ಎರಡು ವರ್ಷವಾದರೂ ದೊಡ್ಡಬಳ್ಳಾಪುರ ನಗರಸಭೆಗಿಲ್ಲ ಚುನಾವಣೆ ಭಾಗ್ಯ…..!

ದೊಡ್ಡಬಳ್ಳಾಪುರ: ಕರೊನಾ ಹಿನ್ನಲೆಯಲ್ಲಿ ಅವಧಿ ಮುಗಿದಿರುವ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ, ನಗರಸಭೆ ಸೇರಿದಂತೆ ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಡಿಸೆಂಬರ್ ವರಗೆ  ನಡೆಸದಿರಲು ರಾಜ್ಯ ಸರ್ಕಾರ ಸೂಚಿಸಿದೆ. ಈ ಹಿನ್ನಲೆಯಲ್ಲಿ ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಸಹ ಮುಂದೂಡಲಾಗಿದ್ದು ಚುನಾವಣೆ ಅಗತ್ಯತೆ ಬಗ್ಗೆ ಒತ್ತಡಗಳ ಕೇಳಿ ಬರುತ್ತಿವೆ.

ಅವಧಿ ಮುಕ್ತಾಯವಾಗಿ ಎರಡು ವರ್ಷ: ಐದು ವರ್ಷಗಳ ಅವಧಿಯ ನಗರಸಭೆ ಸದಸ್ಯರ ಅಧಿಕಾರ ಅವಧಿ 2019ರ ಮಾ.12ರ ಸಂಜೆ ಮುಕ್ತಾಯವಾಗಿ, ನಗರಸಭೆ ಈಗ ಆಡಳಿತಾಧಿಕಾರಿಗಳ ಸುಬರ್ದಿನಲ್ಲಿದೆ. 2 ವರ್ಷ 3 ತಿಂಗಳಾಗಿದ್ದರೂ ಇನ್ನೂ ಚುನಾವಣೆ ಭಾಗ್ಯವಿಲ್ಲ. ಈಗ ನಗರಸಭೆ ಚುನಾವಣೆ ಮುಂದೂಡಿರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಹೊಂದಿದ್ದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ.

ವಾರ್ಡ್ ಮೀಸಲಾತಿ ತಕರಾರು: ವಾರ್ಡ್‍ಗಳ ಗಡಿ ನಿಗದಿ, ವಾರ್ಡ್‍ಗಳ ಮೀಸಲಾತಿ ಅಂತಿಮಗೊಳಿಸಿದ್ದರೂ ಸಹ ಇದು ಸರಿ ಇಲ್ಲ ಎನ್ನುವುದನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೊರೆಹೋದ ಕಾರಣದಿಂದಾಗಿ ನಗರಸಭಾ ಚುನಾವಣೆ ವಿಳಂಬವಾಗುತ್ತಲೇ ಬರುತ್ತಿದೆ. ಮೂರು ತಿಂಗಳ ಹಿಂದೆಯಷ್ಟೇ ನ್ಯಾಯಾಲಯದ ಆದೇಶದಂತೆ ವಾರ್ಡ್‍ಗಳ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಚುನಾವಣೆ ದಿನಾಂಕ ಘೋಷಣೆಯಾಗುವ ಹಂತದಲ್ಲಿ ಇರುವಾಗಲೇ ಮತ್ತೊಮ್ಮೆ ವಾರ್ಡ್‍ಗಳ ಮೀಸಲಾತಿ ನಿಗದಿಯನ್ನು ಪ್ರಶ್ನಿಸಿ ಜಿ.ಎಸ್.ಸೋಮರುದ್ರ ಶರ್ಮ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಇದೆಲ್ಲವು ಇತ್ಯರ್ಥವಾಗಿ ಚುನಾವಣಾ ದಿನಾಂಕ ಪ್ರಕಟವಾಗುತ್ತದೆ ಎನ್ನುವಷ್ಟರಲ್ಲಿ ಮತ್ತೊಮ್ಮೆ ಲಾಕ್‍ಡೌನ್ ಜಾರಿಗೆ ಬಂತು. ಇದರ ಬೆನ್ನಲ್ಲೆ ಸರ್ಕಾರದ ಆದೇಶ ಹೊರಬಿದ್ದಿರುವುದು ಚುನಾವಣೆಗಾಗಿ ಸಂಘಟನೆಯಲ್ಲಿ ನಿರತರಾಗಿದ್ದ ಆಕಾಂಕ್ಷಿಗಳಲ್ಲಿ ಬೇಸರ ಮೂಡಿಸಿದೆ.

ಈ ನಡುವೆ ಸರ್ಕಾರ ಹಾಗೂ ವಾರ್ಡ್ ಮೀಸಲಾತಿ ತಕರಾರು ಸಲ್ಲಿಸಿರುವ ಅರ್ಜಿದಾರರ ವಿಚಾರಣೆಗಳು ವಿಳಂಬವಾಗುತ್ತಿದೆ. ಸರ್ಕಾರದ ಪರವಾಗಿ ಸರಿಯಾಗಿ ತಮ್ಮ ನಿಲುವು ಸಮರ್ಥಿಸುವ ಕಡೆ ಗಮನ ನೀಡುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬರುತ್ತಿದ್ದು, ವಿಚಾರಣೆ ತ್ವರಿತವಾಗಿ ನಡೆದು ತೀರ್ಪು ಹೊರಬೀಳಬೇಕಿದೆ ಎನ್ನುವುದು ರಾಜಕೀಯ ಮುಖಂಡರ ಅಭಿಪ್ರಾಯವಾಗಿದೆ.

ಉದ್ಘಾಟನೆಗೆ ಕಾಯುತ್ತಿದೆ ಹೊಸ ಕಾರ್ಯಾಲಯ: ನಗರಸಭೆಯ ಆವರಣದಲ್ಲಿ 4.5 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ನಗರಸಭೆಯ ಕಾರ್ಯಾಲಯ ಬಹುತೇಕ ಪೂರ್ಣವಾಗಿದೆ. ಆದರೆ ಇದಕ್ಕೆ ಇನ್ನೂ ಉದ್ಘಾಟನಾ ಭಾಗ್ಯವಿಲ್ಲ. ಎಲ್ಲಾ ಸರಿಯಾಗಿದ್ದರೆ ಕಟ್ಟಡ ಉದ್ಘಾಟನೆಯಾಗಬೇಕಿತ್ತು. ಡಿಸೆಂಬರ್ ನಂತರ ಚುನಾವಣೆ ನಡೆದರೆ ಮಾರ್ಚ್ ವೇಳೆಗೆ ನಗರಸಭೆ ಅವಧಿ ಮುಗಿದು 3 ವರ್ಷವಾಗುತ್ತದೆ. ಮುಂದಿನ ನೂತನ ನಗರಸಭಾ ಸದಸ್ಯರು ಹೊಸ ಕಟ್ಟಡದಲ್ಲಿಯೇ ತಮ್ಮ ಸಭೆಗಳನ್ನು ನಡೆಸಬಹುದಾಗಿದೆ.

ನಗರಸಭೆ ಚುನಾವಣೆ ನಡೆಸುವುದು ಸೂಕ್ತವಾಗಿದ್ದು, ನ್ಯಾಯಾಲಯದಲ್ಲಿರುವ ಆಕ್ಷೇಪಣೆಗಳು  ಶೀಘ್ರ ಬಗೆಹರಿದು ಚುನಾವಣೆ ಶೀಘ್ರ ಪ್ರಕಟವಾಗಲಿ ಎಂದು ರಾಜಕೀಯ ಮುಖಂಡರ ಹಾಗೂ ನಾಗರಿಕರ ಅಭಿಪ್ರಾಯವಾಗಿದೆ.

ನಗರಸಭೆಯ ವಾರ್ಡ್‍ಗಳ ಗಡಿ ನಿಗದಿ, ವಾರ್ಡ್‍ಗಳ ಮೀಸಲಾತಿ ಅಂತಿಮಗೊಳಿಸಲಾಗಿದ್ದರೂ, ಕೆಲವರು ನ್ಯಾಯಾಲಯದ ಮೊರೆ ಹೋಗಿರುವುದರಿಂದ, ಪ್ರಕರಣ ಇತ್ಯರ್ಥವಾದ ನಂತರ ನಿಯಮಾನುಸಾರ ಚುನಾವಣೆ ನಡೆಯಲಿದೆ. ನಗರಸಭೆ ಕಾರ್ಯಾಲಯದ ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಒಳಾಂಗಣದ ಕಾಮಗಾರಿಗಳು ಬಾಕಿ ಇವೆ: ರಮೇಶ್.ಎಸ್.ಸುಣಗಾರ್ ಪೌರಾಯುಕ್ತ, ನಗರಸಭೆ

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ 1.3-3ಕೋಟಿ: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ

ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ ನೀಡಿದೆ.ಬಾಡಿಗೆ ನೆಪದಲ್ಲಿ ಕಮೀಷನ್ ಗೋಲ್ ಮಾಲ್ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="116356"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!