ಆಸ್ತಿ ತೆರಿಗೆ ಪರಿಷ್ಕರಣೆಯ ಕುರಿತಂತೆ ಆಯೋಜಿಸಿದ್ದ ಸಂವಾದ‍ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆಸ್ತಿ ತೆರಿಗೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಕೈಗಾರಿಕೋದ್ಯಮಿಗಳು ಸಾಕಷ್ಟು ಬಾರಿ ಮನವಿಯನ್ನು ಮಾಡಿದ್ದಾರೆ. ಈ ಬಗ್ಗೆ ಈಗಾಗಲೇ ನಗರಾಭಿವೃದ್ದಿ ಹಾಗೂ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಹಲವಾರು ಬಾರಿ ಸಭೆಗಳನ್ನು ನಡೆಸಲಾಗಿದೆ. ಅಲ್ಲದೆ, ಈ ಬಾರಿಯ ಆಯವ್ಯಯದಲ್ಲಿ ಹಾಗೂ ನೂತನ ಕೈಗಾರಿಕಾ ನೀತಿಯಲ್ಲೂ ಪ್ರಸ್ತಾಪಿಸಲಾಗಿದೆ.

ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ನೂತನ ಸ್ಲಾಬನ್ನು ರಚಿಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಈ ವಿಷಯವಾಗಿ ಸಚಿವ ಸಂಪುಟದ ಮುಂದೆ ನಗರಾಭಿವೃದ್ದಿ ಇಲಾಖೆಯ ವತಿಯಿಂದ ಶೀಘ್ರದಲ್ಲೇ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಹೇಳಿದರು. 

 ಹಳೆಯ ತೆರಿಗೆಯ ಬಗ್ಗೆ: ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ ಹಾಗೂ ಕೆಎಸ್‌ಎಸ್‌ಐಡಿಸಿ ವತಿಯಿಂದ ಅಭಿವೃದ್ದಿಪಡಿಸಲಾದ ಕೈಗಾರಿಕಾ ಪ್ರದೇಶಗಳನ್ನು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡುವ ಮುನ್ನ ತೆರಿಗೆ ಸಂಗ್ರಹ ಮಾಡುವ ಹಾಗಿಲ್ಲ. ಆದರೆ, ಕೆಲವು ಕಡೆ ಸ್ಥಳೀಯ ಸಂಸ್ಥೆಗಳು ತೆರಿಗೆ ಸಂಗ್ರಹಿಸುತ್ತಿವೆ. ಆದರೆ ತೆರಿಗೆ ನೀಡುವ ಕೈಗಾರಿಕೆಗಳು ಸ್ಥಳೀಯ ಸಂಸ್ಥೆಗಳಿಂದ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಆಗದೇ ಇರುವ ಹಿನ್ನಲೆಯಲ್ಲಿ ಹಲವಾರು ದೂರುಗಳನ್ನು ನೀಡುತ್ತಿದ್ದಾರೆ.

ಹಳೆಯ ತೆರಿಗೆಯ ಬಗ್ಗೆ ಒಂದು ಸ್ಪಷ್ಟವಾದ ವೈಜ್ಞಾನಿಕ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಮೂರು ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಈ ಎಲ್ಲಾ ರೀತಿಯ ಸಮಸ್ಯೆಗಳಿಗೆ ನಗರಾಭಿವೃದ್ದಿ ಸಚಿವರಾದ ಬಿ.ಎ ಬಸವರಾಜ ಅವರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು. 

ಟೌನ್‌ ಶಿಪ್‌ಗಳ: ಟೌನ್‌ ಶಿಪ್‌ಗಳನ್ನು ನಿರ್ಮಿಸುವ ಬಗ್ಗೆ ಈಗಾಗಲೇ ಹಲವಾರು ಸುತ್ತಿನ ಚರ್ಚೆಗಳು ನಗರಾಭಿವೃದ್ದಿ ಇಲಾಖೆಯಿಂದಿಗೆ ನಡೆದಿವೆ. ಟೌನ್‌ಶಿಪ್‌ಗಳನ್ನು ನಿರ್ಮಿಸುವ ಮೂಲಕ ಸಂಗ್ರಹವಾಗುವ ಆದಾಯದಲ್ಲಿ ಶೇಕಡಾ 70 ರಷ್ಟು ಟೌನ್‌ಶಿಪ್‌ ಆಡಳಿತ ಮಂಡಳಿಗೆ ಹಾಗೂ ಶೇಡಕಾ 30 ರಷ್ಟು ಸ್ಥಳೀಯ ಸಂಸ್ಥೆಗಳೀಗೆ ನೀಡುವುದರಿಂದ ಎರಡೂ ಕಡೆ ಅಭಿವೃದ್ದಿ ಸಾಧ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಜಂಟಿ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು. 

ನಗರಾಭಿವೃದ್ದಿ ಸಚಿವ ಬಿ.ಎ ಬಸವರಾಜು ಮಾತನಾಡಿ ರಾಜ್ಯಾದ್ಯಂತ ಇರುವ ಈ ಸಮಸ್ಯೆಗಳ ಬಗ್ಗೆ ಸರಕಾರದ ಮಟ್ಟದಲ್ಲಿ ಹಲವಾರು ಬಾರಿ ಚರ್ಚೆ ನಡೆದಿದೆ. ಕೈಗಾರಿಕೆಗಳು ಅನುಭಿವಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಕಾರಾತ್ಮಕವಾದ ಚರ್ಚೆ ನಡೆಸಲಾಗಿದೆ. ಈ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಇನ್ನು ಕೆಲವೇ ದಿನಗಳಲ್ಲಿ ಸಚಿವ ಸಂಪುಟ ಸಭೆಯ ಮುಂದೆ ಟೌನ್‌ಶಿಪ್‌ ಹಾಗೂ ಕೈಗಾರಿಕೆಗಳ ಆಸ್ತಿ ತೆರಿಗೆ ಆಕರಣೆಯ ಬಗ್ಗೆ ಕ್ಯಾಬಿನೆಟ್‌ ನೋಟ್‌ ಮಂಡಿಸಲಾಗುವುದು ಎಂದು ಹೇಳಿದರು. 

ಸಭೆಯಲ್ಲಿ ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭುಷಣ್‌, ನಿರ್ದೇಶಕಿ ಶ್ರೀಮತಿ ಕಾವೇರಿ ಎಫ್‌ಕೆಸಿಸಿಐ ಅಧ್ಯಕ್ಷ ಪೆರಿಕಾಲ್‌ ಎಂ ಸುಂದರ್‌, ಹಿರಿಯ ಉಪಾಧ್ಯಕ್ಷ ಡಾ. ಐ.ಎಸ್‌ ಪ್ರಸಾದ್‌ ಸೇರಿದಂತೆ ರಾಜ್ಯದ ವಿವಿಧ ಬಾಗಗಳಿಂದ ಆಗಮಿಸಿದ್ದ ಎಫ್‌ಕೆಸಿಸಿಐ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!