ದೊಡ್ಡಬಳ್ಳಾಪುರ ತಾಲೂಕಿನ ವಿವಿಧೆಡೆ ಚೆಕ್ ಪೊಸ್ಟ್ ಗಳ ಸ್ಥಾಪನೆ…! / ವಾಹನಗಳ ತಪಾಸಣೆ ತೀವ್ರಗೊಳಿಸಿದ ಪೊಲೀಸರು

ದೊಡ್ಡಬಳ್ಳಾಪುರ: ಅಕ್ರಮ ಗೋ ಸಾಗಾಣಿಕೆ, ಸರಗಳ್ಳತನ ಮತ್ತಿತರ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಪೊಲೀಸರು ತಾಲೂಕಿನ ವಿವಿಧೆಡೆ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿ ವಾಹನಗಳ ತಪಾಸಣೆ ತೀವ್ರಗೊಳಿಸಿದ್ದಾರೆ.

ಈ ಕುರಿತು ಹರಿತಲೇಖನಿಗೆ ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಮಾಹಿತಿ‌ ನೀಡಿದ್ದು, ಸರಗಳ್ಳತನ, ಅಕ್ರಮ ಗೋ ಸಾಗಾಣಿಕೆ ಸೇರಿದಂತೆ ಎಲ್ಲಾ ತರಹದ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ತಾಲೂಕಿನ ನಾಲ್ಕು ಕಡೆ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ.

ಗೌರಿಬಿದನೂರಿನ ಕಡೆಯಿಂದ ಬರುವ ವಾಹನ ತಪಾಸಣೆಗೆ ಗುಂಜೂರು ಬಳಿ, ಅಲಿಪುರ, ಹೊಸೂರು, ಮಧುಗಿರಿ ಕಡೆಯಿಂದ ಬರುವ ವಾಹನಗಳ ತಪಾಸಣೆಗೆ ಆರೂಢಿಯಲ್ಲಿ. ನೆಲಮಂಗಲ ಕಡೆಯ ವಾಹನಗಳ ತಪಾಸಣೆಗೆ ಕನಸವಾಡಿ ಬಳಿ ಹಾಗೂ ಬೆಂಗಳೂರು ಕಡೆಯಿಂದ ಬರುವ ವಾಹನಗಳನ್ನು ತಪಾಸಣೆ ಮಾಡಲು ಮಾರಸಂದ್ರ ಬಳಿ ಚೆಕ್ ಪೋಸ್ಟ್ ಸ್ಥಾಪಿಸಿ ನಿರಂತರವಾಗಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.

ಈ ಚೆಕ್ ಪೋಸ್ಟ್ ದಿನದ 24 ಗಂಟೆಗಳ ಕಾಲ ನಿರಂತರವಾಗಿ ಕಾರ್ಯನಿರ್ವಹಿಸಲಿದ್ದು, ಪೊಲೀಸರು ಅನುಮಾನಸ್ಪದ ವಾಹನಗಳನ್ನು ತಡೆದು ತಪಾಸಣೆ ನಡೆಸಲಿದ್ದಾರೆ.

ಜಿಲ್ಲೆಯಲ್ಲಿ ಸರಣಿ ಸರಗಳ್ಳತನ ನಡೆದಿರುವ ಹಿನ್ನೆಲೆಯಲ್ಲಿ ಪೊಲೀಸರು ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಲಾಕ್‍ಡೌನ್ ತೆರವಿನ ನಂತರ ಅನ್ಯ ರಾಜ್ಯದ ಕಳ್ಳರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಕುರಿತು ಶಂಕಿಸಲಾಗಿದೆ. ಈ ನಿಟ್ಟಿನಲ್ಲಿ ಅವರ ಬಂಧನಕ್ಕೆ ಇಲಾಖೆ ಕ್ರಮಕೈಗೊಂಡಿದೆ.

ಅಪರಾಧ ಪ್ರಕರಣಗಳ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಹಾಲಿನ ಡೈರಿ, ಪಡಿತರ ಅಂಗಡಿ, ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸುವುದು ಅಗತ್ಯವಾಗಿದ್ದು, ಒಡವೆಗಳನ್ನು ಧರಿಸಿಕೊಂಡು ಒಂಟಿಯಾಗಿ ಓಡಾಡದೆ ಅಪರಾಧ ತಡೆಗೆ ಪೊಲೀಸರೊಂದಿಗೆ ಕೈ ಜೋಡಿಸಬೇಕೆಂದು ನವೀನ್ ಕುಮಾರ್ ‌ಮನವಿ‌ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!