
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಕಂದವಾರ ಕೆರೆ ಬಳಿ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ರೂ 8.10 ಕೋಟಿ ವೆಚ್ಚದಲ್ಲಿ ಕೆ.ಆರ್.ಎಸ್ ನ ಬೃಂದಾವನ ಮಾದರಿಯಲ್ಲಿಯೇ ಪರಿಸರ ಸ್ನೇಹಿ ಎಕೋ ಥೀಮ್ ಪಾರ್ಕ್ ನ್ನು ಸದ್ಯದಲ್ಲೇ ನಿರ್ಮಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಗೋಪಾಲಕೃಷ್ಣ ಅಮಾನಿಕೆರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ಎಚ್ ಎನ್ ವ್ಯಾಲಿ ನೀರಿನಿಂದ ಗೋಪಾಲಕೃಷ್ಣ ಅಮಾನಿಕರೆ ಭಾಗಶಹ: ತುಂಬಿದ್ದು ಜಿಲ್ಲಾಡಳಿತ ಭವನಕ್ಕೆ ಬಹಳ ಹತ್ತಿರವಿರುವುದರಿಂದ ಈ ಕೆರೆ ಅತಿ ಸುಂದರವಾಗಿ ಕಾಣುತ್ತದೆ. ಹೀಗಾಗಿ ಈ ಕೆರೆಯನ್ನು ಪ್ರವಾಸೋದ್ಯಮ ಕೇಂದ್ರವಾಗಿ ಪರಿವರ್ತಿಸಿದರೆ ಹೆಚ್ಚಿನ ಅನುಕೂಲವಾಗಲಿದೆ. ಅಲ್ಲದೇ ನಗರದ ಸೌಂದರ್ಯ ಹೆಚ್ಚಲು ಕಾರಣವಾಗಲಿದೆ ಈ ನಿಟ್ಟಿನಲ್ಲಿ ಕೆರೆಯ ಅಂದ ಹೆಚ್ಚಿಸಲು ಏನೇನು ಮಾಡಬಹುದು ಎಂಬುದರ ಬಗ್ಗೆ ಚರ್ಚೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಡಾ,ಕೆ,ಸುಧಾಕರ್ ಅವರ ಅಶಯದಂತೆ ಜಿಲ್ಲೇಯಲ್ಲಿ ಪ್ರಾವಾಸೊದ್ಯಮ ಕ್ಷೇತ್ರವನ್ನು ಅಭಿವೃದ್ಧಿ ಗೋಳಿಸಲು ಸರ್ಕಾರ ಒಲವು ತೊರಿದ್ದು,ಕಂದವಾರ ಕೆರೆ ಬಳಿ ಪರಿಸರ ಸ್ನೇಹಿ ಎಕೋ ಥೀಮ್ ಪಾರ್ಕ್ ನ್ನು ನಿರ್ಮಿಸಲು ಅನುಮತಿ ನೀಡಿದೆ.
ಈ ಸಂಬಂಧ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗಾಗಲೇ ಆರ್ಥಿಕ ಬಿಡ್ನ್ನು ಸಹ ತೆರೆಯಲಾಗಿದೆ. ಪರಿಸರ ಸ್ನೇಹಿ ಈ ಉದ್ಯಾನವನ ಪ್ರವಾಸಿಗರ ಮನಸೆಳೆಯುವ ಹಲವು ವೈಶಿಷ್ಟ್ಯಗಳನ್ನೊಳಗೊಂಡ ವಿಶಿಷ್ಟ ಮಾದರಿಯ ಪಾರ್ಕ್ ಮೈತಳೆಯಲಿದೆ. ( ಕಂದವಾರ ಎಕೋ ಥೀಮ್ ಪಾರ್ಕ್). ಈ ಉದ್ಯಾನವನದಲ್ಲಿ ಸಂಗೀತಕಾರಂಜಿ, ಸರಳ ಜಿಮ್, ಮಕ್ಕಳ ಆಟದ ಮೈದಾನ, ಹಿರಿಯ ನಾಗರಿಕರ ವಿಶ್ರಾಂತಿ ಧಾಮ, , ಬೋಟಿಂಗ್, ಕಲಾಗ್ರಾಮದ ಮಳಿಗೆಗಳು, ಪಾದಾಚಾರಿ ಸೇತುವೆ, ಪಾರ್ಕಿಂಗ್ ವ್ಯವಸ್ಥೆ , ವನೌಷಧಿ ಸಸ್ಯಗಳ ಹರ್ಬಲ್ ಪ್ಲಾಂಟೇಶನ್ ಇತ್ಯಾದಿ ವಿಶೇಷ ಆಕರ್ಷಣೆಯೊಂದಿಗೆ ಪ್ರವಾಸಿಗರಿಗೆ ಮುದ ನೀಡಲಿದೆ. ಅತಿ ಶೀಘ್ರದಲ್ಲೇ ಈ ಉದ್ಯಾನವನದ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಗುದ್ದಲಿಪೂಜೆ ನೆರವೇರಿಸಲಿದ್ದಾರೆ ಎಂದರು.
ಎಚ್ ಎನ್ ವ್ಯಾಲಿ ಮೂಲಕ ಜಿಲ್ಲೆಯ ಕೆರೆಗಳ ಅಂತರ್ಜಲ ಹೆಚ್ಚಿಸಲು ಕೆರೆಗಳನ್ನು ಸಂಸ್ಕರಿತ ನೀರಿನಿಂದ ತುಂಬಿಸುವ ಯೋಜನೆಯಡಿ 44 ಕೆರೆಗಳನ್ನು ಆಯ್ಕೆ ಮಾಡಿದ್ದು ಈ ಪೈಕಿ ಸಣ್ಣ ನೀರಾವರಿಯ ಇಲಾಖೆ ವ್ಯಾಪ್ತಿಯಡಿ 32 ಕೆರೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಅದರಲ್ಲಿ ಈವರೆಗೆ 17 ಕೆರೆಗಳಿಗೆ ಶೇ 30ರಷ್ಟು ನೀರು ಹರಿಸಿದ್ದು,6 ಕೆರೆಗಳಿಗೆ ಶೇ.50ರಷ್ಟು ಹಾಗೂ 7 ಕೆರೆಗಳಿಗೆ ಶೇ 51ರಿಂದ 99 ರಷ್ಟು ನೀರನ್ನು ತುಂಬಿಸಲಾಗಿದೆ. 2 ಕೆರೆಗಳನ್ನು ತುಂಬಿಸಬೇಕಾಗಿದೆ.ಇದಲ್ಲದೆ ಈ ಯೊಜನೆಯಡಿ ಜಿಲ್ಲಾಪಂಚಾಯಿತಿ ವ್ಯಾಪ್ತಿಯ 12 ಕೆರೆಗಳನ್ನು ಆಯ್ಕೆ ಮಾಡಿ ಅವುಗಳಲ್ಲಿ 6 ಕೆರಗಳಿಗೆ ಶೆ.30ರಷ್ಟು , ಶೇ99ರಷ್ಟು 5 ಕೆರೆಗಳನ್ನು ತುಂಬಿಸಲಾಗಿದೆ. ಒಂದು ಕೆರೆಯನ್ನು ತುಂಬಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಡಾ.ಭಾಸ್ಕರ್ ಹಾಗೂ ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ನರೇಂದ್ರಬಾಬು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..