ಮೈಸೂರು ಅರಸರ ಕುಟುಂಬದವನೆಂದು ನಂಬಿಸಿ ಯುವತಿಯರಿಂದ ಹಣ ಪೀಕುತ್ತಿದ್ದ ಕದೀಮನ ಬಂಧನ

ಬೆಂಗಳೂರು: ಆನ್‍ಲೈನ್ ಮೂಲಕ  ಯುವತಿಯರಿಗೆ ತಾನು ಮೈಸೂರು ಅರಸರ ಕುಟುಂಬದ ಸಂಬಂಧಿ ಎಂದು ಪರಿಚಯಮಾಡಿಕೊಂಡು ಮದುವೆಯಾಗುತ್ತೇನೆಂದು ನಂಬಿಸಿ ಯುವತಿಯರಿಂದ ಹಣ ಪಡೆದು ಮೋಸ ಮಾಡಿ, ವಂಚಿಸಿರುವ ಆರೋಪಿಯನ್ನು ವೈಟ್ ಫೀಲ್ಡ್‌ ಸಿ.ಇ.ಎನ್ ಪೊಲೀಸ್ ಠಾಣೆ ಸಿಬ್ಬಂದಿ ಬಂಧಿಸಿದ್ದಾರೆ.

ಆರೋಪಿಯಾದ ಸಿದ್ಧಾರ್ಥ್.ಕೆ ಎಂಬ ವ್ಯಕ್ತಿಯು ಆನ್‍ಲೈನ್‍ನಲ್ಲಿ “Sangam Matrimony” & “Kannada Matrimony” ಎಂಬ ವೆಬ್‍ಸೈಟ್‍ಗಳನ್ನು ಉಪಯೋಗಿಸಿಕೊಂಡು ಸದರಿ‌ ವೈಬ್‍ಸೈಟ್‍ಗಳಲ್ಲಿ ವಿವಾಹವಾಗಲು ಆಸಕ್ತಿ ತೋರುವ ಯುವತಿಯರನ್ನು ಪರಿಚಯಮಾಡಿಕೊಂಡು ತಾನು ಯು.ಎಸ್.ಎ (ಅಮೇರಿಕಾ) ದಲ್ಲಿ ಮೈಕ್ರೋಸಾಪ್ಟ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವುದಾಗಿ ಒಂದು ಫ್ರೋಫೈಲ್ ಅನ್ನು ಸೃಷ್ಟಿಸಿ, ಹಾಗೂ ತಾನು ಮೈಸೂರು ಸಂಸ್ಥಾನದ ರಾಜವಂಶಸ್ಥರ ಸಂಬಂಧಿ ಅರಸು ಕುಟುಂಬದವನು ಎಂದು ಸುಳ್ಳು ಹೇಳಿ “Siddarth Urs” ಎಂಬ ಹೆಸರಿನಿಂದ ಮ್ಯಾಟ್ರೊಮೋನಿ ವೆಬ್‍ಸೈಟ್‍ನಲ್ಲಿ ಯುವತಿಯವರೊಂದಿಗೆ ಪರಿಚಯ ಮಾಡಿಕೊಂಡು ವಂಚಿಸಿದ್ದಾನೆ ಎನ್ನಲಾಗಿದೆ.

ಮೈಸೂರು ರಾಜ ವಂಶಸ್ಥರ ಕುಟುಂಬದವರ ಜೊತೆ ಬಾಲ್ಯವನ್ನು ಕಳೆದಿರುವ ಹಾಗೆ ಚಿಕ್ಕ ವಯಸ್ಸಿನ ಹುಡುಗನ ಭಾವಚಿತ್ರವನ್ನು ಯುವತಿಯರಿಗೆ ಕಳುಹಿಸಿ ಅವರೊಂದಿಗೆ Spanish ಮತ್ತು U.S. English ಭಾಷೆಯಲ್ಲಿ ಮಾತನಾಡಿ ನಂಬಿಸಿದ್ದಲ್ಲದೆ ವೈದ್ಯಕೀಯ ಕಾರಣ & ಇತರೆ ವೈಯಕ್ತಿಕ ಕಾರಣವನ್ನು ನೀಡಿ ಹಲವಾರು ಯುವತಿಯರಿಂದ ಹಂತ ಹಂತವಾಗಿ ಆನ್‍ಲೈನ್ ಮೂಲಕ ಹಣವನ್ನು ವರ್ಗಾವಣೆ ಮಾಡಿಸಿಕೊಂಡು ವಂಚಿಸಿ ಮೋಸ ಮಾಡಿದ್ದಾನೆ ಎಂದು ದೂರು ದಾಖಲಾಗಿದೆ.

ವೈಟ್‍ಫೀಲ್ಡ್ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಸಿ.ಇ.ಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗುರುಪ್ರಸಾದ್ ಜಿ. ನೇತೃತ್ವದಲ್ಲಿ ಹಾಗೂ  ನವೀನ್‍ಕುಮಾರ್, ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ರವರು ಮತ್ತು ಸಿ.ಇ.ಎನ್ ಪೊಲೀಸ್ ಠಾಣಾ ಸಿಬ್ಬಂದಿಗಳೊಂದಿಗೆ ಮೈಸೂರು ಜಿಲ್ಲೆಯ ಬೈಲುಕುಪ್ಪೆ ಪಟ್ಟಣದಿಂದ ಆರೋಪಿಯನ್ನು ವಶಕ್ಕೆ ಪಡೆದು ಈತನನ್ನು ವಿಚಾರಣೆಗಾಗಿ ವೈಟ್‍ಫೀಲ್ಡ್ ವಿಭಾಗದ ಸಿ.ಇ.ಎನ್ ಪೊಲೀಸ್ ಠಾಣೆಯ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಆರೋಪಿಯಿಂದ ಎರಡು ಆಪಲ್ ಐಫೋನ್, ಒಂದು ಸ್ಯಾಮ್‌ಸಂಗ್‌ ಮೋಬೈಲ್ ಪೋನ್, 6  ಡೆಬಿಟ್ ಕಾರ್ಡ್, ವಶ ಪಡಿಸಿಕೊಳ್ಳಲಾಗಿದೆ.

ಈ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಬೆಂಗಳೂರಿನ ಬೇರೆ ಬೇರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು  ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿರುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಮಹಿಳಾ ಮೀಸಲಾತಿ (Women's reservation Bill) ಮಸೂದೆಗೆ ಸಂಬಂಧಿಸಿದ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಸಂಸತ್ತಿನಲ್ಲಿ ಸೋಲಾಗಿದ್ದು, ಇದೇ ಮೊದಲ ಬಾರಿಗೆ ಮಸೂದೆಯನ್ನು ಅಂಗೀಕರಿಸುವಲ್ಲಿ ಮೋದಿ (Modi) ಸರ್ಕಾರ ವಿಫಲವಾಗಿ, ಮುಖಭಂಗಕ್ಕೀಡಾಗಿದೆ.

[ccc_my_favorite_select_button post_id="121067"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!