ಎರಡು ವರ್ಷವಾದರೂ ದೊಡ್ಡಬಳ್ಳಾಪುರ ನಗರಸಭೆಗಿಲ್ಲ ಚುನಾವಣೆ ಭಾಗ್ಯ…..!

ದೊಡ್ಡಬಳ್ಳಾಪುರ: ಕರೊನಾ ಹಿನ್ನಲೆಯಲ್ಲಿ ಅವಧಿ ಮುಗಿದಿರುವ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ, ನಗರಸಭೆ ಸೇರಿದಂತೆ ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಡಿಸೆಂಬರ್ ವರಗೆ  ನಡೆಸದಿರಲು ರಾಜ್ಯ ಸರ್ಕಾರ ಸೂಚಿಸಿದೆ. ಈ ಹಿನ್ನಲೆಯಲ್ಲಿ ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಸಹ ಮುಂದೂಡಲಾಗಿದ್ದು ಚುನಾವಣೆ ಅಗತ್ಯತೆ ಬಗ್ಗೆ ಒತ್ತಡಗಳ ಕೇಳಿ ಬರುತ್ತಿವೆ.

Guarantee scheme
ಎನ್ ವಿಶ್ವನಾಥ್

ಅವಧಿ ಮುಕ್ತಾಯವಾಗಿ ಎರಡು ವರ್ಷ: ಐದು ವರ್ಷಗಳ ಅವಧಿಯ ನಗರಸಭೆ ಸದಸ್ಯರ ಅಧಿಕಾರ ಅವಧಿ 2019ರ ಮಾ.12ರ ಸಂಜೆ ಮುಕ್ತಾಯವಾಗಿ, ನಗರಸಭೆ ಈಗ ಆಡಳಿತಾಧಿಕಾರಿಗಳ ಸುಬರ್ದಿನಲ್ಲಿದೆ. 2 ವರ್ಷ 3 ತಿಂಗಳಾಗಿದ್ದರೂ ಇನ್ನೂ ಚುನಾವಣೆ ಭಾಗ್ಯವಿಲ್ಲ. ಈಗ ನಗರಸಭೆ ಚುನಾವಣೆ ಮುಂದೂಡಿರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಹೊಂದಿದ್ದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ.

ವಾರ್ಡ್ ಮೀಸಲಾತಿ ತಕರಾರು: ವಾರ್ಡ್‍ಗಳ ಗಡಿ ನಿಗದಿ, ವಾರ್ಡ್‍ಗಳ ಮೀಸಲಾತಿ ಅಂತಿಮಗೊಳಿಸಿದ್ದರೂ ಸಹ ಇದು ಸರಿ ಇಲ್ಲ ಎನ್ನುವುದನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೊರೆಹೋದ ಕಾರಣದಿಂದಾಗಿ ನಗರಸಭಾ ಚುನಾವಣೆ ವಿಳಂಬವಾಗುತ್ತಲೇ ಬರುತ್ತಿದೆ. ಮೂರು ತಿಂಗಳ ಹಿಂದೆಯಷ್ಟೇ ನ್ಯಾಯಾಲಯದ ಆದೇಶದಂತೆ ವಾರ್ಡ್‍ಗಳ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಚುನಾವಣೆ ದಿನಾಂಕ ಘೋಷಣೆಯಾಗುವ ಹಂತದಲ್ಲಿ ಇರುವಾಗಲೇ ಮತ್ತೊಮ್ಮೆ ವಾರ್ಡ್‍ಗಳ ಮೀಸಲಾತಿ ನಿಗದಿಯನ್ನು ಪ್ರಶ್ನಿಸಿ ಜಿ.ಎಸ್.ಸೋಮರುದ್ರ ಶರ್ಮ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಇದೆಲ್ಲವು ಇತ್ಯರ್ಥವಾಗಿ ಚುನಾವಣಾ ದಿನಾಂಕ ಪ್ರಕಟವಾಗುತ್ತದೆ ಎನ್ನುವಷ್ಟರಲ್ಲಿ ಮತ್ತೊಮ್ಮೆ ಲಾಕ್‍ಡೌನ್ ಜಾರಿಗೆ ಬಂತು. ಇದರ ಬೆನ್ನಲ್ಲೆ ಸರ್ಕಾರದ ಆದೇಶ ಹೊರಬಿದ್ದಿರುವುದು ಚುನಾವಣೆಗಾಗಿ ಸಂಘಟನೆಯಲ್ಲಿ ನಿರತರಾಗಿದ್ದ ಆಕಾಂಕ್ಷಿಗಳಲ್ಲಿ ಬೇಸರ ಮೂಡಿಸಿದೆ.

ಈ ನಡುವೆ ಸರ್ಕಾರ ಹಾಗೂ ವಾರ್ಡ್ ಮೀಸಲಾತಿ ತಕರಾರು ಸಲ್ಲಿಸಿರುವ ಅರ್ಜಿದಾರರ ವಿಚಾರಣೆಗಳು ವಿಳಂಬವಾಗುತ್ತಿದೆ. ಸರ್ಕಾರದ ಪರವಾಗಿ ಸರಿಯಾಗಿ ತಮ್ಮ ನಿಲುವು ಸಮರ್ಥಿಸುವ ಕಡೆ ಗಮನ ನೀಡುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬರುತ್ತಿದ್ದು, ವಿಚಾರಣೆ ತ್ವರಿತವಾಗಿ ನಡೆದು ತೀರ್ಪು ಹೊರಬೀಳಬೇಕಿದೆ ಎನ್ನುವುದು ರಾಜಕೀಯ ಮುಖಂಡರ ಅಭಿಪ್ರಾಯವಾಗಿದೆ.

ಉದ್ಘಾಟನೆಗೆ ಕಾಯುತ್ತಿದೆ ಹೊಸ ಕಾರ್ಯಾಲಯ: ನಗರಸಭೆಯ ಆವರಣದಲ್ಲಿ 4.5 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ನಗರಸಭೆಯ ಕಾರ್ಯಾಲಯ ಬಹುತೇಕ ಪೂರ್ಣವಾಗಿದೆ. ಆದರೆ ಇದಕ್ಕೆ ಇನ್ನೂ ಉದ್ಘಾಟನಾ ಭಾಗ್ಯವಿಲ್ಲ. ಎಲ್ಲಾ ಸರಿಯಾಗಿದ್ದರೆ ಕಟ್ಟಡ ಉದ್ಘಾಟನೆಯಾಗಬೇಕಿತ್ತು. ಡಿಸೆಂಬರ್ ನಂತರ ಚುನಾವಣೆ ನಡೆದರೆ ಮಾರ್ಚ್ ವೇಳೆಗೆ ನಗರಸಭೆ ಅವಧಿ ಮುಗಿದು 3 ವರ್ಷವಾಗುತ್ತದೆ. ಮುಂದಿನ ನೂತನ ನಗರಸಭಾ ಸದಸ್ಯರು ಹೊಸ ಕಟ್ಟಡದಲ್ಲಿಯೇ ತಮ್ಮ ಸಭೆಗಳನ್ನು ನಡೆಸಬಹುದಾಗಿದೆ.

ನಗರಸಭೆ ಚುನಾವಣೆ ನಡೆಸುವುದು ಸೂಕ್ತವಾಗಿದ್ದು, ನ್ಯಾಯಾಲಯದಲ್ಲಿರುವ ಆಕ್ಷೇಪಣೆಗಳು  ಶೀಘ್ರ ಬಗೆಹರಿದು ಚುನಾವಣೆ ಶೀಘ್ರ ಪ್ರಕಟವಾಗಲಿ ಎಂದು ರಾಜಕೀಯ ಮುಖಂಡರ ಹಾಗೂ ನಾಗರಿಕರ ಅಭಿಪ್ರಾಯವಾಗಿದೆ.

ನಗರಸಭೆಯ ವಾರ್ಡ್‍ಗಳ ಗಡಿ ನಿಗದಿ, ವಾರ್ಡ್‍ಗಳ ಮೀಸಲಾತಿ ಅಂತಿಮಗೊಳಿಸಲಾಗಿದ್ದರೂ, ಕೆಲವರು ನ್ಯಾಯಾಲಯದ ಮೊರೆ ಹೋಗಿರುವುದರಿಂದ, ಪ್ರಕರಣ ಇತ್ಯರ್ಥವಾದ ನಂತರ ನಿಯಮಾನುಸಾರ ಚುನಾವಣೆ ನಡೆಯಲಿದೆ. ನಗರಸಭೆ ಕಾರ್ಯಾಲಯದ ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಒಳಾಂಗಣದ ಕಾಮಗಾರಿಗಳು ಬಾಕಿ ಇವೆ: ರಮೇಶ್.ಎಸ್.ಸುಣಗಾರ್ ಪೌರಾಯುಕ್ತ, ನಗರಸಭೆ

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!