ಕರೊನಾ ಸೋಂಕು ತಡೆಯಲ್ಲಿ ಪೊಲೀಸ್ ಸಿಬ್ಬಂದಿಯ ಕರ್ತವ್ಯ ಶ್ಲಾಘನೀಯ: ಡಾ.ಮೇಜರ್ ವಿಜೇತ

ದೊಡ್ಡಬಳ್ಳಾಪುರ: ಕೋವಿಡ್ ಸಾಂಕ್ರಾಮಿಕ ರೋಗದ ಸಂಕಷ್ಟದ ಈ ದಿನಗಳಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೊಲೀಸ್ ಸಿಬ್ಬಂದಿಯ ಶ್ರಮವು ಶ್ಲಾಘನೀಯ ಎಂದು ಕನಸವಾಡಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಮೇಜರ್ ವಿಜೇತ ಹೇಳಿದರು.

ನಗರದ ಪೊಲೀಸ್ ಠಾಣೆ ಆವರಣದಲ್ಲಿನ ಪೊಲೀಸ್ ಉಪವಿಭಾಗದ ಸಭಾಂಗಣದಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಗಳಿಗಾಗಿ ನಡೆದ ಆರೋಗ್ಯ ಕುರಿತಂತೆ ಕೈಗೊಳ್ಳಬೇಕಿರುವ ಎಚ್ಚರಿಕೆಗಳ ಬಗ್ಗೆ ತಿಳುವಳಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೈದ್ಯರಂತೆ ರಾತ್ರಿ ಹಗಲೆನ್ನದೆ ಪೊಲೀಸರು ಕರ್ತವ್ಯ ನಿರ್ವಹಿಸುವ ಮೂಲಕ ಸೋಂಕು ಹರಡದಂತೆ ತಡೆಯುವಲ್ಲಿ ಕೆಲಸ ಮಾಡಿದರು. ಈಗ ಮತ್ತೆ ಕೋವಿಡ್ ಮೂರನೇ ಅಲೆಯ ಸೋಂಕು ಹರಡುವ ಅಪಾಯಗಳು ಎದುರಾಗುತ್ತಿವೆ. 2ನೇ ಅಲೆಯಲ್ಲಿ ಸಾಕಷ್ಟು ಸಾವುಗಳು ಸಂಭವಿಸಿವೆ. ಇದರಲ್ಲಿ ಪೊಲೀಸ್ ಸಿಬ್ಬಂದಿಯು ಸಹ ಮೃತರಾಗಿದ್ದಾರೆ. ಮೂರನೇ ಅಲೆ ಎದುರಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಇಡೀ ದಿನ ಮಾಸ್ಕ್ ಧರಿಸುವಾಗ ಉಸಿರಾಟಕ್ಕೆ ತೊಂದರೆಯಾಗದಂತೆ ಎಚ್ಚರವಹಿಸಬೇಕು. ಕೈಗಳ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ಕಡೆಗೆ ಆದ್ಯತೆ ನೀಡಬೇಕು. 50 ವರ್ಷ ಮೇಲ್ಪಟ್ಟ ಸಿಬ್ಬಂದಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ  ಕರ್ತವ್ಯ ನಿರ್ವಹಿಸುವಾಗ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು ಎಂದರು. 

ಡಿವೈಎಸ್ಪಿ ಟಿ.ರಂಗಪ್ಪ ಮಾತನಾಡಿ, ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಹೇಗೆ ಕರ್ತವ್ಯ ನಿರ್ವಹಿಸಬೇಕು, ಯಾವ ನಿಯಮಗಳನ್ನು ಪಾಲಿಸಬೇಕು ಎನ್ನುವುದು ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಹೊಸ ಅನುಭವ. ಆದರೆ ಇದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಹೆಮ್ಮೆ ಪೊಲೀಸ್ ಇಲಾಖೆಗೆ ಇದೆ ಎಂದರು.

ಕುಟುಂಬದ ಎಲ್ಲರೂ ಮನೆಯಲ್ಲಿಯೇ ಇರುವಂತೆ ಮಾಡಿದ್ದ ಲಾಕ್‍ಡೌನ್ ಹಲವಾರು ಕೌಟಂಬಿಕ ಸಮಸ್ಯೆಗಳನ್ನು ಸೃಷ್ಠಿಸಿದೆ. ಮಕ್ಕಳು, ಮಹಿಳೆಯರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೂರುಗಳೊಂದಿಗೆ ಪೊಲೀಸ್ ಠಾಣೆಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುವ ಮೂಲಕ ಅನ್ಯಾಯಕ್ಕೆ ಒಳಗಾದವರಿಗೆ ಸೂಕ್ತ ನ್ಯಾಯ ದೊರಕಿಸಿಕೊಡುವ ಗುರುತರವಾದ ಹೊಣೆಗಾರಿಕೆ ನಮ್ಮ ಇಲಾಖೆಯ ಮೇಲಿದೆ. ಇಲಾಖೆಯಲ್ಲಿನ ಕಾನೂನುಗಳನ್ನು ಜಾರಿಮಾಡುವಾಗ ನೊಂದವರ ಪರವಾಗಿ ನಿಲ್ಲಬೇಕು ಎಂದರು.      

ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಮಾತನಾಡಿ, ಸಾರ್ವಜನಿಕರೊಂದಿಗೆ ಚರ್ಚಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗೆ ಮುಖ್ಯವಾಗಿ ಸಂವಹನ ಕೌಶಲ್ಯ ಅಗತ್ಯ. ನಮ್ಮ ಮಾತಿನ ಕಲೆಯಿಂದ ಯಾವುದೇ ಕ್ಲಿಷ್ಟಕರವಾದ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದಾಗಿದೆ. ಜನ್ನ ಸ್ನೇಹಿ ಪೊಲೀಸ್ ವ್ಯವಸ್ಥೆಯಲ್ಲಿ ಭಾಷಾ ಬಳಕೆ ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ಹಕ್ಕು ಹಾಗೂ ಕರ್ತವ್ಯಗಳನ್ನು ನಮ್ಮ ಸಂವಿಧಾನ ನೀಡಿದೆ.ಇದನ್ನು ಸದಾ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಿದೆ. ಸಿಬ್ಬಂದಿಗಳು ತಮ್ಮ ಕುಟುಂಬದಲ್ಲಿನ ಒತ್ತಡವನ್ನು ಕೆಲಸದಲ್ಲಿ ತರದೇ ಕರ್ತವ್ಯ ನಿರ್ವಹಿಸುವುದನ್ನು ಅಭ್ಯಾಸಮಾಡಿಕೊಳ್ಳಬೇಕು. ಬೆಳಗಿನ ಸಮಯದಲ್ಲಿ ಯೋಗಾ, ಧ್ಯಾನ ಮಾಡುವುದು ಆರೋಗ್ಯದ ದೃಷ್ಠಿಯಿಂದಲು ಉತ್ತಮವಾಗಲಿದೆ ಎಂದರು.

ಸಭೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸತೀಶ್ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..ರೊನಾ ಸೋಂಕು ತಡೆಯಲ್ಲಿ ಪೊಲೀಸ್ ಸಿಬ್ಬಂದಿಯ ಕರ್ತವ್ಯ ಶ್ಲಾಘನೀಯ: ಡಾ.ಮೇಜರ್ ವಿಜೇತ

ದೊಡ್ಡಬಳ್ಳಾಪುರ: ಕೋವಿಡ್ ಸಾಂಕ್ರಾಮಿಕ ರೋಗದ ಸಂಕಷ್ಟದ ಈ ದಿನಗಳಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೊಲೀಸ್ ಸಿಬ್ಬಂದಿಯ ಶ್ರಮವು ಶ್ಲಾಘನೀಯ ಎಂದು ಕನಸವಾಡಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಮೇಜರ್ ವಿಜೇತ ಹೇಳಿದರು.

ನಗರದ ಪೊಲೀಸ್ ಠಾಣೆ ಆವರಣದಲ್ಲಿನ ಪೊಲೀಸ್ ಉಪವಿಭಾಗದ ಸಭಾಂಗಣದಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಗಳಿಗಾಗಿ ನಡೆದ ಆರೋಗ್ಯ ಕುರಿತಂತೆ ಕೈಗೊಳ್ಳಬೇಕಿರುವ ಎಚ್ಚರಿಕೆಗಳ ಬಗ್ಗೆ ತಿಳುವಳಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೈದ್ಯರಂತೆ ರಾತ್ರಿ ಹಗಲೆನ್ನದೆ ಪೊಲೀಸರು ಕರ್ತವ್ಯ ನಿರ್ವಹಿಸುವ ಮೂಲಕ ಸೋಂಕು ಹರಡದಂತೆ ತಡೆಯುವಲ್ಲಿ ಕೆಲಸ ಮಾಡಿದರು. ಈಗ ಮತ್ತೆ ಕೋವಿಡ್ ಮೂರನೇ ಅಲೆಯ ಸೋಂಕು ಹರಡುವ ಅಪಾಯಗಳು ಎದುರಾಗುತ್ತಿವೆ. 2ನೇ ಅಲೆಯಲ್ಲಿ ಸಾಕಷ್ಟು ಸಾವುಗಳು ಸಂಭವಿಸಿವೆ. ಇದರಲ್ಲಿ ಪೊಲೀಸ್ ಸಿಬ್ಬಂದಿಯು ಸಹ ಮೃತರಾಗಿದ್ದಾರೆ. ಮೂರನೇ ಅಲೆ ಎದುರಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಇಡೀ ದಿನ ಮಾಸ್ಕ್ ಧರಿಸುವಾಗ ಉಸಿರಾಟಕ್ಕೆ ತೊಂದರೆಯಾಗದಂತೆ ಎಚ್ಚರವಹಿಸಬೇಕು. ಕೈಗಳ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ಕಡೆಗೆ ಆದ್ಯತೆ ನೀಡಬೇಕು. 50 ವರ್ಷ ಮೇಲ್ಪಟ್ಟ ಸಿಬ್ಬಂದಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ  ಕರ್ತವ್ಯ ನಿರ್ವಹಿಸುವಾಗ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು ಎಂದರು. 

ಡಿವೈಎಸ್ಪಿ ಟಿ.ರಂಗಪ್ಪ ಮಾತನಾಡಿ, ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಹೇಗೆ ಕರ್ತವ್ಯ ನಿರ್ವಹಿಸಬೇಕು, ಯಾವ ನಿಯಮಗಳನ್ನು ಪಾಲಿಸಬೇಕು ಎನ್ನುವುದು ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಹೊಸ ಅನುಭವ. ಆದರೆ ಇದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಹೆಮ್ಮೆ ಪೊಲೀಸ್ ಇಲಾಖೆಗೆ ಇದೆ ಎಂದರು.

ಕುಟುಂಬದ ಎಲ್ಲರೂ ಮನೆಯಲ್ಲಿಯೇ ಇರುವಂತೆ ಮಾಡಿದ್ದ ಲಾಕ್‍ಡೌನ್ ಹಲವಾರು ಕೌಟಂಬಿಕ ಸಮಸ್ಯೆಗಳನ್ನು ಸೃಷ್ಠಿಸಿದೆ. ಮಕ್ಕಳು, ಮಹಿಳೆಯರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೂರುಗಳೊಂದಿಗೆ ಪೊಲೀಸ್ ಠಾಣೆಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುವ ಮೂಲಕ ಅನ್ಯಾಯಕ್ಕೆ ಒಳಗಾದವರಿಗೆ ಸೂಕ್ತ ನ್ಯಾಯ ದೊರಕಿಸಿಕೊಡುವ ಗುರುತರವಾದ ಹೊಣೆಗಾರಿಕೆ ನಮ್ಮ ಇಲಾಖೆಯ ಮೇಲಿದೆ. ಇಲಾಖೆಯಲ್ಲಿನ ಕಾನೂನುಗಳನ್ನು ಜಾರಿಮಾಡುವಾಗ ನೊಂದವರ ಪರವಾಗಿ ನಿಲ್ಲಬೇಕು ಎಂದರು.      

ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಮಾತನಾಡಿ, ಸಾರ್ವಜನಿಕರೊಂದಿಗೆ ಚರ್ಚಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗೆ ಮುಖ್ಯವಾಗಿ ಸಂವಹನ ಕೌಶಲ್ಯ ಅಗತ್ಯ. ನಮ್ಮ ಮಾತಿನ ಕಲೆಯಿಂದ ಯಾವುದೇ ಕ್ಲಿಷ್ಟಕರವಾದ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದಾಗಿದೆ. ಜನ್ನ ಸ್ನೇಹಿ ಪೊಲೀಸ್ ವ್ಯವಸ್ಥೆಯಲ್ಲಿ ಭಾಷಾ ಬಳಕೆ ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ಹಕ್ಕು ಹಾಗೂ ಕರ್ತವ್ಯಗಳನ್ನು ನಮ್ಮ ಸಂವಿಧಾನ ನೀಡಿದೆ.ಇದನ್ನು ಸದಾ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಿದೆ. ಸಿಬ್ಬಂದಿಗಳು ತಮ್ಮ ಕುಟುಂಬದಲ್ಲಿನ ಒತ್ತಡವನ್ನು ಕೆಲಸದಲ್ಲಿ ತರದೇ ಕರ್ತವ್ಯ ನಿರ್ವಹಿಸುವುದನ್ನು ಅಭ್ಯಾಸಮಾಡಿಕೊಳ್ಳಬೇಕು. ಬೆಳಗಿನ ಸಮಯದಲ್ಲಿ ಯೋಗಾ, ಧ್ಯಾನ ಮಾಡುವುದು ಆರೋಗ್ಯದ ದೃಷ್ಠಿಯಿಂದಲು ಉತ್ತಮವಾಗಲಿದೆ ಎಂದರು.

ಸಭೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸತೀಶ್ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!