ಫಸಲ್ ಭೀಮಾ ಯೋಜನೆಗೆ ದೊಡ್ಡಬಳ್ಳಾಪುರದ ಕೃಷಿ ಅಧಿಕಾರಿಗಳ‌ ತಾತ್ಸಾರ..? / ರೈತರಿಗಿಲ್ಲ ಯೋಜನೆಯ ಮಾಹಿತಿ..!

ದೊಡ್ಡಬಳ್ಳಾಪುರ: ಬೆಳೆ ನಷ್ಟ, ಬೆಳೆ ವಿಫಲಗೊಂಡ ಸಂದರ್ಭದಲ್ಲಿ ನಷ್ಟ ಹೊಂದಿದ ರೈತರ ಕೈಹಿಡಿಯಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಕೇಂದ್ರ ಸರ್ಕಾರದ ಸಹಭಾಗೀತ್ವದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಆದರೆ ಈ ವಿಮೆ ಮಾಡಿಸಲು ತಾಲೂಕಿನಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ರೈತರಿಗೆ ಸಮರ್ಪಕ ಮಾಹಿತಿ‌ ನೀಡುತ್ತಿಲ್ಲ ಎಂಬ ಆರೋಪ ವ್ಯಾಪಕವಾಗಿ ಕೇಳಿ ಬಂದಿದೆ.

ಬೆಳೆ ವಿಮೆ ಮಾಡಿಸಲು ಸಾಲ ಪಡೆದ ರೈತರಿಗೆ ಬ್ಯಾಂಕ್ ಗಳಲ್ಲಿ ಬ್ಯಾಂಕ್ ಸಿಬ್ಬಂದಿಗಳು ಸ್ವಯಂ ವಿಮೆ ಮಾಡುತ್ತಾರೆ.ಆದರೆ ಸಾಲ ಪಡೆಯದ ರೈತರು ಖಾಸಗಿಯಾಗಿ ಸಿಎಸ್ಸಿ ಕೇಂದ್ರಗಳಲ್ಲಿ ಮಾಡಿಸಬೇಕಿದೆ. ಆದರೆ ಕೃಷಿ ಇಲಾಖೆ, ವಿಮೆ ಕಂಪನಿಗಳು ಯೋಜನೆಯ ಕುರಿತಾದ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಇನ್ನೂ ಈ ಕುರಿತು ಸಿಎಸ್ಸಿ ಕೇಂದ್ರಗಳಲ್ಲಿ ವಿಚಾರಿಸಿದರೆ ಆನ್ಲೈನ್ ಮೂಲಕ ತರಬೇತಿ ಹೊರತುಪಡಿಸಿ ಕೃಷಿ ಇಲಾಖೆ ಹಾಗೂ ವಿಮೆ ಕಂಪನಿ ಮಾಹಿತಿ ಅಥವಾ ಅರ್ಜಿ ನೀಡಿಲ್ಲ. ಬಹುತೇಕ ರೈತರು ವಿಮೆ ಆಸಕ್ತಿ ಹೊಂದಿದ್ದಾರೆ. ಆದರೆ ಅರ್ಜಿ ಇಲ್ಲದೆ ವಿಮೆ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಾರೆ.

ರೈತರ ಬೆಳೆಗಳ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಬೆಳೆ ವಿಮೆಯ ಗರಿಷ್ಠ ಲಾಭ ರೈತರಿಗೆ ತಲುಪುವಂತೆ ಕೇಂದ್ರ ಸರ್ಕಾರವು 2021-22ರ ಆರ್ಥಿಕ ವರ್ಷಕ್ಕೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (ಪಿಎಂಎಫ್‌ಬಿವೈ) ಗೆ 16,000 ಕೋಟಿ ರೂ. ನೀಡಿದೆ. ಇದು ಹಿಂದಿನ 2020-21ರ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಸುಮಾರು 305 ಕೋಟಿ ರೂ.ಗಳ ಬಜೆಟ್ ಹೆಚ್ಚಳವಾಗಿದೆ. ಇದು ದೇಶದ ಕೃಷಿ ಕ್ಷೇತ್ರದ ಬೆಳವಣಿಗೆಗೆ ಸರ್ಕಾರದ ಬದ್ಧತೆ ಪುನರುಚ್ಚರಿಸುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸಚಿವಾಲಯದ ಪ್ರಕಾರ, ಐದು ವರ್ಷಗಳ ಹಿಂದೆ ಜನವರಿ 13, 2016 ರಂದು ಭಾರತ ಸರ್ಕಾರ ಈ ಪ್ರಮುಖ ಬೆಳೆ ವಿಮಾ ಯೋಜನೆಗೆ ಅನುಮೋದನೆ ನೀಡಿತು. ರೈತರಿಗೆ ದೇಶಾದ್ಯಂತ ಕಡಿಮೆ ಏಕರೂಪದ ಪ್ರೀಮಿಯಂನಲ್ಲಿ ಸಮಗ್ರ ಪರಿಹಾರವನ್ನು ಒದಗಿಸುವ ಮೈಲಿಗಲ್ಲು ಉಪಕ್ರಮವಾಗಿ ಈ ಯೋಜನೆಯನ್ನು ರೂಪಿಸಲಾಯಿತು. ಇಂದು, ಪಿಎಂಎಫ್‌ಬಿವೈ ಜಾಗತಿಕವಾಗಿ ರೈತರ ಭಾಗವಹಿಸುವಿಕೆಯ ದೃಷ್ಟಿಯಿಂದ ಅತಿದೊಡ್ಡ ಬೆಳೆ ವಿಮಾ ಯೋಜನೆಯಾಗಿದೆ ಮತ್ತು ಪ್ರೀಮಿಯಂ ವಿಷಯದಲ್ಲಿ 3 ನೇ ದೊಡ್ಡ ಯೋಜನೆಯಾಗಿದೆ. 5.5 ಕೋಟಿಗೂ ಹೆಚ್ಚು ರೈತ ಅರ್ಜಿಗಳನ್ನು ವರ್ಷದಿಂದ ವರ್ಷಕ್ಕೆ ಸ್ವೀಕರಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕಳೆದ 5 ವರ್ಷಗಳಲ್ಲಿ, ರೈತರು – ಕಲ್ಯಾಣ, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ರಚನಾತ್ಮಕ, ವ್ಯವಸ್ಥಾಪನಾ ಮತ್ತು ಇತರ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (ಪಿಎಂಎಫ್‌ಬಿವೈ) ಯೋಜನೆಯನ್ನು ಪುನರುಜ್ಜೀವನಗೊಳಿಸಲು ವ್ಯಾಪಕವಾಗಿ ಕೆಲಸ ಮಾಡುತ್ತಿದೆ. ಆದರೆ ಕೆಲ ಅಧಿಕಾರಿಗಳ ಬೇಜವಬ್ದಾರಿಯಿಂದ ಯೋಜನೆಯ ಲಾಭ ರೈತರಿಗೆ ದೊರಕದಾಗಿರುವುದು ವಿಪರ್ಯಾಸ.

ಅಧಿಕಾರಿಗಳ ವೈಫಲ್ಯ: ಕಾಳಜಿಹೀನ ಅಧಿಕಾರಿಗಳಿಂದಾಗಿ ರೈತರಿಗೆ ಯೋಜನೆಗಳು ತಲುಪುತ್ತಿಲ್ಲ. ಮಳೆ ತೀವ್ರವಾಗಿ ಸುರಿದು ಬೆಳೆ ನಷ್ಟವಾಗುತ್ತಿದೆ. ವಿಮೆ ಮಾಡಿಸಿದರೆ ರೈತನಿಗೆ ಅನುಕೂಲ. ಆದರೆ ಅಧಿಕಾರಿಗಳು ಮಾಹಿತಿ ನೋಡುತ್ತಿಲ್ಲ ಎಂದು ರೈತ ಸಂಘದ ಜಿಲ್ಲಾ ಯುವ ಘಟಕದ ಅಧ್ಯಕ್ಷ ವಸಂತ್ ಬೇಸರ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜೆಡಿಎಸ್ (JDS) ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ (ಜೂನ್‌ 16) ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ಆರಂಭ..

[ccc_my_favorite_select_button post_id="109279"]
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ ಪತ್ರ

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ

IPL ಕಪ್ ಗೆದ್ದ RCB ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಅನಾಹುತ ತಡೆಯಬಹುದಾದ ದುರಂತವಾಗಿತ್ತು ತುರ್ತು ಮಧ್ಯಸ್ಥಿಕೆ

[ccc_my_favorite_select_button post_id="109057"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

ಹೆತ್ತ ತಾಯಿ ಬದುಕಿರುವಾಗಲೇ ಸುಳ್ಳು ಅರ್ಜಿ ನೀಡಿ ಮರಣ ಪ್ರಮಾಣಪತ್ರ (Death certificate) ಪಡೆದು ಆಸ್ತಿ ಕಬಳಿಸಲು ಪ್ರಯತ್ನಿಸಿದ ಪುತ್ರನ ಪೊಲೀಸರು ಬಂಧಿಸಿರುವ ಘಟನೆ

[ccc_my_favorite_select_button post_id="109202"]
ದೊಡ್ಡಬಳ್ಳಾಪುರ: ಕಾರು ಅಪಘಾತ.. ಮೂವರ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಕಾರು ಅಪಘಾತ.. ಮೂವರ ಸ್ಥಿತಿ ಗಂಭೀರ

ರಸ್ತೆ ಬದಿ ಸಾಗುತ್ತಿದ್ದವರಿಗೆ ಡಿಕ್ಕಿ ಹೊಡೆದ ಕಾರು, ಚಾಲಕನ ನಿಯಂತ್ರಣ ತಪ್ಪಿ ಟ್ರಂಚಲ್ಲಿದ್ದ ಮರ ಬುಡಕ್ಕೆ ಡಿಕ್ಕಿ ಹೊಡೆದ ಅಪಘಾತದಲ್ಲಿ (Accident) ಮೂವರಿಗೆ

[ccc_my_favorite_select_button post_id="109270"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]