ಕರೊನಾ ಸೋಂಕು ತಡೆಯಲ್ಲಿ ಪೊಲೀಸ್ ಸಿಬ್ಬಂದಿಯ ಕರ್ತವ್ಯ ಶ್ಲಾಘನೀಯ: ಡಾ.ಮೇಜರ್ ವಿಜೇತ

ದೊಡ್ಡಬಳ್ಳಾಪುರ: ಕೋವಿಡ್ ಸಾಂಕ್ರಾಮಿಕ ರೋಗದ ಸಂಕಷ್ಟದ ಈ ದಿನಗಳಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೊಲೀಸ್ ಸಿಬ್ಬಂದಿಯ ಶ್ರಮವು ಶ್ಲಾಘನೀಯ ಎಂದು ಕನಸವಾಡಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಮೇಜರ್ ವಿಜೇತ ಹೇಳಿದರು.

ನಗರದ ಪೊಲೀಸ್ ಠಾಣೆ ಆವರಣದಲ್ಲಿನ ಪೊಲೀಸ್ ಉಪವಿಭಾಗದ ಸಭಾಂಗಣದಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಗಳಿಗಾಗಿ ನಡೆದ ಆರೋಗ್ಯ ಕುರಿತಂತೆ ಕೈಗೊಳ್ಳಬೇಕಿರುವ ಎಚ್ಚರಿಕೆಗಳ ಬಗ್ಗೆ ತಿಳುವಳಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೈದ್ಯರಂತೆ ರಾತ್ರಿ ಹಗಲೆನ್ನದೆ ಪೊಲೀಸರು ಕರ್ತವ್ಯ ನಿರ್ವಹಿಸುವ ಮೂಲಕ ಸೋಂಕು ಹರಡದಂತೆ ತಡೆಯುವಲ್ಲಿ ಕೆಲಸ ಮಾಡಿದರು. ಈಗ ಮತ್ತೆ ಕೋವಿಡ್ ಮೂರನೇ ಅಲೆಯ ಸೋಂಕು ಹರಡುವ ಅಪಾಯಗಳು ಎದುರಾಗುತ್ತಿವೆ. 2ನೇ ಅಲೆಯಲ್ಲಿ ಸಾಕಷ್ಟು ಸಾವುಗಳು ಸಂಭವಿಸಿವೆ. ಇದರಲ್ಲಿ ಪೊಲೀಸ್ ಸಿಬ್ಬಂದಿಯು ಸಹ ಮೃತರಾಗಿದ್ದಾರೆ. ಮೂರನೇ ಅಲೆ ಎದುರಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಇಡೀ ದಿನ ಮಾಸ್ಕ್ ಧರಿಸುವಾಗ ಉಸಿರಾಟಕ್ಕೆ ತೊಂದರೆಯಾಗದಂತೆ ಎಚ್ಚರವಹಿಸಬೇಕು. ಕೈಗಳ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ಕಡೆಗೆ ಆದ್ಯತೆ ನೀಡಬೇಕು. 50 ವರ್ಷ ಮೇಲ್ಪಟ್ಟ ಸಿಬ್ಬಂದಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ  ಕರ್ತವ್ಯ ನಿರ್ವಹಿಸುವಾಗ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು ಎಂದರು. 

ಡಿವೈಎಸ್ಪಿ ಟಿ.ರಂಗಪ್ಪ ಮಾತನಾಡಿ, ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಹೇಗೆ ಕರ್ತವ್ಯ ನಿರ್ವಹಿಸಬೇಕು, ಯಾವ ನಿಯಮಗಳನ್ನು ಪಾಲಿಸಬೇಕು ಎನ್ನುವುದು ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಹೊಸ ಅನುಭವ. ಆದರೆ ಇದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಹೆಮ್ಮೆ ಪೊಲೀಸ್ ಇಲಾಖೆಗೆ ಇದೆ ಎಂದರು.

ಕುಟುಂಬದ ಎಲ್ಲರೂ ಮನೆಯಲ್ಲಿಯೇ ಇರುವಂತೆ ಮಾಡಿದ್ದ ಲಾಕ್‍ಡೌನ್ ಹಲವಾರು ಕೌಟಂಬಿಕ ಸಮಸ್ಯೆಗಳನ್ನು ಸೃಷ್ಠಿಸಿದೆ. ಮಕ್ಕಳು, ಮಹಿಳೆಯರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೂರುಗಳೊಂದಿಗೆ ಪೊಲೀಸ್ ಠಾಣೆಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುವ ಮೂಲಕ ಅನ್ಯಾಯಕ್ಕೆ ಒಳಗಾದವರಿಗೆ ಸೂಕ್ತ ನ್ಯಾಯ ದೊರಕಿಸಿಕೊಡುವ ಗುರುತರವಾದ ಹೊಣೆಗಾರಿಕೆ ನಮ್ಮ ಇಲಾಖೆಯ ಮೇಲಿದೆ. ಇಲಾಖೆಯಲ್ಲಿನ ಕಾನೂನುಗಳನ್ನು ಜಾರಿಮಾಡುವಾಗ ನೊಂದವರ ಪರವಾಗಿ ನಿಲ್ಲಬೇಕು ಎಂದರು.      

ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಮಾತನಾಡಿ, ಸಾರ್ವಜನಿಕರೊಂದಿಗೆ ಚರ್ಚಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗೆ ಮುಖ್ಯವಾಗಿ ಸಂವಹನ ಕೌಶಲ್ಯ ಅಗತ್ಯ. ನಮ್ಮ ಮಾತಿನ ಕಲೆಯಿಂದ ಯಾವುದೇ ಕ್ಲಿಷ್ಟಕರವಾದ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದಾಗಿದೆ. ಜನ್ನ ಸ್ನೇಹಿ ಪೊಲೀಸ್ ವ್ಯವಸ್ಥೆಯಲ್ಲಿ ಭಾಷಾ ಬಳಕೆ ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ಹಕ್ಕು ಹಾಗೂ ಕರ್ತವ್ಯಗಳನ್ನು ನಮ್ಮ ಸಂವಿಧಾನ ನೀಡಿದೆ.ಇದನ್ನು ಸದಾ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಿದೆ. ಸಿಬ್ಬಂದಿಗಳು ತಮ್ಮ ಕುಟುಂಬದಲ್ಲಿನ ಒತ್ತಡವನ್ನು ಕೆಲಸದಲ್ಲಿ ತರದೇ ಕರ್ತವ್ಯ ನಿರ್ವಹಿಸುವುದನ್ನು ಅಭ್ಯಾಸಮಾಡಿಕೊಳ್ಳಬೇಕು. ಬೆಳಗಿನ ಸಮಯದಲ್ಲಿ ಯೋಗಾ, ಧ್ಯಾನ ಮಾಡುವುದು ಆರೋಗ್ಯದ ದೃಷ್ಠಿಯಿಂದಲು ಉತ್ತಮವಾಗಲಿದೆ ಎಂದರು.

ಸಭೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸತೀಶ್ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..ರೊನಾ ಸೋಂಕು ತಡೆಯಲ್ಲಿ ಪೊಲೀಸ್ ಸಿಬ್ಬಂದಿಯ ಕರ್ತವ್ಯ ಶ್ಲಾಘನೀಯ: ಡಾ.ಮೇಜರ್ ವಿಜೇತ

ದೊಡ್ಡಬಳ್ಳಾಪುರ: ಕೋವಿಡ್ ಸಾಂಕ್ರಾಮಿಕ ರೋಗದ ಸಂಕಷ್ಟದ ಈ ದಿನಗಳಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೊಲೀಸ್ ಸಿಬ್ಬಂದಿಯ ಶ್ರಮವು ಶ್ಲಾಘನೀಯ ಎಂದು ಕನಸವಾಡಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಮೇಜರ್ ವಿಜೇತ ಹೇಳಿದರು.

ನಗರದ ಪೊಲೀಸ್ ಠಾಣೆ ಆವರಣದಲ್ಲಿನ ಪೊಲೀಸ್ ಉಪವಿಭಾಗದ ಸಭಾಂಗಣದಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಗಳಿಗಾಗಿ ನಡೆದ ಆರೋಗ್ಯ ಕುರಿತಂತೆ ಕೈಗೊಳ್ಳಬೇಕಿರುವ ಎಚ್ಚರಿಕೆಗಳ ಬಗ್ಗೆ ತಿಳುವಳಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೈದ್ಯರಂತೆ ರಾತ್ರಿ ಹಗಲೆನ್ನದೆ ಪೊಲೀಸರು ಕರ್ತವ್ಯ ನಿರ್ವಹಿಸುವ ಮೂಲಕ ಸೋಂಕು ಹರಡದಂತೆ ತಡೆಯುವಲ್ಲಿ ಕೆಲಸ ಮಾಡಿದರು. ಈಗ ಮತ್ತೆ ಕೋವಿಡ್ ಮೂರನೇ ಅಲೆಯ ಸೋಂಕು ಹರಡುವ ಅಪಾಯಗಳು ಎದುರಾಗುತ್ತಿವೆ. 2ನೇ ಅಲೆಯಲ್ಲಿ ಸಾಕಷ್ಟು ಸಾವುಗಳು ಸಂಭವಿಸಿವೆ. ಇದರಲ್ಲಿ ಪೊಲೀಸ್ ಸಿಬ್ಬಂದಿಯು ಸಹ ಮೃತರಾಗಿದ್ದಾರೆ. ಮೂರನೇ ಅಲೆ ಎದುರಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಇಡೀ ದಿನ ಮಾಸ್ಕ್ ಧರಿಸುವಾಗ ಉಸಿರಾಟಕ್ಕೆ ತೊಂದರೆಯಾಗದಂತೆ ಎಚ್ಚರವಹಿಸಬೇಕು. ಕೈಗಳ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ಕಡೆಗೆ ಆದ್ಯತೆ ನೀಡಬೇಕು. 50 ವರ್ಷ ಮೇಲ್ಪಟ್ಟ ಸಿಬ್ಬಂದಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ  ಕರ್ತವ್ಯ ನಿರ್ವಹಿಸುವಾಗ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು ಎಂದರು. 

ಡಿವೈಎಸ್ಪಿ ಟಿ.ರಂಗಪ್ಪ ಮಾತನಾಡಿ, ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಹೇಗೆ ಕರ್ತವ್ಯ ನಿರ್ವಹಿಸಬೇಕು, ಯಾವ ನಿಯಮಗಳನ್ನು ಪಾಲಿಸಬೇಕು ಎನ್ನುವುದು ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಹೊಸ ಅನುಭವ. ಆದರೆ ಇದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಹೆಮ್ಮೆ ಪೊಲೀಸ್ ಇಲಾಖೆಗೆ ಇದೆ ಎಂದರು.

ಕುಟುಂಬದ ಎಲ್ಲರೂ ಮನೆಯಲ್ಲಿಯೇ ಇರುವಂತೆ ಮಾಡಿದ್ದ ಲಾಕ್‍ಡೌನ್ ಹಲವಾರು ಕೌಟಂಬಿಕ ಸಮಸ್ಯೆಗಳನ್ನು ಸೃಷ್ಠಿಸಿದೆ. ಮಕ್ಕಳು, ಮಹಿಳೆಯರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೂರುಗಳೊಂದಿಗೆ ಪೊಲೀಸ್ ಠಾಣೆಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುವ ಮೂಲಕ ಅನ್ಯಾಯಕ್ಕೆ ಒಳಗಾದವರಿಗೆ ಸೂಕ್ತ ನ್ಯಾಯ ದೊರಕಿಸಿಕೊಡುವ ಗುರುತರವಾದ ಹೊಣೆಗಾರಿಕೆ ನಮ್ಮ ಇಲಾಖೆಯ ಮೇಲಿದೆ. ಇಲಾಖೆಯಲ್ಲಿನ ಕಾನೂನುಗಳನ್ನು ಜಾರಿಮಾಡುವಾಗ ನೊಂದವರ ಪರವಾಗಿ ನಿಲ್ಲಬೇಕು ಎಂದರು.      

ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಮಾತನಾಡಿ, ಸಾರ್ವಜನಿಕರೊಂದಿಗೆ ಚರ್ಚಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗೆ ಮುಖ್ಯವಾಗಿ ಸಂವಹನ ಕೌಶಲ್ಯ ಅಗತ್ಯ. ನಮ್ಮ ಮಾತಿನ ಕಲೆಯಿಂದ ಯಾವುದೇ ಕ್ಲಿಷ್ಟಕರವಾದ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದಾಗಿದೆ. ಜನ್ನ ಸ್ನೇಹಿ ಪೊಲೀಸ್ ವ್ಯವಸ್ಥೆಯಲ್ಲಿ ಭಾಷಾ ಬಳಕೆ ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ಹಕ್ಕು ಹಾಗೂ ಕರ್ತವ್ಯಗಳನ್ನು ನಮ್ಮ ಸಂವಿಧಾನ ನೀಡಿದೆ.ಇದನ್ನು ಸದಾ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಿದೆ. ಸಿಬ್ಬಂದಿಗಳು ತಮ್ಮ ಕುಟುಂಬದಲ್ಲಿನ ಒತ್ತಡವನ್ನು ಕೆಲಸದಲ್ಲಿ ತರದೇ ಕರ್ತವ್ಯ ನಿರ್ವಹಿಸುವುದನ್ನು ಅಭ್ಯಾಸಮಾಡಿಕೊಳ್ಳಬೇಕು. ಬೆಳಗಿನ ಸಮಯದಲ್ಲಿ ಯೋಗಾ, ಧ್ಯಾನ ಮಾಡುವುದು ಆರೋಗ್ಯದ ದೃಷ್ಠಿಯಿಂದಲು ಉತ್ತಮವಾಗಲಿದೆ ಎಂದರು.

ಸಭೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸತೀಶ್ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!