ಅರ್ಕಾವತಿ ನದಿ ಕಾಲುವೆ ಒತ್ತುವರಿ; ಅಕ್ರಮ ರೆಸಾರ್ಟ್ ನಿರ್ಮಾಣದ ಆರೋಪ: ಕ್ರಮ ಕೈಗೊಳ್ಳುವಂತೆ ಯುವ ಜನತಾದಳ ದೂರು

ಬೆಂ.ಗ್ರಾ.ಜಿಲ್ಲೆ: ಅರ್ಕಾವತಿ ನದಿ ಕಾಲುವೆ (ಹಳ್ಳ) ಒತ್ತುವರಿ ಹಾಗೂ ಚನ್ನಾಪುರ ಗ್ರಾಮದ ಸರ್ವೆ ನಂಬರ್: 30 ಮತ್ತು 78 ರಲ್ಲಿನ ಸರ್ಕಾರಿ ಹಳ್ಳ (ಸರ್ಕಾರಿ ಕಾಲುವ) ಗಳನ್ನು ಮುಚ್ಚಿ ಕೃಷಿ ಭೂಮಿ ಹಾಗೂ ಸರ್ಕಾರಿ ಫಡ (ಗೋಮಾಳ) ಜಮೀನಿನಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಿಸಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಯುವ ಜನತಾದಳದವತಿಯಿಂದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರಿಗೆ ದೂರು ನೀಡಲಾಗಿದೆ.

ಈ ಕುರಿತು ಮಾಹಿತಿ‌ ನೀಡಿದ ಸಾಮಾಜಿಕ ಹೋರಾಟಗಾರ ಜಿ.ಮಂಜೇಶ್, ದೊಡ್ಡಬಳ್ಳಾಪುರ ತಾಲ್ಲೂಕು, ತೂಬಗೆರೆ ಹೋಬಳಿಯ, ಚನ್ನಾಪುರ ಗ್ರಾಮದ ಸರ್ವೆ ನಂಬರ್ 30 ಮತ್ತು ಸರ್ವೆ ನಂಬರ್: 78ರಲ್ಲಿ AURAFOOTHILLS” ಎಂಬ ಹೆಸರಿನ ಅಕ್ರಮ ರೆಸಾರ್ಟ್ ಅನ್ನು ನಿರ್ಮಿಸಲಾಗಿದ್ದು, ಈ ರೆಸಾರ್ಟ್ ನಿರ್ಮಾಣದ ಸಂದರ್ಭದಲ್ಲಿ 30 ಮತ್ತು 78 ರಲ್ಲಿನ ಸರ್ಕಾರಿ ಹಳಗಳನ್ನು ಮುಚ್ಚಿ ಅದರ ಮೇಲೆ ಕಟ್ಟಡಗಳನ್ನು ನಿರ್ಮಿಸಲಾಗಿದೆ.

ಸರ್ವೆ ನಂಬರ್ 30 ಮತ್ತು 78 ರಲ್ಲಿ ಸರ್ಕಾರಿ ಹಳ್ಳ ಹಾದು ಹೋಗಿರುವುದು ಗ್ರಾಮ ನಕಾಶೆಯಲ್ಲಿ ಸ್ಪಷ್ಟವಾಗಿ ಕಂಡುಬರುತ್ತದೆ. ಹಾಗೂ ಆರ್ಕಾವತಿ ನದಿ ಕಾಲುವೆಯನ್ನು ಮುಚ್ಚಿ ಅದರ ಮೇಲೆ ರೆಸಾರ್ಟ್‌ನ್ನು ನಿರ್ಮಿಸಿ ಅಕ್ರಮವಾಗಿ ತಮ್ಮ‌ ರೆಸಾರ್ಟ್ ಗೆ ರಸ್ತೆ ನಿರ್ಮಿಸಿಕೊಂಡಿರುತ್ತಾರೆ.

ನದಿ ಕಾಲುವೆ ಹಾಗೂ ಸರ್ಕಾರಿ ಹಳ್ಳಗಳನ್ನು ಮುಚ್ಚಿರುವುದರಿಂದ ಗ್ರಾಮೀಣ ಭಾಗದ ನೀರಿನ ಮೂಲಗಳಾದ ಕೆರೆ, ಕುಂಟೆಗಳು ಬತ್ತು ಹೋಗಿವೆ. ಅಲ್ಲದ ಗ್ರಾಮೀಣ ಹಸಿರು ಪರಿಸರದಲ್ಲಿ ಅನಧಿಕೃತವಾಗಿ ಚಟುವಟಿಕೆಗಳಿಂದಾಗಿ ಸುತ್ತಮುತ್ತಲಿನ ಪರಿಸರ ಮಾಲಿನ್ಯಗೊಳ್ಳುತ್ತಿದೆ.

ಹೀಗೆ ನೈಸರ್ಗಿಕವಾಗಿ ಹರಿಯುತ್ತಿರುವ ಅರ್ಕಾವತಿ ನದಿ ಕಾಲುವೆಯನ್ನು ಮುಚ್ಚಿ ರಸ್ತೆ ನಿರ್ಮಿಸಿಕೊಂಡಿರುವುದು, ಗ್ರಾಮದ ಸರ್ಕಾರಿ ಹಳ್ಳಗಳನ್ನು ಮುಚ್ಚಿರುವುದು, ಕೃಷಿ ಬಳಕೆಯ ಭೂಮಿಯನ್ನು ಭೂಪರಿವರ್ತನೆ ಮಾಡಿಸದೇ ವಾಣಿಜ್ಯ ಉದ್ದೇಶಿತ ಚಟುವಟಿಕೆಗಳಿಗೆ ಬಳಸುತ್ತಿರುವುದು, ಸರ್ಕಾರಿ ಗೋಮಾಳ ಭೂಮಿಯನ್ನು ಕಬಳಿಕೆ ಮಾಡಿಕೊಂಡು, ಗ್ರಾಮದ ಬಡ ದಲಿತ ರೈತರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು, ಹಾಗೂ ಸ್ವಚ್ಚವಾದ ನೈಸರ್ಗಿಕ ಪರಿಸರವನ್ನು ಮಾಲಿನ್ಯಗೊಳಿಸುತ್ತಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ಹಾಗಾಗಿ ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರಿ ಆಸ್ತಿ-ಪಾಸ್ತಿಗಳ ರಕ್ಷಣೆ, ಪರಿಸರ ಸಂರಕ್ಷಣೆ, ಹಾಗೂ ಸಾರ್ವಜನಿಕರ ಹಿತ ಕಾಪಾಡುವುದರ ಜೊತೆಗೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಅವರಿಗೂ ದೂರು ನೀಡಲಾಗಿದೆ ಎಂದವರು ತಿಳಿಸಿದ್ದಾರೆ.

ಈ ವೇಳೆ ಬೆಂಗಳೂರು ಮಹಾನಗರ ಯುವ ಜನತಾದಳದ ಅಧ್ಯಕ್ಷ ಎ.ಎಂ.ಪ್ರವೀಣ್ ಕುಮಾರ್, ಉಪಾಧ್ಯಕ್ಷ ಎಸ್.ಹರೀಶ್, ಮೆಳೇಕೋಟೆ ಗ್ರಾಮಪಂಚಾಯಿತಿ ಸದಸ್ಯ ಸಿ.ಪಿ.ಜಯಣ್ಣ, ಡಿ.ಎಸ್.ಎಸ್ ಹರ್ಷ‌ ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….. 

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!