70 ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರದಿಂದ ಮನೆಯ ಮಗುವಿನಂತೆ ದೇಶದ ಆಳ್ವಿಕೆ: ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ದೇಶದಲ್ಲಿ ಯಾವುದೇ ಅಭಿವೃದ್ದಿ ಇಲ್ಲದಿದ್ದರೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದೇಶವನ್ನು ಸಾಲದ ಕೂಪಕ್ಕೆ ತಳ್ಳುತ್ತಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಆತಂಕ ವ್ಯಕ್ತಪಡಿಸಿದರು.

ಕರೊನಾ ಸೋಂಕನ್ನು ತಡೆಗಟ್ಟಲು ಘೋಷಿಸಲಾದ ಲಾಕ್‍ಡೌನ್ ಕಾರಣ ಸಂಕಷ್ಟಕ್ಕೆ ಒಳಗಾದ ಸವಿತಾ ಸಮಾಜದ ನಾದಸ್ವರ, ಡೋಲು ಕಲಾವಿದರಿಗೆ ಹಾಗೂ ಕ್ಷೌರಿಕ ಕಾರ್ಮಿಕರಿಗೆ ನಗರದ ಸವಿತ ಸಮಾಜ ಭವನದಲ್ಲಿ ದಿನಸಿ ಕಿಟ್ ವಿತರಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ನಂತರ ದೇಶದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ 70 ವರ್ಷಗಳ ಕಾಲ ಮನೆಯ ಮಗುವನ್ನು ಕಾಪಾಡಿದಂತೆ ದೇಶದಲ್ಲಿ ಆಳ್ವಿಕೆ ನಡೆಸಿದೆ. ಶಿಕ್ಷಣ ಕ್ಷೇತ್ರ, ನೀರಾವರಿ, ಕೈಗಾರಿಕೆ ಸ್ಥಾಪನೆ ಮಾಡಿ‌ ಉದ್ಯೋಗ್ಯ ಸೃಷ್ಟಿ ಮಾಡಿತ್ತು. ಆದರೀಗಾ ಎಲ್ಲವೂ ನಶಿಸಿ ಹೋಗುತ್ತಿದೆ. 

ತಾಲೂಕಿಗೆ ಜಿಲ್ಲಾ ಆಸ್ಪತ್ರೆ ತರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ನೇತೃತ್ವದ ಕಾಂಗ್ರೆಸ್ ಸರ್ಕಾರ ಕಾರಣವಾಗಿತ್ತು, ಅದು ಮುಂದುವರೆದು ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ಅನುಮೋದನೆ ದೊರಕಿತು. ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಡಿಯೂರಪ್ಪರ ನಾಲ್ಕು ಸಲ ಮನವಿ‌ ಮಾಡಿದರು ಸ್ಪಂದಿಸದೆ ಬಾಕಿ ಉಳಿದಿದೆ.

ಕರೊನಾ ಮೂರನೆ ಅಲೆಯ ಮಕ್ಕಳಿಗೆ ಬರುವ ಆತಂಕ ಎದುರಾಗಿದೆ. ನಮ್ಮ ತಾಲೂಕಿನಲ್ಲಿ ಮೆಡಿಕಲ್ ಕಾಲೇಜು ಇಲ್ಲದ ಕಾರಣ ಉಸ್ತುವಾರಿ ಸಚಿವರಾಗಿದ್ದ ಆರ್.ಅಶೋಕ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರಿಗೆ ಮನವಿ ಮಾಡಿ ಮೇಕ್ ಶಿಫ್ಟ್ ಆಸ್ಪತ್ರೆ ಮಾಡಲಾಗಿದೆ. ಇದೂ ಸಹ ಕೇಂದ್ರ ರಾಜ್ಯ ಸರ್ಕಾರದ ಅನುದಾನವಲ್ಲ. ಕೈಗಾರಿಕೆಗಳು ಜನಪರ ಕಾರ್ಯಕ್ಕೆ ಇಂತಿಷ್ಟು ಹಣ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ ಜಾರಿ ಮಾಡಿದ ಕಾನೂನು ಕಾರಣ ಎಂದರು.

2013ರ ಚುನಾವಣೆಯಲ್ಲಿ ಆಯ್ಕೆಯಾದ ನಂತರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೈಗೊಂಡ ಕಾರ್ಯ ನಿಮ್ಮ ಮುಂದಿದೆ. ವಸತಿ ನಿಲಯಗಳು ಪೂರ್ಣಗೊಂಡಿವೆ,ಪಿಂಚಣಿ, ಪಡಿತರ ಕಾರ್ಡ್ ಭರಪೂರ ನೀಡಿ ತಾಲೂಕಿನ ಜನತೆಗೆ ನೀಡಲಾಗಿದೆ. 

ಸವಿತ ಸಮಾಜದ ಭವನ‌ ಕಾಮಗಾರಿ ಪೂರ್ಣಗೊಳ್ಳಲು ತಮ್ಮದೇ ಸಮಾಜದ ವ್ಯಕ್ತಿಯೋರ್ವ ಅಡ್ಡಿಯಾಗಿದ್ದರಿಂದ ತಡೆಯಾಗಿದೆ. ಸರ್ಕಾರದ ಅನುದಾನ ಬಿಡುಗಡೆ ಮಾಡಲು ಹಲವು ಪ್ರಯತ್ನ ನಡೆಸಿದ್ದು ಕೆಲವೆ ದಿನಗಳಲ್ಲಿ ಅನುದಾನ ದೊರಕಲಿದೆ‌. ಅದಲ್ಲದೆ ಮುಂದಿನ ವರ್ಷಗಳಲ್ಲಿ ಹೆಚ್ಚಿನ ಅನುದಾನ ನೀಡಿ ಭವನ  ‌ಪೂರ್ಣ ಗೊಳಿಸಲಾಗುವುದೆಂದರು.

ವಿಧಾನಪರಿಷತ್ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಸಿ.ವೇಣುಗೋಪಾಲ್ ಮಾತನಾಡಿ, 224 ಕ್ಷೇತ್ರಗಳಿಗೆ ಮಾದರಿ ಶಾಸಕ ಟಿ.ವೆಂಕಟರಮಣಯ್ಯ. ಮುಂದುವರಿದ ಸಮುದಾಯದ ಕೆಲ ನಾಯಕರಲ್ಲಿನ ದರ್ಪ ಈ ವ್ಯಕ್ತಿಯಲ್ಲಿ ಇಲ್ಲವಾಗಿದೆ. ಸವಿತ ಸಮಾಜ ಸಮುದಾಯ ಶಾಸಕ ವೆಂಕಟರಮಣಯ್ಯ ಅಂತಹ ಜನಪರ ಕಾಳಜಿ ಇರುವ ಜನ ಪ್ರತಿನಿಧಿಗಳ ಬೆಂಬಲವಾಗಿ ನಿಲ್ಲಬೇಕಿದೆ ಎಂದರು. 

ಕಾಂಗ್ರೆಸ್ ಹಿರಿಯ ಮುಖಂಡ  ಹೇಮಂತರಾಜು ಮಾತನಾಡಿ, ರಾಜ್ಯ ಸರ್ಕಾರ ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಲಾಕ್‍ಡೌನ್ ಕಾರಣ ಸಂಕಷ್ಟದಲ್ಲಿರುವ ಜನರಿಗೆ ಅಡುಗೆ ಅನಿಲ, ಡಿಸೆಲ್ ಪೆಟ್ರೋಲ್, ಅಡುಗೆ ಎಣ್ಣೆ ಸೇರಿದಂತೆ ಬೆಲೆ ಏರಿಕೆಯ ಕಾಣಿಕೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ. ಜನತೆ ಜನರ ಸಂಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕಿದೆ. ಲಾಕ್‍ಡೌನ್ ಕಷ್ಟದಲ್ಲಿ ತಾಲೂಕಿನ ಜನರ ಕಷ್ಟಕ್ಕೆ ನಿರಂತರ ಅನ್ನದಾಸೋಹ, ಆಹಾರ ಕಿಟ್ ವಿತರಿಸಿ ಜನರ ಕಷ್ಟಕ್ಕೆ ನೆರವಾಗಿರುವ ಶಾಸಕ ಟಿ.ವೆಂಕಟರಮಣಯ್ಯ ಅವರ ಜನಪರ ಕಾಳಜಿಯನ್ನು ತಾಲೂಕಿನ ಜನತೆ ಮನಗಾಣಬೇಕಿದೆ ಎಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು, ನಗರ ಬ್ಲಾಕ್ ಅಧ್ಯಕ್ಷ ಕೆ.ಪಿ.ಜಗನಾಥ್, ಹಿರಿಯ ಮುಖಂಡರಾದ ಕೆಂಪಣ್ಣ ಮಾತನಾಡಿದರು.

ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಸತ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ಸವಿತಾ ಸಮಾಜದ ಹಿರಿಯ ಮುಖಂಡರಾದ ರಾಮಾಂಜಿನಯ್ಯ, ಮುಖಂಡರಾದ ಸೋಮರುದ್ರ ಶರ್ಮ, ಮಜರಾಹೊಸಹಳ್ಳಿ ಗ್ರಾಪಂ‌ ಅಧ್ಯಕ್ಷ ಸಂದೇಶ್, ಆದಿತ್ಯ ನಾಗೇಶ್, ರೇವತಿ ಅನಂತರಾಮ್, ಆಂಜನಮೂರ್ತಿ, ಅಖಿಲೇಶ್, ಅಪ್ಪಿವೆಂಕಟೇಶ್, ನಾಗರತ್ನಮ್ಮ, ಶ್ರೀನಗರ ಬಶೀರ್, ಪು.ಮಹೇಶ್,  ಕುಮುದಾ, ಅಮರ್ ನಾಥ್ ಭೀಮರಾಜ್, ರೇಣುಕಾ, ಮಡಿವಾಳ ಸಂಘದ ಅಧ್ಯಕ್ಷ ರಂಗಸ್ವಾಮಿ ಮತ್ತಿತರಿದ್ದರು.

ಈ ಸಂದರ್ಭದಲ್ಲಿ 350 ದಿನಸಿ ಕಿಟ್ ವಿತರಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಬೇಸರ ಬದಿಗೊತ್ತಿ ದೊಡ್ಡಬಳ್ಳಾಪುರದ ಜೆಡಿಎಸ್ ಶಕ್ತಿ ತೋರಬೇಕಿದೆ: ಹರೀಶ್ ಗೌಡ ಮನವಿ

ಬೇಸರ ಬದಿಗೊತ್ತಿ ದೊಡ್ಡಬಳ್ಳಾಪುರದ ಜೆಡಿಎಸ್ ಶಕ್ತಿ ತೋರಬೇಕಿದೆ: ಹರೀಶ್ ಗೌಡ ಮನವಿ

ಸೋಲಿನ ಹತಾಶೆ, ಪಕ್ಷದ ಆಂತರಿಕ ಮಟ್ಟದಲ್ಲಿನ ಯಾವುದೇ ಬೇಸರ ಇದ್ದರೂ ಬದಿಗೊತ್ತಿ, ಮುಖಂಡರು, ಕಾರ್ಯಕರ್ತರು ಮುಂಬರುವ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿರುವ ಜೆಡಿಎಸ್ (JDS) ಪಕ್ಷದ ಶಕ್ತಿಯನ್ನು ತೋರುವ ಅನಿರ್ವಾರ್ಯತೆ ಎದುರಾಗಿದೆ ಎಂದು ಜೆಡಿಎಸ್ ಹಿರಿಯ

[ccc_my_favorite_select_button post_id="118211"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಹತ್ಯೆ ಶಂಕೆ (Murder (Suspected) ವ್ಯಕ್ತವಾಗಿದೆ.

[ccc_my_favorite_select_button post_id="118057"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!