ಜವಬ್ದಾರಿ ಮರೆತ ನೂತನ ಸಚಿವರಿಂದ ವಿಜಯೋತ್ಸವ, ಸನ್ಮಾನ ಸ್ವೀಕಾರ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬೇಸರ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟದ ಸಚಿವರಿಗೆ ತಾತ್ಕಾಲಿಕವಾಗಿ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿ, ಅಲ್ಲಿನ ಪ್ರವಾಹ ಪರಿಸ್ಥಿತಿ, ಕೋವಿಡ್‌ ಸ್ಥಿತಿಗಳ ನಿರ್ವಹಣೆ ಮಾಡುವಂತೆ ಸೂಚಿಸಿದ್ದರು. ಸಿಎಂ ಬೊಮ್ಮಾಯಿ ಅವರು ಸದಾಶಯದಿಂದ ಜವಾಬ್ದಾರಿ ನೀಡಿದರೆ, ಜವಾಬ್ದಾರಿ ಮರೆತ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ ಎಂದು‌ ಮಾಜಿ‌ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬಿಜೆಪಿ ತನ್ನ ಇಮೇಜ್‌ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಛಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹರವಾಗಬೇಕಿಲ್ಲ. ವಿಜಯೋತ್ಸವಗಳು ಬೇಕು, ಸನ್ಮಾನಗಳಾಗಬೇಕು.

ಹೊಸ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಹೋದಾಗ ಮಾಡಿಸಿಕೊಂಡ ಸನ್ಮಾನಗಳು, ವಿಜಯೋತ್ಸವ, ಅದ್ದೂರಿ ಸ್ವಾಗತ ಕಂಡು ಜನ ನಾಚಿಕೆಪಟ್ಟಿದ್ದಾರೆ, ಮರುಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾದರೂ, ಸರ್ಕಾರ ಮತ್ತು ಅದರ ವರ್ತನೆ ಬದಲಾದ ಭಾವನೆ ಯಾರಲ್ಲಿಯೂ ಕಾಣುತ್ತಿಲ್ಲ. ಸಿಎಂ ಬದಲಾದರೆ ಸಾಲದು ಸಿಎಂ ರೀತಿಯೇ ಸಚಿವರೂ ನಡೆದುಕೊಳ್ಳಬೇಕು.

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ, ನೆರೆ ಆತಂಕಗಳು ದೂರವಾಗಿಲ್ಲ. 3ನೇ ಅಲೆಯೊಂದು ಬಾಗಿಲ ಬಳಿಯಲ್ಲೇ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ಕೋವಿಡ್‌ ಪ್ರಕರಣಗಳೂ ಏರುತ್ತಿವೆ. ನೆರೆ ಆತಂಕವೂ ದೂರವಾಗಿಲ್ಲ. ಸಚಿವ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲಲ್ಲ. ಸೇವೆ ನೀಡಲು ಎಂಬುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ 'ಆಟಕ್ಕೆ ಮೂರು ಪಕ್ಷ,

[ccc_my_favorite_select_button post_id="118247"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!