ವಿದ್ಯಾರ್ಥಿಗಳಲ್ಲಿ ಕೌಶಲ್ಯವನ್ನು ಹೆಚ್ಚಿಸಲು ಬಿಸಿಐಸಿ-ಎಸ್‌ಡಿಎಂ ನೋಡಲ್‌ ಸೆಂಟರ್‌ಗಳು ಸಹಕಾರಿ: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಉದ್ಯೋಗಕ್ಕೆ ಹಾಗೂ ಸ್ವಯಂ ಉದ್ಯಮ ಪ್ರಾರಂಭಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಬೆಂಗಳೂರು ಛೇಂಬರ್ಸ್‌ ಆಫ್‌ ಇಂಡಸ್ಟ್ರಿ ಅಂಡ್‌ ಕಾಮರ್ಸ್‌ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಜಂಟಿಯಾಗಿ ಮೈಸೂರು ಮತ್ತು ಧಾರವಾಡದಲ್ಲಿ ಪ್ರಾರಂಭಿಸುತ್ತಿರುವ ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಇನ್‌ ಮ್ಯಾನೇಜ್‌ಮೆಂಟ್ ಬಹಳ ಸಹಕಾರಿ ಆಗಲಿವೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.

ಇಂದು ಬೆಂಗಳೂರಿನಲ್ಲಿ ಮೈಸೂರು ಮತ್ತು ಧಾರವಾಡದ ನೂತನ ಬಿಸಿಐಸಿ-ಎಸ್‌ಡಿಎಂ ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಇನ್‌ ಮ್ಯಾನೇಜ್‌ಮೆಂಟ್‌ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಇಂಡಸ್ಟ್ರಿಯ ಅಗತ್ಯಕ್ಕೆ ತಕ್ಕಂತಹ ಕೌಶಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಇಂದು ಉದ್ಘಾಟಿಸಲಾಗಿರುವ ಬಿಸಿಐಸಿ-ಎಸ್‌ಡಿಎಂ ನೋಡಲ್‌ ಸೆಂಟರ್‌ ಗಳು ಬಹಳ ಪರಿಣಾಮಕಾರಿಯಾಗಲಿವೆ. ಈ ಎಕ್ಸಲೆನ್ಸ್‌ ಸೆಂಟರ್‌ಗಳ ಮೂಲಕ ವಿದ್ಯಾರ್ಥಿಗಳು ಉದ್ಯೋಗಕ್ಕೆ ಸೇರುವ ಮುನ್ನವೇ ಉದ್ಯೋಗದ ಅನುಭವ ಮತ್ತು ಮಾಹಿತಿಯನ್ನು ಪಡೆದುಕೊಳ್ಳಲಿದ್ದಾರೆ.

ಬೆಂಗಳೂರು ಛೇಂಬರ್ಸ್‌ ಆಫ್‌ ಕಾಮರ್ಸ್‌ ನ ಅನುಭವಿ ಉದ್ಯಮಿಗಳು ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ದಿ, ಹೊಸ ಸಂಶೋಧನೆ ಹಾಗೂ ಸ್ವಂತ ಉದ್ಯಮವನ್ನು ಬೆಳೆಸುವ ತರಬೇತಿಯನ್ನು ನೀಡಲಿರುವುದು ಸಂತಸದ ವಿಷಯವಾಗಿದೆ. ಇಂತಹ ಪ್ರಯತ್ನವನ್ನು ರಾಜ್ಯದ ಇತರೆ ಭಾಗಗಳಿಗೂ ವಿಸ್ತರಿಸಲು ಎರಡೂ ಸಂಸ್ಥೆಗಳು ಮುಂದಾಗಲಿ ಎಂದು ಹೇಳಿದರು. 

ಬೆಂಗಳೂರು ಛೇಂಬರ್ಸ್‌ ಆಫ್‌ ಇಂಡಸ್ಟ್ರಿ ಅಂಡ್‌ ಕಾಮರ್ಸ್‌ ಕರೊನಾ ಸಾಂಕ್ರಾಮಿಕ ರೋಗ ಹೆಚ್ಚಾಗಿದ್ದಾಗ ರಾಜ್ಯ ಸರಕಾರದ ಜೊತೆಯಲ್ಲಿ ಕೈಜೋಡಿಸಿ ಹಲವಾರು ಕೊಡುಗೆಗಳನ್ನು ನೀಡಿತು. ಸಂಕಷ್ಟದ ಸಮಯದಲ್ಲಿ ಸರಕಾರ ಮತ್ತು ಉದ್ಯಮಿಗಳ ಮಧ್ಯೆ ಸೇತುವೆಯಾಗಿ ಕಾರ್ಯನಿರ್ವಹಿಸಿದ ಬಿಸಿಐಸಿ ಅವರ ಕಾರ್ಯ ಶ್ಲಾಘನೀಯ. ರಾಜ್ಯ ದೇಶದ ಪ್ರಮುಖ ಬಂಡವಾಳ ಹೂಡಿಕೆಯ ತಾಣವಾಗಿ ಹೊರಹೊಮ್ಮಿದೆ. ಇದನ್ನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಬೆಂಗಳೂರು ಛೇಂಬರ್ಸ್‌ ಆಫ್‌ ಇಂಡಸ್ಟ್ರಿ ಅಂಡ್‌ ಕಾಮರ್ಸ್‌ನ ಅಧ್ಯಕ್ಷರಾದ ಟಿ.ಆರ್‌ ಪರಶುರಾಮನ್‌, ಹಿರಿಯ ಉಪಾಧ್ಯಕ್ಷರಾದ ಕೆ.ಆರ್‌ ಶೇಖರ್‌, ಉಪಾಧ್ಯಕ್ಷರಾದ ಡಾ ರವೀಂದ್ರನ್‌, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್ಸಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ಮೈಸೂರಿನ ನಿರ್ದೇಶಕ ಡಾ.ಎನ್‌.ಆರ್‌.ಪರಶುರಾಮನ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

TVK ವಿಜಯ್ ಸರಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

TVK ವಿಜಯ್ ಸರಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿಸಿಎಂ

"TVK ವಿಜಯ್ ಅವರಿಗೆ ಸರ್ಕಾರ ರಚನೆ ಮಾಡಿ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ತಮಿಳುನಾಡಿನ ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರವಿಲ್ಲ. ರಾಜ್ಯಪಾಲರ ನಡೆ ಸರಿಯಲ್ಲ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಹೇಳಿದರು.

[ccc_my_favorite_select_button post_id="121880"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]