70 ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರದಿಂದ ಮನೆಯ ಮಗುವಿನಂತೆ ದೇಶದ ಆಳ್ವಿಕೆ: ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ದೇಶದಲ್ಲಿ ಯಾವುದೇ ಅಭಿವೃದ್ದಿ ಇಲ್ಲದಿದ್ದರೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದೇಶವನ್ನು ಸಾಲದ ಕೂಪಕ್ಕೆ ತಳ್ಳುತ್ತಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಆತಂಕ ವ್ಯಕ್ತಪಡಿಸಿದರು.

ಕರೊನಾ ಸೋಂಕನ್ನು ತಡೆಗಟ್ಟಲು ಘೋಷಿಸಲಾದ ಲಾಕ್‍ಡೌನ್ ಕಾರಣ ಸಂಕಷ್ಟಕ್ಕೆ ಒಳಗಾದ ಸವಿತಾ ಸಮಾಜದ ನಾದಸ್ವರ, ಡೋಲು ಕಲಾವಿದರಿಗೆ ಹಾಗೂ ಕ್ಷೌರಿಕ ಕಾರ್ಮಿಕರಿಗೆ ನಗರದ ಸವಿತ ಸಮಾಜ ಭವನದಲ್ಲಿ ದಿನಸಿ ಕಿಟ್ ವಿತರಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ನಂತರ ದೇಶದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ 70 ವರ್ಷಗಳ ಕಾಲ ಮನೆಯ ಮಗುವನ್ನು ಕಾಪಾಡಿದಂತೆ ದೇಶದಲ್ಲಿ ಆಳ್ವಿಕೆ ನಡೆಸಿದೆ. ಶಿಕ್ಷಣ ಕ್ಷೇತ್ರ, ನೀರಾವರಿ, ಕೈಗಾರಿಕೆ ಸ್ಥಾಪನೆ ಮಾಡಿ‌ ಉದ್ಯೋಗ್ಯ ಸೃಷ್ಟಿ ಮಾಡಿತ್ತು. ಆದರೀಗಾ ಎಲ್ಲವೂ ನಶಿಸಿ ಹೋಗುತ್ತಿದೆ. 

ತಾಲೂಕಿಗೆ ಜಿಲ್ಲಾ ಆಸ್ಪತ್ರೆ ತರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ನೇತೃತ್ವದ ಕಾಂಗ್ರೆಸ್ ಸರ್ಕಾರ ಕಾರಣವಾಗಿತ್ತು, ಅದು ಮುಂದುವರೆದು ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ಅನುಮೋದನೆ ದೊರಕಿತು. ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಡಿಯೂರಪ್ಪರ ನಾಲ್ಕು ಸಲ ಮನವಿ‌ ಮಾಡಿದರು ಸ್ಪಂದಿಸದೆ ಬಾಕಿ ಉಳಿದಿದೆ.

ಕರೊನಾ ಮೂರನೆ ಅಲೆಯ ಮಕ್ಕಳಿಗೆ ಬರುವ ಆತಂಕ ಎದುರಾಗಿದೆ. ನಮ್ಮ ತಾಲೂಕಿನಲ್ಲಿ ಮೆಡಿಕಲ್ ಕಾಲೇಜು ಇಲ್ಲದ ಕಾರಣ ಉಸ್ತುವಾರಿ ಸಚಿವರಾಗಿದ್ದ ಆರ್.ಅಶೋಕ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರಿಗೆ ಮನವಿ ಮಾಡಿ ಮೇಕ್ ಶಿಫ್ಟ್ ಆಸ್ಪತ್ರೆ ಮಾಡಲಾಗಿದೆ. ಇದೂ ಸಹ ಕೇಂದ್ರ ರಾಜ್ಯ ಸರ್ಕಾರದ ಅನುದಾನವಲ್ಲ. ಕೈಗಾರಿಕೆಗಳು ಜನಪರ ಕಾರ್ಯಕ್ಕೆ ಇಂತಿಷ್ಟು ಹಣ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ ಜಾರಿ ಮಾಡಿದ ಕಾನೂನು ಕಾರಣ ಎಂದರು.

2013ರ ಚುನಾವಣೆಯಲ್ಲಿ ಆಯ್ಕೆಯಾದ ನಂತರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೈಗೊಂಡ ಕಾರ್ಯ ನಿಮ್ಮ ಮುಂದಿದೆ. ವಸತಿ ನಿಲಯಗಳು ಪೂರ್ಣಗೊಂಡಿವೆ,ಪಿಂಚಣಿ, ಪಡಿತರ ಕಾರ್ಡ್ ಭರಪೂರ ನೀಡಿ ತಾಲೂಕಿನ ಜನತೆಗೆ ನೀಡಲಾಗಿದೆ. 

ಸವಿತ ಸಮಾಜದ ಭವನ‌ ಕಾಮಗಾರಿ ಪೂರ್ಣಗೊಳ್ಳಲು ತಮ್ಮದೇ ಸಮಾಜದ ವ್ಯಕ್ತಿಯೋರ್ವ ಅಡ್ಡಿಯಾಗಿದ್ದರಿಂದ ತಡೆಯಾಗಿದೆ. ಸರ್ಕಾರದ ಅನುದಾನ ಬಿಡುಗಡೆ ಮಾಡಲು ಹಲವು ಪ್ರಯತ್ನ ನಡೆಸಿದ್ದು ಕೆಲವೆ ದಿನಗಳಲ್ಲಿ ಅನುದಾನ ದೊರಕಲಿದೆ‌. ಅದಲ್ಲದೆ ಮುಂದಿನ ವರ್ಷಗಳಲ್ಲಿ ಹೆಚ್ಚಿನ ಅನುದಾನ ನೀಡಿ ಭವನ  ‌ಪೂರ್ಣ ಗೊಳಿಸಲಾಗುವುದೆಂದರು.

ವಿಧಾನಪರಿಷತ್ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಸಿ.ವೇಣುಗೋಪಾಲ್ ಮಾತನಾಡಿ, 224 ಕ್ಷೇತ್ರಗಳಿಗೆ ಮಾದರಿ ಶಾಸಕ ಟಿ.ವೆಂಕಟರಮಣಯ್ಯ. ಮುಂದುವರಿದ ಸಮುದಾಯದ ಕೆಲ ನಾಯಕರಲ್ಲಿನ ದರ್ಪ ಈ ವ್ಯಕ್ತಿಯಲ್ಲಿ ಇಲ್ಲವಾಗಿದೆ. ಸವಿತ ಸಮಾಜ ಸಮುದಾಯ ಶಾಸಕ ವೆಂಕಟರಮಣಯ್ಯ ಅಂತಹ ಜನಪರ ಕಾಳಜಿ ಇರುವ ಜನ ಪ್ರತಿನಿಧಿಗಳ ಬೆಂಬಲವಾಗಿ ನಿಲ್ಲಬೇಕಿದೆ ಎಂದರು. 

ಕಾಂಗ್ರೆಸ್ ಹಿರಿಯ ಮುಖಂಡ  ಹೇಮಂತರಾಜು ಮಾತನಾಡಿ, ರಾಜ್ಯ ಸರ್ಕಾರ ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಲಾಕ್‍ಡೌನ್ ಕಾರಣ ಸಂಕಷ್ಟದಲ್ಲಿರುವ ಜನರಿಗೆ ಅಡುಗೆ ಅನಿಲ, ಡಿಸೆಲ್ ಪೆಟ್ರೋಲ್, ಅಡುಗೆ ಎಣ್ಣೆ ಸೇರಿದಂತೆ ಬೆಲೆ ಏರಿಕೆಯ ಕಾಣಿಕೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ. ಜನತೆ ಜನರ ಸಂಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕಿದೆ. ಲಾಕ್‍ಡೌನ್ ಕಷ್ಟದಲ್ಲಿ ತಾಲೂಕಿನ ಜನರ ಕಷ್ಟಕ್ಕೆ ನಿರಂತರ ಅನ್ನದಾಸೋಹ, ಆಹಾರ ಕಿಟ್ ವಿತರಿಸಿ ಜನರ ಕಷ್ಟಕ್ಕೆ ನೆರವಾಗಿರುವ ಶಾಸಕ ಟಿ.ವೆಂಕಟರಮಣಯ್ಯ ಅವರ ಜನಪರ ಕಾಳಜಿಯನ್ನು ತಾಲೂಕಿನ ಜನತೆ ಮನಗಾಣಬೇಕಿದೆ ಎಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು, ನಗರ ಬ್ಲಾಕ್ ಅಧ್ಯಕ್ಷ ಕೆ.ಪಿ.ಜಗನಾಥ್, ಹಿರಿಯ ಮುಖಂಡರಾದ ಕೆಂಪಣ್ಣ ಮಾತನಾಡಿದರು.

ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಸತ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ಸವಿತಾ ಸಮಾಜದ ಹಿರಿಯ ಮುಖಂಡರಾದ ರಾಮಾಂಜಿನಯ್ಯ, ಮುಖಂಡರಾದ ಸೋಮರುದ್ರ ಶರ್ಮ, ಮಜರಾಹೊಸಹಳ್ಳಿ ಗ್ರಾಪಂ‌ ಅಧ್ಯಕ್ಷ ಸಂದೇಶ್, ಆದಿತ್ಯ ನಾಗೇಶ್, ರೇವತಿ ಅನಂತರಾಮ್, ಆಂಜನಮೂರ್ತಿ, ಅಖಿಲೇಶ್, ಅಪ್ಪಿವೆಂಕಟೇಶ್, ನಾಗರತ್ನಮ್ಮ, ಶ್ರೀನಗರ ಬಶೀರ್, ಪು.ಮಹೇಶ್,  ಕುಮುದಾ, ಅಮರ್ ನಾಥ್ ಭೀಮರಾಜ್, ರೇಣುಕಾ, ಮಡಿವಾಳ ಸಂಘದ ಅಧ್ಯಕ್ಷ ರಂಗಸ್ವಾಮಿ ಮತ್ತಿತರಿದ್ದರು.

ಈ ಸಂದರ್ಭದಲ್ಲಿ 350 ದಿನಸಿ ಕಿಟ್ ವಿತರಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ

"ಯಾರೇ ಆದರೂ ಕಾನೂನು ಕೈಗೆತ್ತಿಕೊಳ್ಳಲು ಆಗುವುದಿಲ್ಲ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಸದ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

[ccc_my_favorite_select_button post_id="119538"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!