ಫಸಲ್ ಭೀಮಾ ಯೋಜನೆಗೆ ದೊಡ್ಡಬಳ್ಳಾಪುರದ ಕೃಷಿ ಅಧಿಕಾರಿಗಳ‌ ತಾತ್ಸಾರ..? / ರೈತರಿಗಿಲ್ಲ ಯೋಜನೆಯ ಮಾಹಿತಿ..!

ದೊಡ್ಡಬಳ್ಳಾಪುರ: ಬೆಳೆ ನಷ್ಟ, ಬೆಳೆ ವಿಫಲಗೊಂಡ ಸಂದರ್ಭದಲ್ಲಿ ನಷ್ಟ ಹೊಂದಿದ ರೈತರ ಕೈಹಿಡಿಯಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಕೇಂದ್ರ ಸರ್ಕಾರದ ಸಹಭಾಗೀತ್ವದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಆದರೆ ಈ ವಿಮೆ ಮಾಡಿಸಲು ತಾಲೂಕಿನಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ರೈತರಿಗೆ ಸಮರ್ಪಕ ಮಾಹಿತಿ‌ ನೀಡುತ್ತಿಲ್ಲ ಎಂಬ ಆರೋಪ ವ್ಯಾಪಕವಾಗಿ ಕೇಳಿ ಬಂದಿದೆ.

ಬೆಳೆ ವಿಮೆ ಮಾಡಿಸಲು ಸಾಲ ಪಡೆದ ರೈತರಿಗೆ ಬ್ಯಾಂಕ್ ಗಳಲ್ಲಿ ಬ್ಯಾಂಕ್ ಸಿಬ್ಬಂದಿಗಳು ಸ್ವಯಂ ವಿಮೆ ಮಾಡುತ್ತಾರೆ.ಆದರೆ ಸಾಲ ಪಡೆಯದ ರೈತರು ಖಾಸಗಿಯಾಗಿ ಸಿಎಸ್ಸಿ ಕೇಂದ್ರಗಳಲ್ಲಿ ಮಾಡಿಸಬೇಕಿದೆ. ಆದರೆ ಕೃಷಿ ಇಲಾಖೆ, ವಿಮೆ ಕಂಪನಿಗಳು ಯೋಜನೆಯ ಕುರಿತಾದ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಇನ್ನೂ ಈ ಕುರಿತು ಸಿಎಸ್ಸಿ ಕೇಂದ್ರಗಳಲ್ಲಿ ವಿಚಾರಿಸಿದರೆ ಆನ್ಲೈನ್ ಮೂಲಕ ತರಬೇತಿ ಹೊರತುಪಡಿಸಿ ಕೃಷಿ ಇಲಾಖೆ ಹಾಗೂ ವಿಮೆ ಕಂಪನಿ ಮಾಹಿತಿ ಅಥವಾ ಅರ್ಜಿ ನೀಡಿಲ್ಲ. ಬಹುತೇಕ ರೈತರು ವಿಮೆ ಆಸಕ್ತಿ ಹೊಂದಿದ್ದಾರೆ. ಆದರೆ ಅರ್ಜಿ ಇಲ್ಲದೆ ವಿಮೆ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಾರೆ.

ರೈತರ ಬೆಳೆಗಳ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಬೆಳೆ ವಿಮೆಯ ಗರಿಷ್ಠ ಲಾಭ ರೈತರಿಗೆ ತಲುಪುವಂತೆ ಕೇಂದ್ರ ಸರ್ಕಾರವು 2021-22ರ ಆರ್ಥಿಕ ವರ್ಷಕ್ಕೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (ಪಿಎಂಎಫ್‌ಬಿವೈ) ಗೆ 16,000 ಕೋಟಿ ರೂ. ನೀಡಿದೆ. ಇದು ಹಿಂದಿನ 2020-21ರ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಸುಮಾರು 305 ಕೋಟಿ ರೂ.ಗಳ ಬಜೆಟ್ ಹೆಚ್ಚಳವಾಗಿದೆ. ಇದು ದೇಶದ ಕೃಷಿ ಕ್ಷೇತ್ರದ ಬೆಳವಣಿಗೆಗೆ ಸರ್ಕಾರದ ಬದ್ಧತೆ ಪುನರುಚ್ಚರಿಸುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸಚಿವಾಲಯದ ಪ್ರಕಾರ, ಐದು ವರ್ಷಗಳ ಹಿಂದೆ ಜನವರಿ 13, 2016 ರಂದು ಭಾರತ ಸರ್ಕಾರ ಈ ಪ್ರಮುಖ ಬೆಳೆ ವಿಮಾ ಯೋಜನೆಗೆ ಅನುಮೋದನೆ ನೀಡಿತು. ರೈತರಿಗೆ ದೇಶಾದ್ಯಂತ ಕಡಿಮೆ ಏಕರೂಪದ ಪ್ರೀಮಿಯಂನಲ್ಲಿ ಸಮಗ್ರ ಪರಿಹಾರವನ್ನು ಒದಗಿಸುವ ಮೈಲಿಗಲ್ಲು ಉಪಕ್ರಮವಾಗಿ ಈ ಯೋಜನೆಯನ್ನು ರೂಪಿಸಲಾಯಿತು. ಇಂದು, ಪಿಎಂಎಫ್‌ಬಿವೈ ಜಾಗತಿಕವಾಗಿ ರೈತರ ಭಾಗವಹಿಸುವಿಕೆಯ ದೃಷ್ಟಿಯಿಂದ ಅತಿದೊಡ್ಡ ಬೆಳೆ ವಿಮಾ ಯೋಜನೆಯಾಗಿದೆ ಮತ್ತು ಪ್ರೀಮಿಯಂ ವಿಷಯದಲ್ಲಿ 3 ನೇ ದೊಡ್ಡ ಯೋಜನೆಯಾಗಿದೆ. 5.5 ಕೋಟಿಗೂ ಹೆಚ್ಚು ರೈತ ಅರ್ಜಿಗಳನ್ನು ವರ್ಷದಿಂದ ವರ್ಷಕ್ಕೆ ಸ್ವೀಕರಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕಳೆದ 5 ವರ್ಷಗಳಲ್ಲಿ, ರೈತರು – ಕಲ್ಯಾಣ, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ರಚನಾತ್ಮಕ, ವ್ಯವಸ್ಥಾಪನಾ ಮತ್ತು ಇತರ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (ಪಿಎಂಎಫ್‌ಬಿವೈ) ಯೋಜನೆಯನ್ನು ಪುನರುಜ್ಜೀವನಗೊಳಿಸಲು ವ್ಯಾಪಕವಾಗಿ ಕೆಲಸ ಮಾಡುತ್ತಿದೆ. ಆದರೆ ಕೆಲ ಅಧಿಕಾರಿಗಳ ಬೇಜವಬ್ದಾರಿಯಿಂದ ಯೋಜನೆಯ ಲಾಭ ರೈತರಿಗೆ ದೊರಕದಾಗಿರುವುದು ವಿಪರ್ಯಾಸ.

ಅಧಿಕಾರಿಗಳ ವೈಫಲ್ಯ: ಕಾಳಜಿಹೀನ ಅಧಿಕಾರಿಗಳಿಂದಾಗಿ ರೈತರಿಗೆ ಯೋಜನೆಗಳು ತಲುಪುತ್ತಿಲ್ಲ. ಮಳೆ ತೀವ್ರವಾಗಿ ಸುರಿದು ಬೆಳೆ ನಷ್ಟವಾಗುತ್ತಿದೆ. ವಿಮೆ ಮಾಡಿಸಿದರೆ ರೈತನಿಗೆ ಅನುಕೂಲ. ಆದರೆ ಅಧಿಕಾರಿಗಳು ಮಾಹಿತಿ ನೋಡುತ್ತಿಲ್ಲ ಎಂದು ರೈತ ಸಂಘದ ಜಿಲ್ಲಾ ಯುವ ಘಟಕದ ಅಧ್ಯಕ್ಷ ವಸಂತ್ ಬೇಸರ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!