ಕಾಲೇಜುಗಳ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ

ಬೆಂ.ಗ್ರಾ.ಜಿಲ್ಲೆ: ರಾಜ್ಯ ಸರ್ಕಾರವು ಶೀಘ್ರದಲ್ಲಿ ಸ್ನಾತಕೋತ್ತರ ಹಾಗೂ ಪದವಿ ಕಾಲೇಜುಗಳನ್ನು ತೆರೆಯಲು ಆದೇಶಿಸುವ ಸಾಧ್ಯತೆಯಿರುವುದರಿಂದ, ಹದಿನೆಂಟು ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಶೇ.100 ರಷ್ಟು ಲಸಿಕೆ ಹಾಕಿಸುವ ಗುರಿ ಹೊಂದಲಾಗಿದ್ದು, ಕಾಲೇಜುಗಳ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕಾಕರಣ ನಡೆಸುವ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ತರಗತಿಗಳು, ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಕಾಲೇಜು ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗೆ ಲಸಿಕೆ ಹಾಕಿಸುವಂತೆ ಸೂಚನೆ ನೀಡಿದರು.ಸರ್ಕಾರದ ಮಾರ್ಗಸೂಚಿಯಂತೆ ಆದ್ಯತೆ ಮೇರೆಗೆ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತಿದ್ದು, ಜಿಲ್ಲೆಯ ಯಾವುದೇ ಪ್ರಾಥಮಿಕ, ಸಮುದಾಯ ಅಥವಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಲಸಿಕೆ ಪಡೆಯಬಹುದು ಎಂದರಲ್ಲದೆ, ಈಗಾಗಲೇ ಲಸಿಕೆ ಪಡೆದಿರುವ, ಪಡೆಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳ ಪಟ್ಟಿ ತಯಾರಿಸಿ, ಲಸಿಕೆ ಪಡೆಯದವರಿಗೆ ಲಸಿಕೆ ಪಡೆಯುವಂತೆ ಮನವೊಲಿಸಿ, ಶೇ.100 ರಷ್ಟು ಗುರಿ ಸಾಧಿಸುವಂತೆ ತಿಳಿಸಿದರು.

ಆರೋಗ್ಯ ಇಲಾಖೆ ವತಿಯಿಂದ ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳಿಗಾಗಿಯೇ ವಾರಾಂತ್ಯದಲ್ಲಿ ವಿಶೇಷ ಲಸಿಕಾ ಅಭಿಯಾನವನ್ನು ಹಂತ-ಹಂತವಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಕಾಲೇಜು ವತಿಯಿಂದ ಲಸಿಕೆ ಪಡೆಯದ ವಿದ್ಯಾರ್ಥಿಗಳ ಮಾಹಿತಿ ನೀಡಿದರೆ, ಜಿಲ್ಲಾಡಳಿತದ ವತಿಯಿಂದ ಲಸಿಕೆ ಪಡೆಯುವಂತೆ ಸಂದೇಶ ಕಳುಹಿಸಿ ಉತ್ತೇಜಿಸಲಾಗುವುದು ಎಂದರು.

ಈ ಸಭೆಗೂ ಮುನ್ನ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿ, ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಪಡೆಯಲು ಗರ್ಭಿಣಿಯರ ನೋಂದಣಿಯಾಗುತ್ತಿದೆ ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ನೋಂದಣಿಯಾಗದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ಹೊಸ ತಂತ್ರಜ್ಞಾನ ಅಭಿವೃದ್ಧಿಪಡಿಸಿ ನೋಂದಣಿ ಮಾಡಲು ಆಸ್ಪತ್ರೆಯವರಿಗೆ ತರಬೇತಿ ನೀಡಬೇಕು ಎಂದರಲ್ಲದೆ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಲಸಿಕೆಯನ್ನು ಮಹಿಳೆಯರಿಗೆ ಹಾಗೂ ಮಕ್ಕಳಿಗೆ ನೀಡುವಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ದೇವನಹಳ್ಳಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಸಂಜಯ್, ದೊಡ್ಡಬಳ್ಳಾಪುರ ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ, ಗೀತಂ ವಿಶ್ವವಿದ್ಯಾಲಯ, ರೈ ವಿಶ್ವವಿದ್ಯಾಲಯ, ದೇವರಾಜ ಅರಸು ತಾಂತ್ರಿಕ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ‌ಸೇರಿದಂತೆ ಜಿಲ್ಲೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಆಡಳಿತ ಸಿಬ್ಬಂದಿ ‌ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ಇಂದು ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು

[ccc_my_favorite_select_button post_id="117650"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!