ಫಸಲ್ ಭೀಮಾ ಯೋಜನೆಗೆ ದೊಡ್ಡಬಳ್ಳಾಪುರದ ಕೃಷಿ ಅಧಿಕಾರಿಗಳ‌ ತಾತ್ಸಾರ..? / ರೈತರಿಗಿಲ್ಲ ಯೋಜನೆಯ ಮಾಹಿತಿ..!

ದೊಡ್ಡಬಳ್ಳಾಪುರ: ಬೆಳೆ ನಷ್ಟ, ಬೆಳೆ ವಿಫಲಗೊಂಡ ಸಂದರ್ಭದಲ್ಲಿ ನಷ್ಟ ಹೊಂದಿದ ರೈತರ ಕೈಹಿಡಿಯಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಕೇಂದ್ರ ಸರ್ಕಾರದ ಸಹಭಾಗೀತ್ವದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಆದರೆ ಈ ವಿಮೆ ಮಾಡಿಸಲು ತಾಲೂಕಿನಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ರೈತರಿಗೆ ಸಮರ್ಪಕ ಮಾಹಿತಿ‌ ನೀಡುತ್ತಿಲ್ಲ ಎಂಬ ಆರೋಪ ವ್ಯಾಪಕವಾಗಿ ಕೇಳಿ ಬಂದಿದೆ.

ಬೆಳೆ ವಿಮೆ ಮಾಡಿಸಲು ಸಾಲ ಪಡೆದ ರೈತರಿಗೆ ಬ್ಯಾಂಕ್ ಗಳಲ್ಲಿ ಬ್ಯಾಂಕ್ ಸಿಬ್ಬಂದಿಗಳು ಸ್ವಯಂ ವಿಮೆ ಮಾಡುತ್ತಾರೆ.ಆದರೆ ಸಾಲ ಪಡೆಯದ ರೈತರು ಖಾಸಗಿಯಾಗಿ ಸಿಎಸ್ಸಿ ಕೇಂದ್ರಗಳಲ್ಲಿ ಮಾಡಿಸಬೇಕಿದೆ. ಆದರೆ ಕೃಷಿ ಇಲಾಖೆ, ವಿಮೆ ಕಂಪನಿಗಳು ಯೋಜನೆಯ ಕುರಿತಾದ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಇನ್ನೂ ಈ ಕುರಿತು ಸಿಎಸ್ಸಿ ಕೇಂದ್ರಗಳಲ್ಲಿ ವಿಚಾರಿಸಿದರೆ ಆನ್ಲೈನ್ ಮೂಲಕ ತರಬೇತಿ ಹೊರತುಪಡಿಸಿ ಕೃಷಿ ಇಲಾಖೆ ಹಾಗೂ ವಿಮೆ ಕಂಪನಿ ಮಾಹಿತಿ ಅಥವಾ ಅರ್ಜಿ ನೀಡಿಲ್ಲ. ಬಹುತೇಕ ರೈತರು ವಿಮೆ ಆಸಕ್ತಿ ಹೊಂದಿದ್ದಾರೆ. ಆದರೆ ಅರ್ಜಿ ಇಲ್ಲದೆ ವಿಮೆ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಾರೆ.

ರೈತರ ಬೆಳೆಗಳ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಬೆಳೆ ವಿಮೆಯ ಗರಿಷ್ಠ ಲಾಭ ರೈತರಿಗೆ ತಲುಪುವಂತೆ ಕೇಂದ್ರ ಸರ್ಕಾರವು 2021-22ರ ಆರ್ಥಿಕ ವರ್ಷಕ್ಕೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (ಪಿಎಂಎಫ್‌ಬಿವೈ) ಗೆ 16,000 ಕೋಟಿ ರೂ. ನೀಡಿದೆ. ಇದು ಹಿಂದಿನ 2020-21ರ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಸುಮಾರು 305 ಕೋಟಿ ರೂ.ಗಳ ಬಜೆಟ್ ಹೆಚ್ಚಳವಾಗಿದೆ. ಇದು ದೇಶದ ಕೃಷಿ ಕ್ಷೇತ್ರದ ಬೆಳವಣಿಗೆಗೆ ಸರ್ಕಾರದ ಬದ್ಧತೆ ಪುನರುಚ್ಚರಿಸುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸಚಿವಾಲಯದ ಪ್ರಕಾರ, ಐದು ವರ್ಷಗಳ ಹಿಂದೆ ಜನವರಿ 13, 2016 ರಂದು ಭಾರತ ಸರ್ಕಾರ ಈ ಪ್ರಮುಖ ಬೆಳೆ ವಿಮಾ ಯೋಜನೆಗೆ ಅನುಮೋದನೆ ನೀಡಿತು. ರೈತರಿಗೆ ದೇಶಾದ್ಯಂತ ಕಡಿಮೆ ಏಕರೂಪದ ಪ್ರೀಮಿಯಂನಲ್ಲಿ ಸಮಗ್ರ ಪರಿಹಾರವನ್ನು ಒದಗಿಸುವ ಮೈಲಿಗಲ್ಲು ಉಪಕ್ರಮವಾಗಿ ಈ ಯೋಜನೆಯನ್ನು ರೂಪಿಸಲಾಯಿತು. ಇಂದು, ಪಿಎಂಎಫ್‌ಬಿವೈ ಜಾಗತಿಕವಾಗಿ ರೈತರ ಭಾಗವಹಿಸುವಿಕೆಯ ದೃಷ್ಟಿಯಿಂದ ಅತಿದೊಡ್ಡ ಬೆಳೆ ವಿಮಾ ಯೋಜನೆಯಾಗಿದೆ ಮತ್ತು ಪ್ರೀಮಿಯಂ ವಿಷಯದಲ್ಲಿ 3 ನೇ ದೊಡ್ಡ ಯೋಜನೆಯಾಗಿದೆ. 5.5 ಕೋಟಿಗೂ ಹೆಚ್ಚು ರೈತ ಅರ್ಜಿಗಳನ್ನು ವರ್ಷದಿಂದ ವರ್ಷಕ್ಕೆ ಸ್ವೀಕರಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕಳೆದ 5 ವರ್ಷಗಳಲ್ಲಿ, ರೈತರು – ಕಲ್ಯಾಣ, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ರಚನಾತ್ಮಕ, ವ್ಯವಸ್ಥಾಪನಾ ಮತ್ತು ಇತರ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (ಪಿಎಂಎಫ್‌ಬಿವೈ) ಯೋಜನೆಯನ್ನು ಪುನರುಜ್ಜೀವನಗೊಳಿಸಲು ವ್ಯಾಪಕವಾಗಿ ಕೆಲಸ ಮಾಡುತ್ತಿದೆ. ಆದರೆ ಕೆಲ ಅಧಿಕಾರಿಗಳ ಬೇಜವಬ್ದಾರಿಯಿಂದ ಯೋಜನೆಯ ಲಾಭ ರೈತರಿಗೆ ದೊರಕದಾಗಿರುವುದು ವಿಪರ್ಯಾಸ.

ಅಧಿಕಾರಿಗಳ ವೈಫಲ್ಯ: ಕಾಳಜಿಹೀನ ಅಧಿಕಾರಿಗಳಿಂದಾಗಿ ರೈತರಿಗೆ ಯೋಜನೆಗಳು ತಲುಪುತ್ತಿಲ್ಲ. ಮಳೆ ತೀವ್ರವಾಗಿ ಸುರಿದು ಬೆಳೆ ನಷ್ಟವಾಗುತ್ತಿದೆ. ವಿಮೆ ಮಾಡಿಸಿದರೆ ರೈತನಿಗೆ ಅನುಕೂಲ. ಆದರೆ ಅಧಿಕಾರಿಗಳು ಮಾಹಿತಿ ನೋಡುತ್ತಿಲ್ಲ ಎಂದು ರೈತ ಸಂಘದ ಜಿಲ್ಲಾ ಯುವ ಘಟಕದ ಅಧ್ಯಕ್ಷ ವಸಂತ್ ಬೇಸರ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]