ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೆಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯು ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ರಾಜ್ಯದಲ್ಲಿ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದ್ದು, ಈ ಸಂಸ್ಥೆಯ ಮೂಲಕ 6 ತಿಂಗಳು 180 ದಿನಗಳ ಅವಧಿಯ ಡಿಪ್ಲೊಮಾ ಇನ್-ಕೋ-ಆಪರೇಟಿವ್ ಮ್ಯಾನೆಜ್‍ಮೆಂಟ್ ತರಬೇತಿಯನ್ನು 2021 ರ ಜುಲೈಯಿಂದ ಪ್ರಾರಂಭಿಸುತ್ತಿದ್ದು, ತರಬೇತಿಯನ್ನು ಪಡೆಯಬಯಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಪಡೆಯುವ ಅಭ್ಯರ್ಥಿಗಳು ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತ ಅವಕಾಶವನ್ನು ಕಲ್ಪಿಸಲಾಗಿದ್ದು, ವಯೋಮಿತಿ ಕನಿಷ್ಟ 16 ವರ್ಷ ಆಗಿರಬೇಕು.

ಸಹಕಾರ ಸಂಘ ಸಂಸ್ಥೆಗಳಲ್ಲಿ ಕನಿಷ್ಠ ಒಂದು ವರ್ಷವಾದರೂ ಸೇವೆ ಸಲ್ಲಿಸಿರಬೇಕು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಸಹಕಾರ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಇಂತಹ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಬಹುದು. ತರಬೇತಿಯಲ್ಲಿ ಸಂಘ, ಸಂಸ್ಥೆಗಳಿಂದ ಬರುವ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.400 ಶಿಷ್ಯವೇತನ ನೀಡಲಾಗುವುದು.

ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಗೆ 6 ತಿಂಗಳ ವಿಶೇಷ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್’ ತರಬೇತಿ ನೀಡಲಾಗುವುದು.  ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ 16 ವರ್ಷಗಳಾಗಿರಬೇಕು ಗರಿಷ್ಠ 30 ವರ್ಷಗಳು ಮೀರಿರಬಾರದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಿಂದ ತರಿಸಿಕೊಳ್ಳಲಾಗುವುದು ಮತ್ತು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ಅಥವಾ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇವರ ಮೂಲಕ ಅರ್ಜಿಗಳನ್ನು ಜುಲೈ 2021ರ ಒಳಗಾಗಿ ಸಲ್ಲಿಸಬಹುದು. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.500 ಶಿಷ್ಯವೇತನವನ್ನು ನೀಡಲಾಗುವುದು.

ಅರ್ಜಿ ಮತ್ತು ವಿವರಣಾ ಪುಸ್ತಕದ ಶುಲ್ಕ ರೂ.100 ಗಳನ್ನು ನಗದಾಗಿ ಪಾವತಿಸಿ ತರಬೇತಿ ಸಂಸ್ಥೆಯಲ್ಲಿ ಪಡೆಯಬಹುದು. ಅಂಚೆ ಮೂಲಕ ಪಡೆಯಲು ಇಚ್ಚಿಸುವರು ರೂ.125 ಗಳ ಡಿ.ಡಿ ಮೂಲಕ ಪಾವತಿಸಿ ಪಡೆಯಬಹುದಾಗಿದೆ.

ತರಬೇತಿಗೆ ಅರ್ಜಿಯನ್ನು ಜುಲೈ ತಿಂಗಳ ಒಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಆಯಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!