ವಿದಿಶಾ: ಬಾವಿಗೆ ಬಿದ್ದ 8 ವರ್ಷದ ಬಾಲಕಿಯನ್ನು ರಕ್ಷಿಸಲು ನಡೆಸಲಾಗುತ್ತಿದ್ದ ರಕ್ಷಣಾ ಕಾರ್ಯಾಚರಣೆ ನೋಡಲು ತೆರಳಿದ್ದ ವೇಳೆ ಧಾರಾಕಾರ ಮಳೆಗೆ ಮಣ್ಣು ಕುಸಿದು ಬಿದ್ದು ಸುಮಾರು 40 ಮಂದಿ ಬಾವಿಗೆ ಬಿದ್ದಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ, 19 ಮಂದಿಯನ್ನು ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ.
ಮಧ್ಯ ಪ್ರದೇಶದ ವಿದಿಶಾ ವಿದಿಶಾ ಜಿಲ್ಲೆಯ ಗಂಜ್ ಬಸೊಡ ಎಂಬಲ್ಲಿ ಗುರುವಾರ ಸಂಜೆ ದುರ್ಘಟನೆ ನಡೆದಿದ್ದು, ಧಾರಾಕಾರ ಮಳೆಗೆ ಕಾರ್ಯಾಚರಣೆಗೆ ಅಡ್ಡಿಯನ್ನುಂಟುಮಾಡುತ್ತಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿಗಳು ಮೃತಪಟ್ಟವರಿಗೆ 5 ಲಕ್ಷ, ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ.
ರಕ್ಷಣಾ ಕಾರ್ಯ ಮುಂದುವರಿದಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿರಂತರವಾಗಿ ಗಮನಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಬಾವಿಯ ಪಕ್ಕ ಆಟವಾಡುತ್ತಿದ್ದ ಬಾಲಕಿ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಳು, ಕೂಡಲೇ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಲುಪಿಸಿದರು.
ಗುರುವಾರ ಸಂಜೆ ರಕ್ಷಣಾ ಕಾರ್ಯ ನಡೆಯುತ್ತಿದ್ದ ವೇಳೆ ಅದನ್ನು ವೀಕ್ಷಿಸಲು ಸೇರಿದ್ದ ಜನರು ದಿಢೀರನೆ ಮಣ್ಣು ಕುಸಿದು ಬಿದ್ದು ಬಾವಿಗೆ ಬಿದ್ದಿದ್ದಾರೆ. ಜನರು ಬಾಲಕಿಯನ್ನು ರಕ್ಷಿಸಲು ನೋಡುತ್ತಿದ್ದ ವೇಳೆ ಬಾವಿಯ ಗೋಡೆ ಕುಸಿದು ಬಿದ್ದಿದ್ದಾರೆ ಎಂದು ಭೋಪಾಲ್ ವಿಭಾಗೀಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸಾಯಿ ಮನೋಹರ್ ತಿಳಿಸಿದ್ದಾರೆ.
ಕಳೆದ ಮಧ್ಯರಾತ್ರಿ 23 ಮಂದಿಯನ್ನು ರಕ್ಷಿಸಿ 13 ಮಂದಿಯನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದಿಶಾ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮಧ್ಯ ಪ್ರದೇಶ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಕೈಲಾಶ್ ಸಾರಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
ಬಾಲಕಿ ಇನ್ನೂ ಬಾವಿಯೊಳಗಿದ್ದು ಬಾವಿಯ ಗೋಡೆ ಕುಸಿದಾಗ ಆಕೆಗೂ ಗಾಯವಾಗಿತ್ತೇ ಎಂದು ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. (ಪೊಟೋ ಕೃಪೆ ANI)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..