ಬೆಂ.ಗ್ರಾ.ಜಿಲ್ಲೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವೀನ್ಯತೆ, ತಾರ್ಕಿಕ ಸಾಧನೆ (ಉದಾ: ಎರಡು ಅನುಕ್ರಮ ವರ್ಷಗಳಲ್ಲಿ ಗಣಿತ ಶಾಸ್ತ್ರದಲ್ಲಿ ಮೊದಲನೆ ಸ್ಥಾನ), ಕ್ರೀಡೆ, ಕಲೆ, ಸಾಂಸ್ಕೃತಿಕ ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಂದು ಕೇತ್ರದಿಂದ 2 ಮಕ್ಕಳನ್ನು ಜಿಲ್ಲಾ ಸಮಿತಿಯಿಂದ ಆಯ್ಕೆ ಮಾಡಿ, ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪತ್ರ ಹಾಗೂ ರೂ. 10,000/-ಗಳ ನಗದು ಬಹುಮಾನ ನೀಡಲಾಗುವುದು.
ಆಸಕ್ತರು ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿಗಳೊಂದಿಗೆ 2021ರ ಆಗಸ್ಟ್ 30 ರೊಳಗೆ ಸಲ್ಲಿಸುವುದು.
ಆಸಕ್ತರು ಅರ್ಜಿ ನಮೂನೆ, ಮಾನದಂಡಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ: 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ.: 080-29787445 ಹಾಗೂ ತಾಲ್ಲೂಕು ಶಿಶು ಅಭಿವೃಧ್ಧಿ ಯೋಜನಾಧಿಕಾರಿ ಕಚೇರಿ, ದೇವನಹಳ್ಳಿ ದೂ.ಸಂ.: 080-27682268, ದೊಡ್ಡಬಳ್ಳಾಪುರ ದೂ.ಸಂ.: 080-27625228, ಹೊಸಕೋಟೆ ದೂ.ಸಂ.: 080-27931493, ನೆಲಮಂಗಲ ದೂ.ಸಂ.: 080-27722177 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..